ದಾವಣಗೆರೆ | ಭದ್ರಾ ಜಲಾಶಯದಿಂದ 100 ದಿನ ನೀರು ಹರಿಸಬೇಕು; ರೈತರ ಆಗ್ರಹ

Date:

ನೀರಾವರಿ ಇಲಾಖೆ ಕೊಟ್ಟ‌ ಮಾತಿನಂತೆ ಭದ್ರಾ ಜಲಾಶಯದಿಂದ 100 ದಿನಗಳ ಕಾಲ ನಿರಂತರ ನೀರು ಹರಿಸಬೇಕು. ಮುಂಗಾರು ಹಂಗಾಮಿನ ನೀರು ಹರಿಸುವುದನ್ನು ನಿಲ್ಲಿಸುವ ಸಲುವಾಗಿಯೇ ಗುರುವಾರದಂದು ಕಾಡಾ ಸಭೆ ಕರೆದಿದ್ದಾರೆ ಎಂದು ಭಾರತೀಯ ರೈತ ಒಕ್ಕೂಟದ ರೈತ ಮುಖಂಡರು ಆರೋಪಿಸಿದರು.

ಕಾಡಾ ಸಭೆ ವಿರೋಧಿಸಿ ದಾವಣಗೆರೆಯಲ್ಲಿ ಪ್ರತಿಭಟಿಸಿದ ರೈತರು ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು, “ಈ ಸಭೆ ರದ್ದುಪಡಿಸದಿದ್ದರೆ ತೀವ್ರ ಹೋರಾಟ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.

“ಭದ್ರಾ ಜಲಾಶಯ ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು ಜಿಲ್ಲೆಯ ರೈತರ ಬೆಳೆಗೆ ಮುಖ್ಯ ನೀರಿನ ಮೂಲ. ನಿರಂತರ ನೂರು ದಿನಗಳ ಕಾಲ ಮುಂಗಾರು ಹಂಗಾಮಿನ ನೀರು ಹರಿಸುವುದಾಗಿ ನೀರಾವರಿ ಇಲಾಖೆ ಭರವಸೆ ನೀಡಿತ್ತು. ಇದೀಗ ಚನ್ನಗಿರಿ, ಶಿವಮೊಗ್ಗ, ಭದ್ರಾವತಿಯ ತೋಟಗಾರಿಕೆ ಬೆಳೆಯ ರೈತರ ಒತ್ತಡದಿಂದ ನೀರು ನಿಲ್ಲಿಸಲು ಸಭೆ ಕರೆಯಲಾಗಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನೀರು ಹರಿಸಲು ಪ್ರಾರಂಭವಾಗಿ 25 ದಿನ ಕಳೆದಿದ್ದು, ಉಳಿದ 75 ದಿನಗಳ ಕಾಲವೂ ನೀರು ಹರಿಸಬೇಕು. ಈಗಾಗಲೇ ರೈತರು ತಮ್ಮ ಜಮೀನುಗಳಲ್ಲಿ ಭತ್ತ ನಾಟಿ ಮಾಡಿದ್ದು, ಕಾಡಾದಿಂದ ನೀರು ನಿಲ್ಲಿಸಲು ಇದೀಗ ಸಭೆ ಕರೆದಿರುವುದು ರೈತರು ಹೋರಾಟಕ್ಕಿಳಿಯುವಂತೆ ಮಾಡಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಭೂಸ್ವಾಧೀನವಾಗಿರುವ ಭೂಮಿ ಹಸ್ತಾಂತರಿಸದೇ ವಂಚನೆ; ಭೂರಹಿತರ ಆರೋಪ

“ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ರೈತರು ಅಕ್ರಮ ಪಂಪ್‌ಸೆಟ್ ಹಾಕಿಕೊಂಡಿದ್ದು, ಅಡಿಕೆ ತೋಟಗಳಿಗೆ ನೀರು ಹರಿಸುತ್ತಿದ್ದಾರೆ. ಆದರೆ, ದಾವಣಗೆರೆ ಭಾಗದ ಭತ್ತ ಬೆಳೆದ ರೈತರು ನೀರಿಲ್ಲದೇ ಪರದಾಡುತ್ತಿದ್ದಾರೆ. ಕಾಡಾ ಸಭೆಯನ್ನು ದಾವಣಗೆರೆ ರೈತರು ಬಹಿಷ್ಕಾರ ಮಾಡುತ್ತೇವೆ” ಎಂದು ಕಿಡಿಕಾರಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ...

ದಾವಣಗೆರೆ | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಮರ್ಥ್ ಶಾಮನೂರು: ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್...

ದಾವಣಗೆರೆ | ದಕ್ಷಿಣ ಕ್ಷೇತ್ರ ಉಪಚುನಾವಣೆ; ಎಸ್ ಟಿ ಮೋರ್ಚಾದ ಶ್ರೀನಿವಾಸ್ ಗೆ ಒಲಿದ ಬಿಜೆಪಿ ಟಿಕೆಟ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮ...

ದಾವಣಗೆರೆ | ಒಳಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯಕ್ಕೆ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಹೋರಾಟ

ಸರ್ವೋಚ್ಛ ನ್ಯಾಯಾಲಯದ ಸಂವಿಧಾನಿಕ ಪೀಠವು ಒಳ ಮೀಸಲಾತಿ ವರ್ಗೀಕರಣ ಹಾಗೂ ಜಾರಿಯ...