ದಾವಣಗೆರೆ | ಜಗಳೂರು ತಾಲೂಕಿನಲ್ಲಿ ಯೂರಿಯಾ ವಿತರಣೆ, ಗೊಬ್ಬರ ಸಿಗದೇ ರೈತರ ನಿರಾಸೆ

Date:

ಯೂರಿಯ ರಸಗೊಬ್ಬರದ ಅಭಾವದಿಂದ ಕಂಗೆಟ್ಟಿರುವ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ರೈತರಿಗೆ
ವಿವಿಧ ಭಾಗಗಳಲ್ಲಿ ಇಂದು ಕೃಷಿ ಅಧಿಕಾರಿಗಳು, ರೈತ ಸಂಘ ಮತ್ತು ಪೊಲೀಸರ ಬಂದೋಬಸ್ತ್ ನಲ್ಲಿ ಯೂರಿಯಾ ಗೊಬ್ಬರ ವಿತರಣೆ ಮಾಡಲಾಯಿತು.‌ ಆದರೂ ಬಹುತೇಕ ರೈತರು ಗೊಬ್ಬರ ಖಾಲಿಯಾದ ಹಿನ್ನಲೆಯಲ್ಲಿ ನಿರಾಸೆಯಿಂದ ಬರಿ ಕೈಯಲ್ಲಿ ಹಿಂದಿರುಗಿದರು.

1002469415

ಬಹುತೇಕ ದಿನಗಳಿಂದ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲೆ ಹಾಗೂ ಜಗಳೂರು ತಾಲೂಕಿನ ವಿವಿಧ ಭಾಗಗಳಲ್ಲಿ ರೈತರು ಮೆಕ್ಕೆಜೋಳ ಸೇರಿದಂತೆ ಹಲವು ಬೆಳೆಗಳನ್ನು ಬಿತ್ತನೆ ಮಾಡಿದ್ದು, ಮಳೆ ಹೆಚ್ಚಿರುವ ಕಾರಣ ಬೆಳೆಗಳಿಗೆ ಶೀತ ತಪ್ಪಿಸಲು ಮತ್ತು ಬೆಳವಣಿಗೆಗೆ ಪೋಷಕಾಂಶಗಳನ್ನು ನೀಡಲು ಯೂರಿಯಾ ಅಭಾವ ಉಂಟಾಗಿತ್ತು. ಈ ಹಂತದಲ್ಲಿ ತಿಂಗಳಿನಿಂದಲೂ ರೈತ ಸಂಘ ಮತ್ತು ರೈತರು ಪ್ರತಿಭಟನೆಗೆ ಇಳಿದಿದ್ದರು.

1002469486

ಸಮರ್ಪಕವಾಗಿ ಗೊಬ್ಬರ ವಿತರಿಸದ ಮತ್ತು ತಾಲೂಕಿನ ಅಗತ್ಯಕ್ಕೆ ಸಾಕಷ್ಟು ಗೊಬ್ಬರ ಸರಬರಾಜು ಮಾಡದ ಕೃಷಿ ಇಲಾಖೆಯ ವೈಫಲ್ಯವನ್ನು ವಿರೋಧಿಸಿ ಗುರುವಾರವಷ್ಟೇ ವಾಸುದೇವ ಮೇಟಿ ಬಣದ ತಾಲೂಕು ಅಧ್ಯಕ್ಷ ಕುಮಾರ್ ಭರಮಸಮುದ್ರ ಸೇರಿದಂತೆ ರೈತ ಸಂಘಟನೆಗಳ ಮುಖಂಡರು, ರೈತರು ಕೃಷಿ ಇಲಾಖೆ ಕಚೇರಿಗೆ ಬೀಗ ಹಾಕಿ ಪ್ರತಿಭಟಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1002469356 1

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಚಳ್ಳಕೆರೆ ರೈಲ್ವೇ ನಿಲ್ದಾಣದಲ್ಲಿ ಅದಿರು ಸಾಗಾಣಿಕೆಯಿಂದ ಜೀವಭಯ, ಮಾಲಿನ್ಯ; ತಾತ್ಕಾಲಿಕ ಸ್ಥಗಿತಕ್ಕೆ ಜಿಲ್ಲಾಧಿಕಾರಿ ಸೂಚನೆ

ಈ ಹಿನ್ನೆಲೆಯಲ್ಲಿ ದಾವಣಗೆರೆ ಕೃಷಿ ಜಂಟಿ ನಿರ್ದೇಶಕರು ಮತ್ತು ತಾಲೂಕು ಸಹಾಯಕ ನಿರ್ದೇಶಕರು ಶುಕ್ರವಾರ ತಾಲೂಕಿಗೆ 170 ಮೆಟ್ರಿಕ್ ಟನ್ ಯೂರಿಯಾ ರಸಗೊಬ್ಬರವನ್ನು ಸರಬರಾಜು ಮಾಡಿ ಜಗಳೂರು ಎಪಿಎಂಸಿ ಆವರಣದಲ್ಲಿ 80 ಟನ್ ಸೇರಿದಂತೆ ತಾಲೂಕಿನ ಬಿದರೇಕೆರೆ, ಹೊಸಕೆರೆ, ಮುಸ್ಟೂರು ಅಣಬೂರು ಗ್ರಾಮಗಳಲ್ಲಿ ಯೂರಿಯಾ ವಿತರಣೆ ಮಾಡಲಾಯಿತು. ಗೊಬ್ಬರಕ್ಕಾಗಿ ಜಾತಕ ಪಕ್ಷಿಯಂತೆ ಕಾದಿದ್ದ ರೈತರು ಬೆಳಗ್ಗಿನಿಂದಲೂ ಸರತಿ ಸಾಲಿನಲ್ಲಿ ನಿಂತು ಗೊಬ್ಬರವನ್ನು ಕೊಂಡುಕೊಂಡರು. ಮಹಿಳೆಯರು ಕೂಡ ಸರತಿಯಲ್ಲಿ ನಿಂತು ಗೊಬ್ಬರವನ್ನು ಕೊಂಡುಕೊಂಡರು. ತಾಲೂಕಿನ ವಿವಿಧ ಭಾಗಗಳಿಂದಲೂ ಸೇರಿ ಒಟ್ಟು ನಾಲ್ಕರಿಂದ ಐದು ಸಾವಿರ ರೈತರು ಗೊಬ್ಬರಕ್ಕಾಗಿ ಆಗಮಿಸಿದ್ದರು. ಮಧ್ಯಾಹ್ನದ ವೇಳೆಗೆ ಯೂರಿಯಾ ಖಾಲಿಯಾದ ಹಿನ್ನೆಲೆಯಲ್ಲಿ ಎರಡು ಸಾವಿರಕ್ಕೂ ಹೆಚ್ಚು ರೈತರು ಗೊಬ್ಬರವಿಲ್ಲದೆ ಖಾಲಿ ಕೈಯಲ್ಲಿ ನಿರಾಸೆಯಿಂದ ಹಿಂದಿರುಗಿದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ...

ದಾವಣಗೆರೆ | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಮರ್ಥ್ ಶಾಮನೂರು: ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್...

ದಾವಣಗೆರೆ | ದಕ್ಷಿಣ ಕ್ಷೇತ್ರ ಉಪಚುನಾವಣೆ; ಎಸ್ ಟಿ ಮೋರ್ಚಾದ ಶ್ರೀನಿವಾಸ್ ಗೆ ಒಲಿದ ಬಿಜೆಪಿ ಟಿಕೆಟ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮ...

ದಾವಣಗೆರೆ | ಒಳಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯಕ್ಕೆ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಹೋರಾಟ

ಸರ್ವೋಚ್ಛ ನ್ಯಾಯಾಲಯದ ಸಂವಿಧಾನಿಕ ಪೀಠವು ಒಳ ಮೀಸಲಾತಿ ವರ್ಗೀಕರಣ ಹಾಗೂ ಜಾರಿಯ...