ದಾವಣಗೆರೆ | ಸಂಕಷ್ಟ ಮುಕ್ತಗೊಳಿಸಲು ರೈತರು ಕಾರ್ಮಿಕರು ಅಧಿಕಾರಕ್ಕೆ: ಸಿಪಿಐ ಮುಖಂಡ ಚಂದ್ರು

Date:

“ಪ್ರಸ್ತುತ ದೇಶದಲ್ಲಿ ನಡೆಯುತ್ತಿರುವ ಸದ್ಯದ ರಾಜಕೀಯ ಪರಿಸ್ಥಿತಿಯನ್ನು ಅವಲೋಕಿಸಿದರೆ ರೈತರು ಮತ್ತು ಕಾರ್ಮಿಕರು ಅತ್ಯಂತ ಸಂಕಷ್ಟದ ಜೀವನ ನಡೆಸುತ್ತಿದ್ದಾರೆ. ಬೀದಿ ಹೋರಾಟ ಮುಕ್ತಗೊಳಿಸಲು ರೈತ, ಕಾರ್ಮಿಕರು ಅಧಿಕಾರಕ್ಕೆ ಬರಬೇಕು” ಎಂದು ದಾವಣಗೆರೆ ಜಿಲ್ಲೆ
ಚನ್ನಗಿರಿ ತಾಲೂಕು ಸಮ್ಮೇಳನದಲ್ಲಿ ಕಾರ್ಮಿಕ ಮುಖಂಡ ಆವರಗೆರೆ ಚಂದ್ರು ಅಭಿಪ್ರಾಯಪಟ್ಟರು.

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ, ಭಾರತ ಕಮ್ಯುನಿಸ್ಟ್ ಪಕ್ಷದ ಚನ್ನಗಿರಿ ತಾಲೂಕು 2ನೇ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು “ಆಳುವ ಸರ್ಕಾರಗಳು ಬಂಡವಾಳಶಾಹಿ ವ್ಯವಸ್ಥೆಯ ಪರವಾಗಿ ಕೆಲಸ ಮಾಡುತ್ತಿದ್ದಾರೆ, ದುಡಿಯುವ ವರ್ಗದ ಜನರನ್ನು ಕಡೆಗಣಿಸುತ್ತಿದ್ದಾರೆ, ರೈತರು ಮತ್ತು ಕಾರ್ಮಿಕಪರ ಹೋರಾಟಗಳ ಬೀದಿ ಹೋರಾಟಕ್ಕೆ ಮುಕ್ತಿ ಹಾಡಲು ರೈತ ಕಾರ್ಮಿಕರು ಅಧಿಕಾರಕ್ಕೆ ಬರಬೇಕು” ಎಂದು ಆಶಯ ವ್ಯಕ್ತಪಡಿಸಿದರು.

1003105220

“ಆದ್ದರಿಂದ ಭಾರತ ಕಮ್ಯುನಿಸ್ಟ್ ಪಕ್ಷದ ಅಂತಿಮ ಗುರಿ ರಾಜಕೀಯ ಅಧಿಕಾರ ಹಿಡಿಯುವುದಾಗಿದೆ. ಎಲ್ಲರೂ ಕಮ್ಯುನಿಸ್ಟ್ ಪಕ್ಷವನ್ನು ಬಲಪಡಿಸುವುದರೊಂದಿಗೆ ಆಶಯ ಭಾವನೆಯೊಂದಿಗೆ ಮುನ್ನಡೆಯೋಣ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿಪಿಐ ಜಿಲ್ಲಾ ಸಹಕಾರ್ಯದರ್ಶಿ ಹೆಚ್ ಜಿ ಉಮೇಶ್ ಮಾತನಾಡಿ “ಪಕ್ಷದ ಎಲ್ಲಾ ಸಾಮೂಹಿಕ ಸಂಘಟನೆಗಳನ್ನು ಬಲಪಡಿಸುವುದರೊಂದಿಗೆ ಪಕ್ಷವನ್ನು ವಿಸ್ತರಿಸೋಣ. ಇದಕ್ಕಾಗಿ ಎಲ್ಲರೂ ಪಕ್ಷಕ್ಕಾಗಿ ಕೆಲಸ ಮಾಡಬೇಕು” ಎಂದರು.

1003105217

ಸಮ್ಮೇಳನದ ಧ್ವಜಾರೋಹಣವನ್ನು ಹಿರಿಯ ಮುಖಂಡರಾದ ಉಬೇದುಲ್ಲ, ಜಿ ಯಲ್ಲಪ್ಪ ನೆರವೇರಿಸಿದರು. ಇಪ್ಟಾ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ ಷಣ್ಮುಖಸ್ವಾಮಿ, ಜಗಲೂರು ತಾಲೂಕು ಸಿಪಿಐ ತಾಲೂಕು ಕಾರ್ಯದರ್ಶಿ ಮಾದಿಹಳ್ಳಿ ಮಂಜುನಾಥ ಸೇರಿದಂತೆ ಇತರರು ಮಾತನಾಡಿದರು. ಹಿರಿಯ ಕಾರ್ಮಿಕ ಮುಖಂಡರಾದ ಹನುಮಂತರಾವ್ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು. ಐರಣಿ ಚಂದ್ರು ಮತ್ತು ಗೆಳೆಯರು ಜಾಗೃತಿ ಗೀತೆಗಳನ್ನು ಹಾಡಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಭೂಮಿ,ವಸತಿ ರಹಿತರ ಬಗರ್ ಹುಕುಂ ಮಂಜೂರಾತಿಗಾಗಿ ನವೆಂಬರ್ 26ಕ್ಕೆ ಬೆಂಗಳೂರು ಚಲೋ

ಸಮ್ಮೇಳನದಲ್ಲಿ ಪಿ ಎಸ್ ಮಧು, ಜೈನುಲ್ಲಾ ಖಾನ್, ಮಂಜುಳಾ, ಸೈಯದ್ ಮುನಾವರ್,ಸೈಯದ್ ಗೌಸ್ ಪೀರ್,ಮಹಮದ್ ರಫೀಕ್,ಕಲೀಂ ಖಾನ್,ಕಲಿಗಾರ್ ರಫಿವುಲ್ಲಾ,ಕಾಂ ಲೋಕೇಶ್,ಸೈಯದ್ ಇಲಿಯಾಜ್, ಎಂ ಡಿ ರಫೀಕ್,ಕೆರನಹಳ್ಳಿ ರಾಜು,ಎ ತಿಪ್ಪೇಶ್,ಬೆಳಲಗೆರೆ ರುದ್ರಮ್ಮ, ಮಹಿಳಾ ಒಕ್ಕೂಟದ ಜಿಲ್ಲಾಧ್ಯಕ್ಷೆ ಸರೋಜಾ, ರಂಗಸ್ವಾಮಿ, ಹೆಚ್ ಎಸ್ ಚಂದ್ರು,ದಾದಾಪೀರ್,ಕೆ ಬಾನಪ್ಪ,ಲೋಕಿಕೆರೆ ರುದ್ರೇಶ್ ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...