ದಾವಣಗೆರೆ | ಬೆಂಗಳೂರಿಗೆ ಹೋಗುವ ವಂದೇಭಾರತ್ ರೈಲಿನಲ್ಲಿ ಬೆಂಕಿ ಅವಘಡ; ಯಾವುದೇ ಅಪಾಯವಿಲ್ಲ ರೈಲ್ವೆ ಇಲಾಖೆ ಸ್ಪಷ್ಟನೆ

Date:

ಧಾರವಾಡದಿಂದ ಬೆಂಗಳೂರಿಗೆ ಸಂಚರಿಸುವ ‘ವಂದೇ ಭಾರತ್’ ಎಕ್ಸ್ ಪ್ರೆಸ್ ಶುಕ್ರವಾರ ಮಧ್ಯಾಹ್ನ ಹರಿಹರ ಮತ್ತು ದಾವಣಗೆರೆ ನಡುವೆ ರೈಲು ಸಂಚರಿಸುತ್ತಿದ್ದಾಗ ರೈಲಿನ ಚಕ್ರದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಎಂಜಿನ್ ಗೆ ಮಾಹಿತಿ ರವಾನೆಯಾಗಿದ್ದು, ತಕ್ಷಣ ಚಾಲಕ, ರೈಲ್ವೆ ಸಿಬ್ಬಂದಿ, ಕಾರ್ಯಪ್ರವೃತ್ತರಾಗಿ ರೈಲನ್ನು ನಿಲ್ಲಿಸಿ ಸಂಭಾವ್ಯ ಅನಾಹುತ, ಅಪಾಯ ತಪ್ಪಿಸಿದ್ದಾರೆ. ಪರಿಶೀಲನೆ ಬಳಿಕ ವಂದೇ ಭಾರತ್ ರೈಲು ಸಂಚಾರವನ್ನು ರದ್ದುಪಡಿಸಿ ಪ್ರಯಾಣಿಕರಿಗೆ ಬೆಂಗಳೂರಿಗೆ ಹೋಗಲು ವ್ಯವಸ್ಥೆಯನ್ನು ರೈಲ್ವೆ ಇಲಾಖೆ ಕಲ್ಪಿಸಿತು.

‘ವಂದೇ ಭಾರತ್‌’ ರೈಲಿನ ‘ಸಿ-4’ ಕೋಚ್‌ನ ಗಾಲಿಯೊಂದರ ‘ಹಾಟ್ ಎಕ್ಸೆಲ್‌’ನಿಂದ ಬೆಂಕಿ ಕಿಡಿ ಹೊತ್ತಿಕೊಂಡು ಹೊಗೆ ಆವರಿಸಿದೆ . ಈ ಬಗ್ಗೆ ರೈಲಿನಲ್ಲಿ ಸ್ವಯಂ ಚಾಲಿತ ಅವಘಡ ಸಂದೇಶ ವ್ಯವಸ್ಥೆಯಿಂದ ಎಂಜಿನ್‌ಗೆ ಮಾಹಿತಿ ರವಾನೆಯಾಗಿದೆ. ಮಧ್ಯಾಹ್ನ 3.30ಕ್ಕೆ ಹರಿಹರ ಮತ್ತು ದಾವಣಗೆರೆ ನಡುವೆ ರೈಲು ಸಂಚರಿಸುತ್ತಿದ್ದಾಗ ಘಟನೆ ಸಂಭವಿಸಿದೆ. ಈ ವೇಳೆ ವಂದೇ ಭಾರತ್ ರೈಲು ಸುಮಾರು 100 ಕಿಮೀ ವೇಗದಲ್ಲಿ ಸಾಗುತ್ತಿದ್ದು, ರೈಲು ನಿಲ್ಲಿಸಿದ ಬಳಿಕ ಬೆಂಕಿ ನಂದಿಸಲಾಗಿದೆ’.

1002223523
Oplus_0

ಸಿ-4 ಬೋಗಿಯಲ್ಲಿ ಉಂಟಾಗಿದ್ದ ತಾಂತ್ರಿಕ ಸಮಸ್ಯೆ ಸರಿಪಡಿಸಿಕೊಂಡು ದಾವಣಗೆರೆ ನಿಲ್ದಾಣದವರೆಗೆ ರೈಲನ್ನು ತರಲಾಗಿದೆ ಎಂದು ರೈಲ್ವೆ ಇಲಾಖೆಯ ಅಧಿಕಾರಿಗಳು ತಿಳಿಸಿದ್ದು, ರೈಲನ್ನು ಪರಿಶೀಲಿಸಿದ ತಾಂತ್ರಿಕ ತಂಡ ಸಂಚಾರವನ್ನು ರದ್ದುಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಜಿಲ್ಲಾ ಯುವ ಕಾಂಗ್ರೆಸ್ ಪದಗ್ರಹಣ ಸಮಾರಂಭದಲ್ಲಿ ನೂಕಾಟ ವಾಗ್ವಾದ; ಬಣ ರಾಜಕೀಯ ಜೋರು

ಇದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ‘ಜನಶತಾಬಿ’, ‘ಜೋದ್‌ಪುರ ಎಕ್ಸ್‌ಪ್ರೆಸ್’ ರೈಲುಗಳಲ್ಲಿ ವಂದೇ ಭಾರತ್ ರೈಲಿನಲ್ಲಿದ್ದ 502 ಜನ ಪ್ರಯಾಣಿಕರನ್ನು ಕಳುಹಿಸಿಕೊಡಲಾಗಿದೆ. ನಂತರ ಹರಿಹರದ ದುರಸ್ತಿ ಮತ್ತು ನಿರ್ವಹಣೆ ಕೇಂದ್ರಕ್ಕೆ ರೈಲನ್ನು ಕಳುಹಿಸಲಾಗಿದೆ. ಇದೇ ವಂದೇ ಭಾರತ್ ರೈಲಿನ ಬೋಗಿಗೆ ಆರಂಭದಲ್ಲಿ ಒಂದು ಬಾರಿ ಕಲ್ಲು ತೂರಲಾಗಿತ್ತು. ತನಿಖೆ ಬಳಿಕ ರೈಲ್ವೆ ಪೊಲೀಸರು ಪುಂಡರನ್ನು ಬಂಧಿಸಿದ್ದರು.‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...