ದಾವಣಗೆರೆ | ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿಯವರಿಗೆ ಹರಿಹರ ದಸಂಸ ಶ್ರದ್ದಾಂಜಲಿ

Date:

ಮಂಗಳವಾರ ರಸ್ತೆ ಅಪಘಾತದಲ್ಲಿ ನಿಧನರಾದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿಯವರಿಗೆ ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಬುಧವಾರ ಹರಿಹರ ನಗರದ ಗಾಂಧಿ ವೃತ್ತದಲ್ಲಿ ಶ್ರದ್ದಾಂಜಲಿ ಸಲ್ಲಿಸಲಾಯಿತು.

ಈ ವೇಳೆ ದಸಂಸ ಹರಿಹರ ತಾಲೂಕು ಸಂಚಾಲಕ ಪಿ.ಜೆ.ಮಹಾಂತೇಶ್ ಮಾತನಾಡಿ, “ಕಡು ಬಡತನದಲ್ಲಿ ಹುಟ್ಟಿ ಐಎಎಸ್ ನಂತಹ ಹುದ್ದೆ ಅಲಂಕರಿಸಿದ ಮಹಾಂತೇಶ್ ಬೀಳಗಿರವರ ಶ್ರಮದ ಬದುಕು ನಮಗೆಲ್ಲಾ ಮಾದರಿಯಾಗಿದೆ” ಎಂದರು.

“ಅವರು ಬಸವಣ್ಣನವರ ಕಟ್ಟಾ ಅನುಯಾಯಿ ಯಾಗಿದ್ದು, ಅವರು ಬಡವರ ಏಳಿಗೆಗೆ ಶ್ರಮಿಸಿದರು. ಜನ ಸಾಮಾನ್ಯರ ಕಷ್ಟ, ಕಾರ್ಪಣ್ಯಗಳನ್ನು ಆಲಿಸಿ ಪರಿಹರಿಸುತ್ತಿದ್ದರು. ಅವರು ಜಿಲ್ಲಾಧಿಕಾರಿಯಾಗಿದ್ದ ಕೋವಿಡ್ ಅವಧಿಯಲ್ಲಿ ಜಿಲ್ಲೆಯಲ್ಲಿ ಕ್ವಾರಂಟೈನ್, ರೋಗಿಗಳ ಚಿಕಿತ್ಸೆಗೆ ಹಗಲು, ರಾತ್ರಿ ಶ್ರಮಿಸಿದರು” ಎಂದು ಸ್ಮರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹರಿಹರ ನಗರದ ಎ.ಕೆ.ಕಾಲೋನಿಯಲ್ಲಿರುವ ಕದಸಂಸ ಸ್ಥಾಪಕರಾದ ಪ್ರೊ.ಬಿ.ಕೃಷ್ಣಪ್ಪರ ಶಿಥಿಲಗೊಂಡಿದ್ದ ಮನೆಗೆ ಭೇಟಿ ನೀಡಿ ಮನೆಯ ಜೀರ್ಣೋದ್ದಾರಕ್ಕೆ 5 ಲಕ್ಷ ರೂ. ಅನುದಾನ ಬಿಡುಗಡೆ ಮಾಡುವುದಾಗಿ ಹೇಳಿದ್ದರು, ಆದರೆ ತಾಂತ್ರಿಕ ಕಾರಣಗಳಿಂದಾಗಿ ಆ ಅನುದಾನ ಬಿಡುಗಡೆಯಾಗಿಲ್ಲ” ಎಂದು ಸ್ಮರಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಪೊಕ್ಸೋ ಪ್ರಕರಣ ಕೋರ್ಟ್ ತೀರ್ಪು; ಮುರುಘಾ ಶರಣರಿಗೆ ಬಿಗ್ ರಿಲೀಫ್

ಬೆಸ್ಕಾಂ ಎಇಗಳಾದ ಮಾರ್ಕಂಡೇಯ ಎಂ ಮನೋಜ್, ವಿನಾಯಕ ಬೆಳ್ಳೂಡಿ, ವಿವಿಧ ಸಂಘ, ಸಂಸ್ಥೆಗಳ ಪದಾಧಿಕಾರಿಗಳಾದ ಎಚ್.ಕೆ.ಕೊಟ್ರಪ್ಪ, ಎ.ಕೆ.ಭೂಮೇಶ್, ಕೃಷ್ಣಮೂರ್ತಿ ಯಶಸ್ವಿನಿ, ಎಂ.ಎಸ್.ಆನಂದಪ್ಪ, ಕೇಶವ, ರಮೇಶ್ ಮಾನೆ, ಪ್ರೀತಂ ಬಾಬು, ಬಿ.ಮಗ್ದುಮ್, ಇಲಿಯಾಸ್ ಅಹ್ಮದ್, ಪ್ರಕಾಶ್ ಬೆಳ್ಳೂಡಿ, ಪ್ರವೀಣ್, ಮಂಜುನಾಥ್ ವಡುವಲಕೇರಿ, ನಾಗರಾಜ್ ಬೆಂಡಿಗೇರಿ, ಪ್ರಕಾಶ್ ಜಿ.ಎಂ., ಮಂಜುನಾಥ್ ಕಾಯಿ, ಗಂಗಾಧರ, ಆಕಾಶ್ ಎಂ.ಡಿ., ನಗರಸಭಾ ಸದಸ್ಯ ಆಟೋ ಹನುಮಂತಪ್ಪ ಹಾಗೂ ಇತರರು ಭಾಗವಹಿಸಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...