ದಾವಣಗೆರೆ | ಕರ್ನಾಟಕ ಶ್ರಮಿಕಶಕ್ತಿಯಿಂದ ಕಾರ್ಮಿಕರ ದಿನಾಚರಣೆ, ಹಿರಿಯ ಕಾರ್ಮಿಕರಿಗೆ ಅಭಿನಂದನೆ.

Date:

“ಕರ್ನಾಟಕ ಶ್ರಮಿಕ ಶಕ್ತಿ, ದಾವಣಗೆರೆ ಜಿಲ್ಲಾ ಸಮಿತಿ ವತಿಯಿಂದ 139ನೇ ಕಾರ್ಮಿಕ ದಿನಾಚರಣೆ ಮತ್ತು ಹಿರಿಯ ಕಾರ್ಮಿಕರಿಗೆ ಅಭಿನಂದನಾ ಸಮಾರಂಭ ಆಯೋಜಿಸಲಾಗಿದ್ದು, ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡುವ ಅಸಂಘಟಿತ ವಲಯದ ಕಾರ್ಮಿಕರು ಭಾಗವಹಿಸಲಿದ್ದಾರೆ” ಎಂದು ಮುಖಂಡ ಸತೀಶ್ ಅರವಿಂದ್ ತಿಳಿಸಿದ್ದಾರೆ.

“139ನೇ ಕಾರ್ಮಿಕ ದಿನಾಚರಣೆಯನ್ನು ನಾಳೆ ಮೇ 10, 2025ರ ಶನಿವಾರ ಬೆಳಿಗ್ಗೆ 11-30 ಕ್ಕೆ ದಾವಣಗೆರೆ ನಗರದ ವನಿತಾ ಸಮಾಜ, ಆರುಣ ಟಾಕೀಸ್ ಹಿಂಭಾಗ ಇಲ್ಲಿ ಆಚರಿಸಲಾಗುತ್ತಿದ್ದು ಮತ್ತು ಹಿರಿಯ ಕಾರ್ಮಿಕರಿಗೆ ಅಭಿನಂದನಾ ಸಮಾರಂಭವನ್ನು ಕೂಡ ಹಮ್ಮಿಕೊಳ್ಳಲಾಗಿದೆ” ಎಂದು ತಿಳಿಸಿದರು.

“ಜಗತ್ತಿನ ಕಾರ್ಮಿಕ ವರ್ಗವು ನ್ಯಾಯಯುತ ಸೌಲಭ್ಯ, ಹಕ್ಕುಗಳಿಗಾಗಿ ಹೋರಾಡಿ ಹುತಾತ್ಮರಾದ ದಿನವನ್ನು “ಮೇದಿನ”ವನ್ನಾಗಿ ಆಚರಿಸುತ್ತಾ ಬರಲಾಗಿದೆ. ಸಂಘಟಿತವಾಗಿದ್ದ ಕಾರ್ಮಿಕ ವರ್ಗವು ಇಂದುಮತಿ ವಿಘಟನೆಯಾಗುತ್ತ ಸಾಗುತ್ತಿದೆ. ಅಸಂಘಟಿತ ಕಾರ್ಮಿಕರನ್ನು ಒಟ್ಟುಗೂಡಿಸುವ ನಿಟ್ಟಿನಲ್ಲಿ ಕರ್ನಾಟಕ ಶ್ರಮಿಕ ಶಕ್ತಿಯು ಕೆಲಸ ಮಾಡುತ್ತಾ ಬಂದಿದೆ”ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001962645

“ಮೇ ದಿನವನ್ನು ಸ್ಮರಿಸಬೇಕಿರುವುದು ನಮ್ಮೆಲ್ಲರ ಕರ್ತವ್ಯವು ಕೂಡ ಆಗಿದೆ. ಆದ್ದರಿಂದ ಜಿಲ್ಲೆಯ ಎಲ್ಲಾ ಕಟ್ಟಡ ಕಾರ್ಮಿಕರು, ಟೈಲರ್ ಕಾರ್ಮಿಕರು, ಹಮಾಲಿ ಕಾರ್ಮಿಕರು, ಮೆಕಾನಿಕ್ ಕಾರ್ಮಿಕರು ಇನ್ನಿತರೇ ಎಲ್ಲಾ ಅಸಂಘಟಿತ ಕಾರ್ಮಿಕರು ತಪ್ಪದೇ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು” ಎಂದು ಕರೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ: ಭತ್ತ ಖರೀದಿ ಕೇಂದ್ರಕ್ಕೆ ಆಗ್ರಹಿಸಿ
ರಸ್ತೆಯಲ್ಲಿ ಭತ್ತ ಸುರಿದು ರೈತರ ಪ್ರತಿಭಟನೆ.

ಕಾರ್ಯಕ್ರಮವನ್ನು ಕರ್ನಾಟಕ ಜನಶಕ್ತಿಯ ರಾಜ್ಯ ಕಾರ್ಯದರ್ಶಿ ಕುಮಾ‌ರ್ ಸಮತಳ ಉದ್ಘಾಟಿಸಲಿದ್ದು,
ಕಾರ್ಯಕ್ರಮದಲ್ಲಿ ದಾವಣಗೆರೆಯ ಸೈಯದ್ ಅಶ್ಚಾಕ್,ಉಪಾಧ್ಯಕ್ಷ ಕಾಯಕಜೀವಿ ಕಟ್ಟಡ ಕಾರ್ಮಿಕರ ಸಂಘ, ಪವಿತ್ರ, ಅಧ್ಯಕ್ಷೆ ಕರ್ನಾಟಕ ಟೈಲರ್ಸ್ ಕಾರ್ಮಿಕರ ಫೆಡರೇಶನ್, ಸೈಯದ್ ಅಫ್ತಾಬ್ ತಾಲ್ಲೂಕು ಅಧ್ಯಕ್ಷರು, ಕಾಯಕಜೀವಿ ಕಟ್ಟಡ ಕಾರ್ಮಿಕರ ಸಂಘ, ಸೈಯದ್ ಅಕ್ಟರ್, ಮುಖಂಡರು, ಲೋಡಿಂಗ್ ಕಾರ್ಮಿಕರ ಒಕ್ಕೂಟ, ಆದೀಲ್ ಖಾನ್ ಎಸ್.ಕೆ, ಕರ್ನಾಟಕ ಶ್ರಮಿಕ ಶಕ್ತಿ,‌ರವೀಂದ್ರ ಕೆ, ಕರ್ನಾಟಕ ಟೈಲರ್ಸ್ ಕಾರ್ಮಿಕರ ಫೆಡರೇಶನ್, ಬೆಂಗಳೂರಿನ ಕರ್ನಾಟಕ ಶ್ರಮಿಕ ಶಕ್ತಿಯ ಬಸವರಾಜು, ಚನ್ನಮ್ಮ, ಭಾಗವಹಿಸಲಿದ್ದು, ಹೋರಾಟದ ಹಾಡುಗಳನ್ನು ಹನುಮಂತಪ್ಪ ಕರೂರು, ಕಾಯಕಜೀವಿ ಕಟ್ಟಡ ಕಾರ್ಮಿಕರ ಸಂಘ ಇವರು ಹಾಡಲಿದ್ದಾರೆ.‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ...

ದಾವಣಗೆರೆ | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಮರ್ಥ್ ಶಾಮನೂರು: ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್...

ದಾವಣಗೆರೆ | ದಕ್ಷಿಣ ಕ್ಷೇತ್ರ ಉಪಚುನಾವಣೆ; ಎಸ್ ಟಿ ಮೋರ್ಚಾದ ಶ್ರೀನಿವಾಸ್ ಗೆ ಒಲಿದ ಬಿಜೆಪಿ ಟಿಕೆಟ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮ...

ದಾವಣಗೆರೆ | ಒಳಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯಕ್ಕೆ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಹೋರಾಟ

ಸರ್ವೋಚ್ಛ ನ್ಯಾಯಾಲಯದ ಸಂವಿಧಾನಿಕ ಪೀಠವು ಒಳ ಮೀಸಲಾತಿ ವರ್ಗೀಕರಣ ಹಾಗೂ ಜಾರಿಯ...