ದಾವಣಗೆರೆ | ವೆನೆಜುವೆಲಾ ಮೇಲೆ ಅಮೆರಿಕ ದಾಳಿಯನ್ನು ಖಂಡಿಸಿ ಎಡಪಕ್ಷಗಳ ಪ್ರತಿಭಟನೆ

Date:

ದಾವಣಗೆರೆ ನಗರದ ಜಯದೇವ ವೃತ್ತದಲ್ಲಿ ವೆನೆಜುವೆಲಾ ಮೇಲಿನ ಸಾಮ್ರಾಜ್ಯಶಾಹಿ ಅಮೇರಿಕಾದ ಮಿಲಿಟರಿ ಆಕ್ರಮಣ, ದಾಳಿ ಹಾಗೂ ವೆನೆಜುವೆಲಾ ರಾಷ್ಟ್ರದ ಪ್ರಧಾನಿಯನ್ನು ಅಪಹರಿಸಿರುವುದನ್ನು ತೀವ್ರವಾಗಿ ಖಂಡಿಸಿ ದಾವಣಗೆರೆ ಜಿಲ್ಲೆಯ ಎಡಪಕ್ಷಗಳು (ಕಮ್ಯುನಿಸ್ಟ್) (CPI, CPI(M), SUCI(C)) ಹಾಗೂ ಜನಶಕ್ತಿ ಸಂಘಟನೆಗಳ ಒಕ್ಕೂಟದ ಮುಖಂಡರು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

‘ಅಮೇರಿಕಾ ದಾಳಿ ಖಂಡಿಸಿ ಮಾತನಾಡಿದ ಮುಖಂಡರು “ಎಲ್ಲಾ ಅಂತರಾಷ್ಟ್ರೀಯ ಕಾನೂನುಗಳು, ಸಂಹಿತೆಗಳು ಮತ್ತು ಆಚರಣೆಗಳನ್ನು ಸ್ಪಷ್ಟವಾಗಿ ಉಲ್ಲಂಘಿಸಿರುವ ಯುದ್ಧಕೋರ ಅಮೆರಿಕಾದ ಸಾಮ್ರಾಜ್ಯಶಾಹಿಗಳು ವೆನೆಜುವೆಲಾದ ಮೇಲೆ ಬಾಂಬ್ ದಾಳಿ ನಡೆಸಿವೆ. ಹಿಂದೆ ಇರಾಕ್ ಮೇಲೆ ದಾಳಿ ಮಾಡಿ, ಅಲ್ಲಿ ಸಮೂಹ ವಿನಾಶಕ ಶಸ್ತ್ರಾಸ್ತ್ರಗಳಿವೆ ಎಂಬ ಸುಳ್ಳು ನೆಪವೊಡ್ಡಿ ಇರಾಕಿನ ಅಧ್ಯಕ್ಷ ಸದ್ದಾಂ ಹುಸೇನ್ ಅವರನ್ನು ಕೊಂದಂತೆಯೇ, ವೆನೆಜುವೆಲಾದ ಅಧ್ಯಕ್ಷ ನಿಕೋಲಸ್ ಮಡುರೊ ಅವರ ಮೇಲೆ ಮಾದಕ ದ್ರವ್ಯ ಕಳ್ಳಸಾಗಣೆಯ ಆರೋಪ ಹೊರಿಸಿ ಅವರನ್ನು ಅಪಹರಿಸಿದ್ದಾರೆ. ವಾಸ್ತವವಾಗಿ ಅಮೆರಿಕದ ಸಾಮ್ರಾಜ್ಯಶಾಹಿಗಳು, ಬಂಡವಾಳಶಾಹಿಗಳು ವೆನೆಜುವೆಲಾದ ಅಪಾರ ತೈಲ ಸಂಪನ್ಮೂಲಗಳನ್ನು ಕಬಳಿಸುವ ಉದ್ದೇಶದಿಂದ, ಮಡುರೊ ಅವರನ್ನು ಅಧಿಕಾರದಿಂದ ಬಲವಂತವಾಗಿ ಕೆಳಗಿಳಿಸಿ ಅಲ್ಲಿ ಕೈಗೊಂಬೆ ಸರ್ಕಾರವನ್ನು ಸ್ಥಾಪಿಸಲು ಬಹಳ ದಿನಗಳಿಂದ ರಹಸ್ಯವಾಗಿ ಸಂಚು ರೂಪಿಸುತ್ತಿದ್ದರು. ಅಮೆರಿಕ ಸಾಮ್ರಾಜ್ಯಶಾಹಿಯ ಈ ಕ್ರಿಮಿನಲ್ ಕೃತ್ಯವನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಪ್ರಪಂಚದಾದ್ಯಂತ ಸಾಮ್ರಾಜ್ಯಶಾಹಿ ವಿರೋಧಿ, ಯುದ್ಧ ವಿರೋಧಿ ಮತ್ತು ಶಾಂತಿಪ್ರಿಯ ಜನರು ಟ್ರಂಪ್ ನೇತೃತ್ವದ ಅಮೆರಿಕ ಸರ್ಕಾರದ ಈ ಅತ್ಯಂತ ಕ್ರೂರ ಕೃತ್ಯವನ್ನು ಖಂಡಿಸುತ್ತಿದ್ದಾರೆ. ಆದರೆ, ಭಾರತದಲ್ಲಿ ಏಕಸ್ವಾಮ್ಯ ಬಂಡವಾಳಶಾಹಿ ವರ್ಗದ ಹಿತಾಸಕ್ತಿಗೆ ಅಧೀನವಾಗಿರುವ ಬಿಜೆಪಿ ನೇತೃತ್ವದ ಭಾರತ ಸರ್ಕಾರವು, ಭಾರತೀಯರ ಸಾಮ್ರಾಜ್ಯಶಾಹಿ ವಿರೋಧಿ ಹೋರಾಟದ ಭವ್ಯ ಇತಿಹಾಸವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ. ಪೆಂಟಗನ್ ಆಡಳಿತಗಾರರ ಅಸಮಾಧಾನಕ್ಕೆ ಗುರಿಯಾಗಬಾರದು ಎಂಬ ಕಾರಣಕ್ಕಾಗಿಯೇ ಅಮೆರಿಕ ಸಾಮ್ರಾಜ್ಯಶಾಹಿಗಳ ಈ ಕ್ರಿಮಿನಲ್ ಕೃತ್ಯವನ್ನು ಖಂಡಿಸದೇ ಭಾರತ ಸರ್ಕಾರ ದೂರ ಉಳಿದಿದೆ” ಎಂದು ತೀವ್ರ ಆತಂಕ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಮೆರಿಕದ ನೌಕಾಪಡೆ ಮತ್ತು ವಾಯುಪಡೆಯು ವೆನೆಜುವೆಲಾದ ಮೇಲೆ ದಾಳಿ ಆರಂಭಿಸಿದ ಸುದ್ದಿ ತಿಳಿಯುತ್ತಿದ್ದಂತೆಯೇ, ದೇಶವ್ಯಾಪಿ ಯುದ್ಧ ವಿರೋಧಿ, ಶಾಂತಿಪ್ರಿಯ ಜನತೆ ಹಾಗೂ ವಿವಿಧ ರಾಜಕೀಯ ಪಕ್ಷಗಳು, ಸಂಘಸಂಸ್ಥೆಗಳು ಕಳೆದ ಜನವರಿ 3 ಮತ್ತು 4 ರಂದು ವಿವಿಧ ರಾಜ್ಯಗಳ ರಾಜಧಾನಿಗಳಲ್ಲಿ ಪ್ರತಿಭಟನಾ ಪ್ರದರ್ಶನಗಳನ್ನು ಆಯೋಜಿಸಿತ್ತು. ಈಗ ಜನವರಿ 6 ರಿಂದ ದೇಶದ ಪ್ರತಿಯೊಂದು ಭಾಗದಲ್ಲೂ ಎಡಪಕ್ಷಗಳ ಒಕ್ಕೂಟದ ವತಿಯಿಂದ ವಾರವಿಡೀ ಪ್ರತಿಭಟನೆ ಆಯೋಜಿಸಲಾಗುವುದು. ಅಮೆರಿಕದ ಸಾಮ್ರಾಜ್ಯಶಾಹಿ ಆಡಳಿತಗಾರರ ಇಂತಹ ಗೂಂಡಾಗಿರಿ ಮತ್ತು ದೌರ್ಜನ್ಯದ ವಿರುದ್ಧ ನಡೆಯುವ ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಎಡ ಪಕ್ಷಗಳ ಒಕ್ಕೂಟದಿಂದ ಕರೆ ನೀಡುತ್ತಿದ್ದು, ಎಲ್ಲಾ ಸಾಮ್ರಾಜ್ಯಶಾಹಿ ವಿರೋಧಿ, ಯುದ್ಧ ವಿರೋಧಿ ಮತ್ತು ಶಾಂತಿಪ್ರಿಯ ದೇಶವಾಸಿಗಳು ಭಾಗವಹಿಸಬೇಕು” ಎಂದು ಮನವಿ ಮಾಡಿದರು.‌

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ದಕ್ಷಿಣ ಕ್ಷೇತ್ರದ ಚುನಾವಣೆ; ಮುಸ್ಲಿಂ ಅಹಿಂದ ವರ್ಗಕ್ಕೆ ಅವಕಾಶ ನೀಡಲು ಸಚಿವರಿಗೆ ಮನವಿ

ಪ್ರತಿಭಟನೆಯಲ್ಲಿ ಕಮ್ಯುನಿಸ್ಟ್ ಮುಖಂಡರಾದ ಆವರಗೆರೆ ಉಮೇಶ್, ಆವರಗೆರೆ ಚಂದ್ರು, ಆನಂದ ರಾಜ್, ಮಂಜುನಾಥ್ ಕೈದಾಳ, ತಿಪ್ಪೇಸ್ವಾಮಿ, ಮಧು,
ಅಪರ್ಣಾ ಬಿ.ಆರ್. ಮಂಜುನಾಥ್ ಕುಕ್ಕುವಾಡ, ಶ್ರೀನಿವಾಸ್, ಪವಿತ್ರಾ, ತಿಪ್ಪೇಸ್ವಾಮಿ ಅಣಬೇರು, ಮಧು ತೊಗಲೇರಿ, ಷಣ್ಮುಖ ಸ್ವಾಮಿ, ಐರಣಿ ಚಂದ್ರು, ನೇತ್ರಾವತಿ ಸೇರಿದಂತೆ ಇತರ ಮುಖಂಡರು ಕಾರ್ಯಕರ್ತರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ...

ವಾಣಿಜ್ಯ ಹಡಗುಗಳ ಮೇಲಿನ ದಾಳಿ ಸಹಿಸುವುದಿಲ್ಲ: ವಿಕ್ರಂ ದೊರೆಸ್ವಾಮಿ ಕಟ್ಟೆಚ್ಚರ

ವಾಣಿಜ್ಯ ಹಡಗುಗಳ ಮೇಲೆ ದಾಳಿ ಮಾಡುವುದು, ಹಡಗು ಮಾರ್ಗಗಳಲ್ಲಿ ಸುರಕ್ಷಿತ ಸಂಚಾರಕ್ಕೆ...

ದಾವಣಗೆರೆ | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಮರ್ಥ್ ಶಾಮನೂರು: ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್...

ದಾವಣಗೆರೆ | ದಕ್ಷಿಣ ಕ್ಷೇತ್ರ ಉಪಚುನಾವಣೆ; ಎಸ್ ಟಿ ಮೋರ್ಚಾದ ಶ್ರೀನಿವಾಸ್ ಗೆ ಒಲಿದ ಬಿಜೆಪಿ ಟಿಕೆಟ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮ...