ದಾವಣಗೆರೆ ನಗರಕ್ಕೆ ಮಹಾನಗರ ಪಾಲಿಕೆಯಿಂದ ತುಂಗಭದ್ರಾ ನದಿ ನೀರು ಶುದ್ದೀಕರಿಸಿ ಪೂರೈಕೆ ಮಾಡಿದ್ದರೂ ಕಡ್ಡಾಯವಾಗಿ ಕುದಿಸಿ, ಆರಿಸಿದ ನೀರನ್ನು ಕುಡಿಯಲು ಉಪಯೋಗಿಸಬೇಕು. ಹಾಗೂ ನೀರನ್ನು ವ್ಯರ್ಥ ಮಾಡದೇ ಮಿತವಾಗಿ ಬಳಸಬೇಕೆಂದು ದಾವಣಗೆರೆ ಮಹಾನಗರಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದ್ದಾರೆ.
ಈ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿರುವ ಆಯುಕ್ತರು “ತುಂಗಾ ಮತ್ತು ಭದ್ರಾ ನದಿಗಳ ತಟದಲ್ಲಿ ಹಾಗೂ ದಾವಣಗೆರೆ ಜಿಲ್ಲೆಯಲ್ಲಿ ಇತ್ತೀಚೆಗೆ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ತುಂಗಭದ್ರಾ ನದಿಪಾತ್ರದಲ್ಲಿ ನೀರಿನ ಪ್ರಮಾಣ ಹರಿವು ಹೆಚ್ಚಾಗಿದೆ. ದಾವಣಗೆರೆ ನಗರಕ್ಕೆ ಸರಬರಾಜಾಗುವ ಹರಿಹರ ತಾಲೂಕಿನ ರಾಜನಹಳ್ಳಿ ಗ್ರಾಮದ ಬ್ಯಾರೇಜ್ ಹತ್ತಿರ ಇರುವ ಜಾಕ್ವೆಲ್ನಲ್ಲಿ ತುಂಗಾಭದ್ರ ನದಿಯ ನೀರಿನ ಮಟ್ಟವು ಹೆಚ್ಚಾಗಿದ್ದು, ನದಿಯ ನೀರು ಕೆಸರಿನಿಂದ ಕೂಡಿರುತ್ತದೆ” ಎಂದು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಮುಖ್ಯಮಂತ್ರಿ ಬದಲಾವಣೆ ವಿಚಾರ; ಯತೀಂದ್ರಗೆ ನೋಟೀಸ್ ಏಕಿಲ್ಲ? ಶಾಸಕ ಬಸವರಾಜ್ ಶಿವಗಂಗಾ ಪ್ರಶ್ನೆ
“ನದಿಯ ನೀರನ್ನು ಜಾಕ್ವೆಲ್ನಲ್ಲಿ ಶುದ್ಧೀಕರಿಸಿ ಪೂರೈಸಲಾಗುತ್ತದೆ. ಆದರೂ ಸಾರ್ವಜನಿಕರು ತಮ್ಮ ಆರೋಗ್ಯ ಹಿತದೃಷ್ಟಿಯಿಂದ ಶುದ್ಧೀಕರಿಸಿದ ನೀರನ್ನು ಕುದಿಸಿ, ಆರಿಸಿದ ನೀರನ್ನು ಕುಡಿಯಬೇಕು. ಅಲ್ಲದೇ ನೀರನ್ನು ಅಗತ್ಯಕ್ಕೆ ತಕ್ಕಂತೆ ಮಿತವಾಗಿ ಬಳಸಬೇಕು” ಎಂದು ತಿಳಿಸಿದರು.





