ದಾವಣಗೆರೆ | ಕಾಶ್ಮೀರ ಪ್ರವಾಸಿಗರ ಮೇಲೆ ದಾಳಿ ಖಂಡಿಸಿ ಮುಸ್ಲಿಂ ಒಕ್ಕೂಟ ಪ್ರತಿಭಟನೆ.‌

Date:

ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಏಪ್ರಿಲ್ 22ರಂದು ನಡೆದ ಉಗ್ರ ಕೃತ್ಯದ ದಾಳಿಯನ್ನು ಖಂಡಿಸಿ, ಭಯೋತ್ಪಾದಕರನ್ನು ಕೂಡಲೇ ಬಂಧಿಸಿ ಉಗ್ರ ಶಿಕ್ಷೆ ನೀಡಬೇಕೆಂದು ಒತ್ತಾಯಿಸಿ ದಾವಣಗೆರೆಯ ಮುಸ್ಲಿಂ ಒಕ್ಕೂಟದ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಿ ಉಪವಿಭಾಗಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆ ವೇಳೆ ಮುಸ್ಲಿಂ ಒಕ್ಕೂಟದ ಮುಖಂಡ ಅಸ್ಗರ್ ಮಾತನಾಡಿ, “ಕಾಶ್ಮೀರದ ಘಟನೆ ಅತ್ಯಂತ ಹೇಯ ಕೃತ್ಯ. ರಾಜಕೀಯ ಭಿನ್ನಾಭಿಪ್ರಾಯ ಇದ್ದರೂ ಪಕ್ಷಗಳು ಒಟ್ಟಾಗಿ ಭಯೋತ್ಪಾದಕರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಪ್ರಧಾನಿ, ಸರ್ಕಾರದ ನಿರ್ಧಾರದ ಪರ ಪಕ್ಷಗಳ ನಿಂತಿವೆ. ನಮಗೂ ಕೂಡ ರಾಜಕೀಯವಾಗಿ ಎಷ್ಟೋ ಭಿನ್ನಾಭಿಪ್ರಾಯ ಇದ್ದರೂ ನಾವು  ಭಯೋತ್ಪಾದನೆ ಮಟ್ಟ ಹಾಕುವ ವಿಷಯದಲ್ಲಿ ಅವರ ಪರ ಇದ್ದೇವೆ. ಕೇಂದ್ರ ಗೃಹ ಸಚಿವ ಅಮಿತ್ ಷಾ ಅಲ್ಲಿಗೆ ಭೇಟಿ ನೀಡಿದ ಸಂತ್ರಸ್ತರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ. ಅವರಿಗೆ ಧನ್ಯವಾದಗಳು. ಆದರೂ ಇದು ಗುಪ್ತಚರ ಇಲಾಖೆಯ ವೈಫಲ್ಯ. ಭದ್ರತಾ ವೈಫಲ್ಯಕ್ಕೆ ಕಾರಣವಾಗಿದೆ. ಈ ಘಟನೆಯನ್ನು ಮುಸ್ಲಿಂರ  ಆರೋಪಕ್ಕೆ ಬಳಸಿಕೊಳ್ಳಲು ಪ್ರಯತ್ನಿಸುವ ಕೆಲವು ಮಾಧ್ಯಮ, ರಾಜಕಾರಣಿಗಳ ಕೆಲಸ ಖಂಡನೀಯವಾದುದು. ಸಿಂಧು ನದಿಯ ಒಪ್ಪಂದ ರದ್ದು , ವೀಸಾ ರದ್ದು ಮುಂತಾದ ಕ್ರಮಗಳಿಂದ ಪಾಕಿಸ್ತಾನಕ್ಕೆ ತಕ್ಕ ಶಾಸ್ತಿ ಮಾಡಬೇಕು” ಎಂದು ಒತ್ತಾಯಿಸಿದರು.

1001894841
ಉಪವಿಭಾಗಾಧಿಕಾರಿಗಳ ಕಛೇರಿ ಮುಂದೆ ವೃತ್ತದಲ್ಲಿ ಪ್ರತಿಭಟನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒಕ್ಕೂಟದ ಮುಖಂಡ ವಕೀಲ ನಜೀರ್ ಮಾತನಾಡಿ, “ಭೂಮಿಯ ಸ್ವರ್ಗವಾಗಿರುವ ಕಾಶ್ಮೀರಕ್ಕೆ ಪ್ರವಾಸ ಕೈಗೊಂಡ ವೇಳೆ ಪ್ರವಾಸಿಗರ ಮೇಲೆ ಭಯೋತ್ಪಾದಕ ದಾಳಿ ದೇಶದ್ರೋಹಿ ಕೃತ್ಯ. ಇದನ್ನು ಬಳಸಿಕೊಂಡು ಮಾಧ್ಯಮಗಳು ಸಮುದಾಯದ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸುತ್ತಿವೆ.  ನೊಂದವರು ಹೇಳಿದಂತೆ ಕೆಲವು ಕಾಶ್ಮೀರಿಗಳು ಸಹಾಯ ಮಾಡಿದ್ದಾರೆ. ಸುಳ್ಳು ಸುದ್ದಿ, ದ್ವೇಷ ಹರಡುವ ಈ ರೀತಿಯ ಚಾನೆಲ್ ಗಳನ್ನು ನಿಷೇಧ ಮಾಡಬೇಕು. ಯಾವ ಧರ್ಮವೂ ಕೊಲ್ಲಲು ಹೇಳುವುದಿಲ್ಲ. ಇಲ್ಲಿ ಮಿಲಿಟರಿ ಕರ್ತವ್ಯ ಲೋಪ ಕಾಣುತ್ತದೆ. ಕೂಡಲೇ ತನಿಖೆ ನಡೆಸಿ ಭಯೋತ್ಪಾದಕರನ್ನು ಹಿಡಿದು ಗಲ್ಲಿಗೇರಿಸಬೇಕು” ಎಂದು ಒತ್ತಾಯಿಸಿದರು.

1001894845

ಮುಖಂಡ ಅಮಾನುಲ್ಲಾ ಖಾನ್ ಮಾತನಾಡಿ, “ಅದು ಕರಾಳ ದಿನ. ಭಯೋತ್ಪಾದಕರು ಯಾವ ಧರ್ಮಕ್ಕೂ ಸೇರಿದವರಲ್ಲ. ಭಯೋತ್ಪಾದಕತೆಯೇ ಅವರ ಧರ್ಮ. ನಾವು ಭಾರತದ ರಕ್ಷಣೆಯ ಬೆನ್ನಿಗೆ ನಿಂತಿದ್ದೇವೆ. ಕೋಮು ಸೌಹಾರ್ದ ಕಾಯ್ದು ಕೊಳ್ಳಲು ಬದ್ದವಾಗಿ ನಿಲ್ಲಬೇಕಿದೆ. ಸೇನೆ ಬಲಿಷ್ಠವಾಗಿದೆ. ಅಪರಾಧ ಎಸಗಿದ ಭಯೋತ್ಪಾದಕರಿಗೆ ಬುದ್ಧಿ ಕಲಿಸಬೇಕು. ಸರ್ಕಾರ ಸಂತ್ರಸ್ತರಿಗೆ ಸರ್ಕಾರಿ ಉದ್ಯೋಗ ನೀಡಬೇಕು” ಎಂದು ಒತ್ತಾಯಿಸಿದರು

ಈ ಸುದ್ದಿ ಓದಿದ್ದೀರಾ? ದಾವಣಗೆರೆಯಲ್ಲಿ ಸಂವಿಧಾನ ರಕ್ಷಣೆಗಾಗಿ ಸಂರಕ್ಷಕರ ಸಮಾವೇಶ, ಸಂವಿಧಾನ ರಕ್ಷಣೆಗೆ ಕಾರ್ಯಪಡೆ ಬದ್ದ.

ಮೊಹಮದ್ ಅಲಿ ಶೋಯಿಬ್ ಮಾತನಾಡಿ, “ಇಸ್ಲಾಂನಲ್ಲಿ ಹೇಳಿರುವಂತೆ ಒಬ್ಬನ ಕೊಲೆ, ಇಡೀ ಮಾನವ ಸಂಕುಲದ ಕೊಲೆ. ಭಯೋತ್ಪಾದಕರಿಗೆ ಧರ್ಮವಿಲ್ಲ. ಯಾವ ಧರ್ಮವೂ ಭಯೋತ್ಪಾದನೆಯನ್ನು ಸಾರುವುದಿಲ್ಲ. ಪ್ರವಾಸಿಗರ ಕಗ್ಗೊಲೆ ಮಾಡಿದ ಭಯೋತ್ಪಾದಕರನ್ನು ಕೂಡಲೇ ಹಿಡಿದು ಶಿಕ್ಷೆಗೊಳಪಡಿಸಬೇಕು. ಅದು ಇತರರಿಗೆ ಭಯೋತ್ಪಾದಕ ಚಟುವಟಿಕೆ ಮಾಡುವವರಿಗೆ ಪಾಠವಾಗಬೇಕು. ಮಾಧ್ಯಮಗಳು, ರಾಜಕಾರಣಿಗಳು ಹೆಣಗಳ ಮೇಲೆ ರಾಜಕೀಯ ಮಾಡುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಮುಸ್ಲಿಂ ಒಕ್ಕೂಟದ ಅಮಾನುಲ್ಲಾ, ಅದಿಲ್ ಖಾನ್, ಮಸೂದ್ ಅಹ್ಮದ್, ಜಬೀವುಲ್ಲಾ, ಜಾಫರ್, ರಿಯಾಜ್, ಶಬಾಸ್ ಖಾನ್, ಮುಜಾಮಿಲ್, ರಹಮತವುಲ್ಲಾ, ಹಯಾತ್, ಲಿಯಾಕತ್ ಅಲಿ, ನವೀದ್, ರಫೀಕ್ ಮತ್ತಿತರರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ...

ದಾವಣಗೆರೆ | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಮರ್ಥ್ ಶಾಮನೂರು: ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್...

ದಾವಣಗೆರೆ | ದಕ್ಷಿಣ ಕ್ಷೇತ್ರ ಉಪಚುನಾವಣೆ; ಎಸ್ ಟಿ ಮೋರ್ಚಾದ ಶ್ರೀನಿವಾಸ್ ಗೆ ಒಲಿದ ಬಿಜೆಪಿ ಟಿಕೆಟ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮ...

ದಾವಣಗೆರೆ | ಒಳಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯಕ್ಕೆ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಹೋರಾಟ

ಸರ್ವೋಚ್ಛ ನ್ಯಾಯಾಲಯದ ಸಂವಿಧಾನಿಕ ಪೀಠವು ಒಳ ಮೀಸಲಾತಿ ವರ್ಗೀಕರಣ ಹಾಗೂ ಜಾರಿಯ...