ದಾವಣಗೆರೆ | ಶ್ರೀಕಾಂತ್ ಪೂಜಾರಿ ಬಂಧನಕ್ಕೆ ವಿರೋಧ; ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ನಿರ್ಧಾರ

Date:

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕರಸೇವಕರು ಹಿಂದೂಗಳನ್ನು ಟಾರ್ಗೆಟ್ ಮಾಡಲಾಗುತ್ತಿರುವುದು ಹಾಗೂ ಶ್ರೀಕಾಂತ್ ಪೂಜಾರಿ ಬಂಧನ ಪ್ರಕರಣ ವಿರೋಧಿಸಿ ಜನವರಿ 8ರಂದು ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ ಎಂದು ಮಾಜಿ ಸಚಿವ ಎಂ ಪಿ ರೇಣುಕಾಚಾರ್ಯ ಹೇಳಿದರು.

ದಾವಣಗೆರೆಯಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, “ಇದು ಜಿಲ್ಲಾ ಬಿಜೆಪಿ ಘಟಕದಿಂದ ಆಯೋಜಿಸಿರುವ ಪ್ರತಿಭಟನೆಯಲ್ಲ. ಹಿಂದೂಗಳು, ಕರವೇ ಸೇವಕರು, ಶ್ರೀರಾಮಭಕ್ತರು ನಡೆಸುತ್ತಿರುವ ಹೋರಾಟ. ಬೆಳಿಗ್ಗೆ‌ 10.30ಕ್ಕೆ ನಗರದ ಪಿ ಜೆ ಬಡಾವಣೆಯ ಶ್ರೀರಾಮ ಮಂದಿರದಿಂದ ಪ್ರತಿಭಟನಾ ಮೆರವಣಿಗೆ ಹೊರಟು, ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಗೆ ಮುತ್ತಿಗೆ ಕಾರ್ಯಕ್ರಮ ಆಯೋಜಿಸಲಾಗಿದೆ” ಎಂದು ಹೇಳಿದರು.

“ಕಾರ್ಯಕ್ರಮಕ್ಕೆ ಹಿಂದೂ ಬಾಂಧವರು, ಕರ ಸೇವಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು. ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಈ ಹೋರಾಟದಲ್ಲಿ ಪಾಲ್ಗೊಂಡು ಪ್ರಭು ಶ್ರೀರಾಮನ ಕೃಪೆಗೆ ಪಾತ್ರರಾಗಬೇಕು” ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾವು ಭಯೋತ್ಪಾದಕರಲ್ಲ, ಶಾಂತಪ್ರಿಯರು. ಹಿಂದೂಗಳು ಕಾನೂನು ಕೈಗೆತ್ತಿಕೊಳ್ಳದೇ ಶಾಂತಯುತವಾಗಿ ದಾವಣಗೆರೆ ಬಡಾವಣೆ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕುತ್ತೇವೆ. ಕಾಂಗ್ರೆಸ್ ಮುಖಂಡರು ಪಾಲ್ಗೊಳ್ಳಿ. ಪ್ರಭು ಶ್ರೀರಾಮಚಂದ್ರ ಒಳ್ಳೆಯದು ಮಾಡುತ್ತಾನೆ. ಬೆಳಿಗ್ಗೆ 10. 30ಕ್ಕೆ ಶ್ರೀರಾಮಮಂದಿರದಿಂದ ಭಜನೆ, ಘೋಷಣೆ ಮೂಲಕ ಮೆರವಣಿಗೆ ನಡೆಸುತ್ತೇವೆ. ಹೆಚ್ಚಿನ ಸಂಖ್ಯೆಯಲ್ಲಿ ಹಿಂದೂಗಳು ಪಾಲ್ಗೊಳ್ಳಬೇಕು. ತಾಕತ್ತಿದ್ದರೆ ನಮ್ಮನ್ನು ಸರ್ಕಾರ ಬಂಧಿಸಲಿ” ಎಂದು ಸವಾಲು ಹಾಕಿದರು.

“ಕಾಂಗ್ರೆಸ್ ಸರ್ಕಾರವು ಕರ್ನಾಟಕದಲ್ಲಿ ಹಿಂದೂಗಳನ್ನು ಟಾರ್ಗೆಟ್ ಮಾಡುತ್ತಿದ್ದು, ತಾಲಿಬಾನ್ ಆಡಳಿತ ನಡೆಸುತ್ತಿದೆ. ತುಘಲಕ್ ದರ್ಬಾರ್ ಸರ್ಕಾರ ಇದು. ಸಿದ್ದರಾಮಯ್ಯನವರು ಕರವೇ ಸೇವಕರು, ಶ್ರೀರಾಮನ ಭಕ್ತರು ಕ್ರಿಮಿನಲ್ಸ್ ಅಂತಾರೆ. ಡಿ ಕೆ ಶಿವಕುಮಾರ್ ಡಿ ಜೆ ಹಳ್ಳಿ, ಕೆ ಜಿ ಹಳ್ಳಿ ಗಲಭೆಕೋರರನ್ನು ಅಮಾಯಕರು, ಸಹೋದರರು ಎನ್ನುತ್ತಾರೆ. ರಾಜ್ಯದಲ್ಲಿ ಇಂಥ ಕೆಟ್ಟ ಸರ್ಕಾರವಿದೆ. ಹಿಂದೂಗಳ ವಿರೋಧಿ ಸರ್ಕಾರವಾಗಿದ್ದು, ಇದು ತೊಲಗಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಸ್ಲಂ ನಿವಾಸಿಗಳಿಗೆ ನಿವೇಶನ ನೀಡುವಂತೆ ಆಗ್ರಹ

“ಮಧ್ಯ ಕರ್ನಾಟಕದ ದಾವಣಗೆರೆಯಲ್ಲಿ ಹೋರಾಟ ತೀವ್ರ ಗೊಳಿಸುತ್ತೇವೆ. ರೈತರಿಗೆ ಕೇವಲ 105 ಕೋಟಿ ರೂಪಾಯಿ ಮಾತ್ರ ಬಿಡುಗಡೆ ಮಾಡಿದ್ದಾರೆ. ಮುಜರಾಯಿ ಇಲಾಖೆ ವ್ಯಾಪ್ತಿಗೊಳಪಟ್ಟ ದೇವಸ್ಥಾನಗಳಿಗೆ ನೀಡಲು ಹಣವಿಲ್ಲ. ಮುಸ್ಲಿಮರಿಗೆ ನೀಡಲು ಹಣವಿದೆ. ಇದು ಯಾವ ನ್ಯಾಯ. ರೈತರಿಗೆ ಪರಿಹಾರವಾಗಿ ಕೂಡಲೇ ಹಣ ಬಿಡುಗಡೆ ಮಾಡಬೇಕು” ಎಂದು ರೇಣುಕಾಚಾರ್ಯ ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...