ದಾವಣಗೆರೆ | ರವೀಂದ್ರನಾಥ ಬಡಾವಣೆ ನಿರಾಶ್ರಿತರನ್ನು ಗಂಜಿಕೇಂದ್ರದಿಂದ ಹೊರದೂಡಿದ ಕ್ರಮಕ್ಕೆ ಕರವೇ ಆಕ್ರೋಶ

Date:

“ಇತ್ತೀಚಿಗೆ ಎರಡು ತಿಂಗಳ ಹಿಂದೆ ದಾವಣಗೆರೆಯ ಎಸ್ ಎ ರವೀಂದ್ರನಾಥ್ ಬಡಾವಣೆಯಲ್ಲಿ ಪಾರ್ಕ್ ಜಾಗದಲ್ಲಿ ಕಟ್ಟಿದ್ದಾರೆ ಎನ್ನಲಾದ 36 ಮನೆಗಳನ್ನು ತೆರವುಗೊಳಿಸಿ, ವಸತಿರಹಿತರನ್ನು ತುರ್ಚಘಟ್ಟ ಬಳಿ ಗಂಜಿ ಕೇಂದ್ರದಲ್ಲಿ ಬಿಡಲಾಗಿತ್ತು. ಸೋಮವಾರ ಅವರನ್ನು ಗಂಜಿ ಕೇಂದ್ರದಿಂದ ಹೊರಗಡೆ ಹಾಕಿದ್ದಾರೆ. ಗಂಜಿ ಕೇಂದ್ರದಿಂದ ಹೊರದೂಡಿದ ದಾವಣಗೆರೆ ಜಿಲ್ಲಾಡಳಿತದ ಕ್ರಮ ಸರಿಯಲ್ಲ. ತಕ್ಷಣ ಅವರಿಗೆ ಜಾಗದ ವ್ಯವಸ್ಥೆ ಮಾಡಿ ಮನೆಗಳನ್ನು ಕಟ್ಟಿ ಕೊಡಬೇಕು” ಎಂದು ಕರ್ನಾಟಕ ರಕ್ಷಣಾ ವೇದಿಕೆಯ (ಕರವೇ) ಜಿಲ್ಲಾಧ್ಯಕ್ಷ ರಾಮೇಗೌಡ ಆಗ್ರಹಿಸಿದರು.‌

ಗಂಜಿ ಕೇಂದ್ರದ ಹೊರಗೆ ಮನೆ ಕಳೆದುಕೊಂಡ ನಿರಾಶ್ರಿತರನ್ನು ಭೇಟಿ ಮಾಡಿ ಅವರ ಸಮಸ್ಯೆಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ಮಾತನಾಡಿದ ಅವರು “ಅಕ್ರಮವಾಗಿ ಬಾಂಗ್ಲಾದೇಶದಿಂದ ಬಂದವರಿಗೆ ಕರ್ನಾಟಕದಲ್ಲಿ ಜಾಗ ನೀಡುವ ಸರ್ಕಾರಕ್ಕೆ ದಾವಣಗೆರೆ ಜಿಲ್ಲಾ ಕೇಂದ್ರದಲ್ಲಿ ಮನೆ ಕಳೆದುಕೊಂಡ ಕಡುಬಡವರಿಗೆ ಮನೆ ಕೊಡುವುದಕ್ಕೆ ಜಾಗವಿಲ್ಲ. ಇದು ಯಾವ ಸೀಮೆ ಸರ್ಕಾರ. ಅಕ್ರಮ ವಲಸೆಗಾರಿಗೆ ಯಾವುದೇ ಕಾರಣಕ್ಕೂ ಜಾಗ ನೀಡಬಾರದು” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ನಮ್ಮ ರಾಜ್ಯದಲ್ಲಿ ಎಷ್ಟೋ ಕುಟುಂಬಗಳನ್ನು ಬೀದಿ ಪಾಲು ಮಾಡಿರುವ ಸರ್ಕಾರದ ನೀತಿ, ಕ್ರಮ ಸರಿ ಇಲ್ಲ. ತಕ್ಷಣ ರಾಜ್ಯದಲ್ಲಿ ಎಲ್ಲಾ ಜಿಲ್ಲೆಯ ತಾಲೂಕು ಹೋಬಳಿ ಮಟ್ಟದಲ್ಲಿ ಸರ್ಕಾರ ಜಾಗ ಹುಡುಕಿ ವಸತಿ ರಹಿತರಿಗೆ ಮನೆ ಕಲ್ಪಿಸಿಕೊಡಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಅಂಬೇಡ್ಕರ್ ದಲಿತ ಮುಖಂಡರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಮಾನ: ಕ್ರಮಕ್ಕೆ ಆಗ್ರಹ

“ಇತ್ತೀಚಿಗೆ ರವೀಂದ್ರನಾಥ ಬಡಾವಣೆ ನಿವಾಸಿಗಳ 36 ಮನೆಗಳನ್ನು ತೆರೆವುಗೊಳಿಸಿದ್ದರು. ಪಾಲಿಕೆ ಆಯುಕ್ತರು ತುರ್ಚಘಟ್ಟ ಬಳಿ ಗಂಜಿ ಕೇಂದ್ರಕ್ಕೆ 36 ಮನೆ ಕುಟುಂಬಗಳನ್ನು ಕಳಿಸಿಕೊಡಲಾಗಿತ್ತು. ಆದರೆ ಸೋಮವಾರದಿಂದ ಅವರನ್ನು ಗಂಜಿ ಕೇಂದ್ರದಿಂದ ಹೊರಗೆ ದೂಡಿ ಬೀಗ ಹಾಕಿದ್ದಾರೆ. ಈ ಕ್ರಮವನ್ನು ಕರವೇ ಖಂಡಸುತ್ತದೆ. ಜಿಲ್ಲಾಡಳಿತ ಮತ್ತು ದಾವಣಗೆರೆ ಮಹಾನಗರ ಪಾಲಿಕೆ ಆಯುಕ್ತರು ತಕ್ಷಣ ಅವರುಗಳಿಗೆ ಮನೆಗಳನ್ನು ಒದಗಿಸಿ ಕೊಡಬೇಕು” ಕರವೇ ಜಿಲ್ಲಾಧ್ಯಕ್ಷ ಎಂಎಸ್ ರಾಮೇಗೌಡ ಒತ್ತಾಯಿಸಿದ್ದಾರೆ.

ಈ ವೇಳೆ ರವೀಂದ್ರನಾಥ ಬಡಾವಣೆಯ ನಿರಾಶ್ರಿತರು ಹಾಜರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...