ದಾವಣಗೆರೆ | ನಾಯಕ ವಿದ್ಯಾರ್ಥಿನಿಲಯದಲ್ಲಿ ರಾಜವೀರ ಮದಕರಿ ನಾಯಕರ ಜಯಂತಿ ಆಚರಣೆ

Date:

ದಾವಣಗೆರೆಯ ಕರ್ನಾಟಕ ವೀರ ಮದಕರಿ ಸೇನೆ ವತಿಯಿಂದ ದಾವಣಗೆರೆ ನಗರದ ನಾಯಕ ವಿದ್ಯಾರ್ಥಿ ನಿಲಯದ ಆವರಣದಲ್ಲಿ ಶ್ರೀ ರಾಜವೀರ ಮದಕರಿ ನಾಯಕರ 283ನೇ ವರ್ಷದ ಜಯಂತಿಯನ್ನು ಆಚರಿಸಲಾಯಿತು.

ಕರ್ನಾಟಕ ವೀರ ಮದಕರಿ ಸೇನೆಯ ರಾಜ್ಯಾಧ್ಯಕ್ಷರಾದ ಅಣಜಿ ಅಂಜಿನಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿ, “ಶ್ರೀ ರಾಜವೀರ ಮದಕರಿನಾಯಕರ ಜಯಂತಿಯನ್ನು ಪ್ರತಿವರ್ಷವು ಆಚರಿಸಬೇಕು ಹಾಗೂ ರಾಜ್ಯ ಸರ್ಕಾರವು ಕೂಡ ನಾಡ ದೊರೆ ಶ್ರೀ ರಾಜವೀರ ಮದಕರಿನಾಯಕರ ಜಯಂತಿಯನ್ನು ಸಕಲ ಸರ್ಕಾರಿ ಗೌರವಾದರದೊಂದಿಗೆ ಆಚರಿಸಲು ಕ್ರಮ ಕೈಗೊಳ್ಳಬೇಕು” ಮನವಿ ಮಾಡಿದರು.

ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಹುಲ್ಲುಮನೆ ಗಣೇಶ್‌ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, “ರಾಜವೀರ ಮದಕರಿನಾಯಕರು ಇತಿಹಾಸದಲ್ಲಿ ಶೌರ್ಯ ಪರಾಕ್ರಮಗಳಿಗೆ ಹೆಸರಾದವರು. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಕೆರೆಯ ನಿರ್ಮಾತೃ ಶ್ರೀ ರಾಜವೀರ ಭರಮಣ್ಣ ನಾಯಕರ ಬೃಹತ್ ಪ್ರತಿಮೆಯನ್ನು ಭರಮಸಾಗರದ ಕೆರೆ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿಯೇ ನಿರ್ಮಿಸಲು ಸರ್ಕಾರ ಮುಂದಾಗಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಮುಖ್ಯ ನ್ಯಾಯಾಧೀಶರ ಮೇಲೆ ಹಲ್ಲೆ ಪ್ರಯತ್ನ ಖಂಡಿಸಿ ವಕೀಲನ ಗಡೀಪಾರಿಗೆ ದಸಂಸ ಆಗ್ರಹ

ಕಾರ್ಯಕ್ರಮದಲ್ಲಿ ತಾಲೂಕು ನಾಯಕ ಸಂಘದ ಗೌರವ ಅಧ್ಯಕ್ಷರಾದ ಅಣ್ಣಾಪುರದ ಹೇಮಣ್ಣ, ನಾಯಕ ಹಾಸ್ಟೆಲ್ ನಿರ್ದೇಶಕ ಹಾಗೂ ವಕೀಲರಾದ ಆಂಜನೇಯ ಗುರೂಜಿ, ತಾಲೂಕು ನಾಯಕ ಸಂಘದ ಉಪಾಧ್ಯಕ್ಷರಾದ ಕರೂರು ಗಣೇಶ್‌, ಎ.ಪಿ.ಎಂ.ಸಿ ಮಾಜಿ ಅಧ್ಯಕ್ಷರಾದ ತುಂಬಿಗೆರೆ ಗಂಗಾಧರಪ್ಪ ಸೇರಿದಂತೆ ಇತರ ಮುಖಂಡರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...