ದಾವಣಗೆರೆ | ಬೆಸ್ಕಾಂ ಉಗ್ರಾಣದಲ್ಲಿ3.85 ಕೋಟಿ ರೂ ಹಗರಣ: ಸಾಮಗ್ರಿಗಳ ದುರುಪಯೋಗ ದೂರು ದಾಖಲು

Date:

ಬೆಸ್ಕಾಂ ವಿಭಾಗೀಯ ಉಗ್ರಾಣದಲ್ಲಿ 3.85 ಕೋಟಿ ಮೌಲ್ಯದ ಸಾಮಗ್ರಿಗಳ ದುರುಪಯೋಗ ಮಾಡಿರುವ ಹಗರಣ ದಾವಣಗೆರೆ ಜಿಲ್ಲೆ ಹರಿಹರ ನಗರದ ವಿಭಾಗೀಯ ಉಗ್ರಾಣದಲ್ಲಿ ನಡೆದಿದೆ.  ಆರೋಪದ ಮೇಲೆ ಸಹಾಯಕ ಉಗ್ರಾಣ ಪಾಲಕ (assistant store keeper) ಅರುಣಕುಮಾರ್ ಜಿ.ಎನ್. ಹಾಗೂ ಮತ್ತಿತರರ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

2018ರ ಜೂನ್ 19ರಿಂದ 2025ರ ಸೆಪ್ಟೆಂಬರ್ 16ರವರೆಗೆ ಹರಿಹರ ಬೆಸ್ಕಾಂ ಉಗ್ರಾಣದಲ್ಲಿ ಸಹಾಯಕ ಉಗ್ರಾಣ ಪಾಲಕರಾಗಿ ಸೇವೆ ನಿರ್ವಹಿಸುತ್ತಿದ್ದ ಆರೋಪಿ ಅರುಣಕುಮಾರ್, ಲೆಡ್ಜರ್ ದಾಖಲೆಗಳಲ್ಲಿ ಸಾಮಗ್ರಿಗಳು ನೈಜವಾಗಿ ಉಗ್ರಾಣದಲ್ಲಿರುವಂತೆ ನಮೂದಿಸಿ, ಅವುಗಳನ್ನು ಹೊರಕ್ಕೆ ಸಾಗಿಸಿ ದುರುಪಯೋಗ ಮಾಡಿಕೊಂಡಿರುವ, ವಿಶೇಷವಾಗಿ, ಗ್ಯಾರಂಟಿ ಅವಧಿಯಲ್ಲಿದ್ದ ಪರಿವರ್ತಕಗಳನ್ನು ದುರಸ್ತಿ ಕೇಂದ್ರಗಳಿಗೆ ಕಳುಹಿಸದೆ, ಇನ್ವಾಯ್ಸ್ ಸಂಖ್ಯೆಗಳನ್ನು ಮಾತ್ರ ಲೆಡ್ಜರ್ ನಲ್ಲಿ ದಾಖಲಿಸಿವಂಚನೆ ಮಾಡಿದ ಬಗ್ಗೆ ಆರೋಪ ಕೇಳಿಬಂದಿದೆ.

2025ರ ಏಪ್ರಿಲ್ ನಲ್ಲಿ ತ್ರೈಮಾಸಿಕ ಪರಿಶೀಲನೆ ನಡೆಸಿದ ಆಂತರಿಕ ಲೆಕ್ಕಪರಿಶೋಧಕರು, ಪರಿವರ್ತಕ ತೈಲದಲ್ಲಿ(ಟಿ.ಸಿ.ಆಯಿಲ್) 89,270 ಲೀಟರ್ ಕೊರತೆ ಕಂಡುಬಂದಿದ್ದು, ಸಂಸ್ಥೆಗೆ ರೂ.56,67,864 ಆರ್ಥಿಕ ನಷ್ಟ ಉಂಟಾಗಿದೆ ಎಂದು ವರದಿ ನೀಡಿದ್ದರು. ವರದಿ ಹಿನ್ನೆಲೆಯಲ್ಲಿ, ಮೇಲಾಧಿಕಾರಿಗಳು ಉಗ್ರಾಣದಲ್ಲಿ ಸಾಮಗ್ರಿಗಳ ಎಣಿಕೆ ಕಾರ್ಯ ಕೈಗೊಂಡು, ಉಗ್ರಾಣದಲ್ಲಿದ್ದ ಸಾಮಗ್ರಿಗಳ ಭೌತಿಕ ಎಣಿಕೆ ಮತ್ತು ಲೆಡ್ಜರ್ ದಾಖಲೆಗಳನ್ನು ಹೋಲಿಕೆ ಮಾಡಿದಾಗ, ಒಟ್ಟು 39 ವಿಧದ ಸಾಮಗ್ರಿಗಳಲ್ಲಿ ಭಾರಿಕೊರತೆ ಕಂಡು ಬಂದಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಜಾತಿ ಧರ್ಮ ಭಾಷೆಗಳ ಸಂಘರ್ಷ ತಡೆಗೆ ಗಾಂಧೀಜಿ ದಾರಿ ಮುಖ್ಯ: ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ

ವರದಿಯಲ್ಲಿ ವಿವರಿಸಿದಂತೆ ರೂ.56,67,864 ಮೌಲ್ಯದ 89,270 ಲೀಟರ್‌ ಪರಿವರ್ತಕ ತೈಲ ದುರುಪಯೋಗ ಮಾತ್ರವಲ್ಲದೆ ರೂ.72,58,014 ಮೌಲ್ಯದ 102 ಪರಿವರ್ತಕಗಳು ಬಫರ್ ಸ್ಟಾಕ್ ನಿಂದ ಅಜ್ಞಾತವಾಗಿ ಕಣ್ಮರೆಯಾಗಿದ್ದವು. ಇದಲ್ಲದೆ ರೂ.12,75,937 ಮೌಲ್ಯದ 21 ಪರಿವರ್ತಕಗಳು ಲೆಡ್ಜರ್ ನಲ್ಲಿ ದುರಸ್ತಿದಾರರಿಗೆ ಇನ್ವಾಯ್ಸ್ ಮಾಡಿದಂತೆ ದಾಖಲಾಗಿದ್ದರೂ ವಾಸ್ತವದಲ್ಲಿ ದುರಸ್ತಿದಾರರಿಗೆ ಹಸ್ತಾಂತರವಾಗಿರಲಿಲ್ಲ. ಈ ರೀತಿಯಾಗಿ ಒಟ್ಟಾರೆ ರೂ.3,85,69,119 ಮೌಲ್ಯದ ಸಾಮಗ್ರಿಗಳನ್ನು ದುರುಪಯೋಗ ಮಾಡಲಾಗಿದೆ ಎಂಬುದು ಪರಿಶೀಲನೆಯಿಂದ ದೃಢಪಟ್ಟಿದ್ದು, ಕಾನೂನು ಕ್ರಮ ಜರುಗಿಸಬೇಕೆಂದು ಬೆಸ್ಕಾಂನ ಕಾರ್ಯನಿರ್ವಾಹಕ ಇಂಜಿನಿಯರ್ ರವಿಕಿರಣ ದೂರಿನಲ್ಲಿ ವಿವರಿಸಿದ್ದಾರೆ. ಕ್ರಿಮಿನಲ್ ವಿಶ್ವಾಸಘಾತುಕತನ, ಸಾರ್ವಜನಿಕ ನೌಕರನಾಗಿ ಸ್ವತ್ತಿನ ದುರುಪಯೋಗ, ಮೋಸ, ವಂಚನೆ ಮುಂತಾದ ಬಿಎನ್‍ಎಸ್ ಕಲಂಗಳಡಿ ಸೋಮವಾರ ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಹರಿಹರದ ಬೆಸ್ಕಾಂ ವಿಭಾಗೀಯ ಉಗ್ರಾಣಕ್ಕೆ ಹರಿಹರ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...