ದಾವಣಗೆರೆ | ತಾರತಮ್ಯ ವಿರೋಧಿಸಿ ಫ್ರೀಡಂಪಾರ್ಕ್ ನಲ್ಲಿ ಸ್ಲಂ ಜನಾಂದೋಲನ ಕರ್ನಾಟಕ ಧರಣಿ

Date:

“ಸ್ಲಂ ಜನರ ಸಾಮಾಜಿಕ ಮತ್ತು ಅಭಿವೃದ್ಧಿ ತಾರತಮ್ಯ ವಿರೋಧಿಸಿ ಫೆಬ್ರವರಿ 24ರಂದು ಬೆಂಗಳೂರು ಫ್ರೀಡಂ ಪಾರ್ಕನಲ್ಲಿ ಸ್ಲಂ ಜನಾಂದೋಲನ ಕರ್ನಾಟಕ ಮತ್ತು ಸಾವಿತ್ರಿಬಾಯಿಪುಲೆ ಮಹಿಳಾ ಸಂಘಟನೆಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ” ಎಂದು ರಾಜ್ಯ ಮುಖಂಡ, ಗೌರವಾಧ್ಯಕ್ಷ ಎಸ್ ಎಲ್ ಆನಂದಪ್ಪ ದಾವಣಗೆರೆಯಲ್ಲಿ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.

ದಾವಣಗೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಖಾಸಗೀ ಮಾಲೀಕತ್ವದ ಕೊಳಚೆ ಪ್ರದೇಶಗಳ ಘೋಷಣೆಗೆ ತೊಡಕಾಗಿರುವ ಸಂವಿಧಾನ ವಿರೋಧಿ ವಸತಿ ಇಲಾಖೆ ಸುತ್ತೋಲೆಯನ್ನು ತಕ್ಷಣ ಹಿಂಪಡೆಯಬೇಕು. 2023ರ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷ ನೀಡಿರುವ ಪ್ರಣಾಳಿಕೆ ಭರವಸೆಗಳನ್ನು ಹಾಗೂ ಸ್ಲಂ ಜನರಿಗೆ ಪ್ರತ್ಯೇಕ ಸಚಿವಾಲಯ ಮತ್ತು ನಗರ ಉದ್ಯೋಗ ಖಾತ್ರಿ ಯೋಜನೆ ಘೋಷಣೆ ಮಾಡಬೇಕು. ನಿವೇಶನ ರಹಿತರಿಗೆ ವಸತಿ ಕಲ್ಪಿಸುವ ಲ್ಯಾಂಡ್ ಬ್ಯಾಂಕ್ ಯೋಜನೆಯನ್ನು ಜಾರಿಗೊಳಿಸುವುದು ಸೇರಿದಂತೆ ವಿವಿಧ ಹಕ್ಕೋತ್ತಾಯಗಳ ಈಡೇರಿಸಲು ಒತ್ತಾಯಿಸಿ ಪ್ರತಿಭಟನೆ ನೆಡೆಸಲಾಗುವುದು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ| ಯುವಜನತೆ ದೇಶದ, ಸಮಾಜದ ಅಭಿವೃದ್ಧಿಗೆ ಪೂರಕವಾಗಿ ನೆಡೆದುಕೊಳ್ಳುವುದೇ ದೇಶಪ್ರೇಮ: ವಿಧಾನಸಭಾಧ್ಯಕ್ಷ ಯು ಟಿ ಖಾದರ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಗರ ಸ್ಲಂ ನಿವಾಸಿಗಳಾದ ಪರಿಶಿಷ್ಟ ಜಾತಿ/ಪಂಗಡ ಹಿಂದುಳಿದ, ಅಲ್ಪಸಂಖ್ಯಾತ ಮತ್ತು ಅಲೆಮಾರಿ ಸಮುದಾಯಗಳಿಗೆ ಭೂಮಿ ವಸತಿ ಮೂಲಭೂತ ಸೌಲಭ್ಯಗಳಾದ ಕುಡಿಯುವ ನೀರು.ರಸ್ತೆ, ಚರಂಡಿ, ಬೀದಿ ದೀಪ, ಶೌಚಾಲಯ, ಜೀವನೋಪಾಯದಂತಹ ಕನಿಷ್ಠ ಸೌಲಭ್ಯಗಳನ್ನು ನೀಡದೆ ಅಭಿವೃದ್ಧಿಯಿಂದ ನಮ್ಮನ್ನು ದೂರ ಇಡುವ ಮೂಲಕ ಸಂವಿಧಾನದ ಖಾತ್ರಿಗಳನ್ನು ದೊರಕದಂತೆ ಮಾಡಲಾಗುತ್ತಿದೆ” ಎಂದು ಆರೋಪಿಸಿದರು.

“ಕೊಳಚೆ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ 5 ಸಾವಿರ ಕೋಟಿ ಹಣ ಮೀಸಲಿಡಬೇಕು. ಸ್ಲಂ ಸಂಭಂದಿಸಿದ ವಸತಿ ಇಲಾಖೆ ಸುತ್ತೋಲೆ ಹಿಂಪಡೆಯಬೇಕು. ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಕಾಯಿದೆಯನ್ನು ತಿದ್ದುಪಡಿ, ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣಕ್ಕಾಗಿ ಪ್ರತ್ಯೇಕ ಸಚಿವಾಲಯವನ್ನು ಘೋಷಿಸಬೇಕು. ಸ್ಲಂ ಜನರ ಜೀವನೋಪಾಯಕ್ಕಾಗಿ ನಗರ ಉದ್ಯೋಗ ಖಾತ್ರಿ ಯೋಜನೆ ಜಾರಿ, ನಿವೇಶನ ರಹಿತರಿಗೆ ನಗರ ಲ್ಯಾಂಡ್ ಬ್ಯಾಂಕ್ ಯೋಜನೆ ಜಾರಿ, ಬೆಂಗಳೂರು ಸ್ಲಂ ನಿವಾಸಿಗಳ ಪುರ್ನವಸತಿಗಾಗಿ ಭೂ ಮಂಜೂರಾತಿ ಸೇರಿದಂತೆ ಇತರ ಬೇಡಿಕೆಗಳನ್ನು ಈಡೇರಿಸಬೇಕು. ಸ್ಲಂ ಜನರ ಪರವಾಗಿ ನಿಲುವಿಗೆ ಆಗ್ರಹಿಸಿ ಪ್ರತಿಭಟನೆ ಮಾಡಲಾಗುವುದು” ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸ್ಲಂ ಜನಾಂದೋಲನ ಕರ್ನಾಟಕ ಮತ್ತು ಸಾವಿತ್ರಿಬಾಯಿಪುಲೆ ಮಹಿಳಾ ಸಂಘಟನೆಯು ಮುಖಂಡರಾದ ರೇಣುಕಾ ಎಲ್ಲಮ್ಮ, ಶಬ್ಬೀರ್ ಸಾಬ್, ಶಂಶೀದಾಬಾನು, ಗೀತಮ್ಮ, ಬೀಬೀಜಾನ್, ಮಂಜುಳಾ ಹಾಜರಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ...

ದಾವಣಗೆರೆ | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಮರ್ಥ್ ಶಾಮನೂರು: ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್...

ದಾವಣಗೆರೆ | ದಕ್ಷಿಣ ಕ್ಷೇತ್ರ ಉಪಚುನಾವಣೆ; ಎಸ್ ಟಿ ಮೋರ್ಚಾದ ಶ್ರೀನಿವಾಸ್ ಗೆ ಒಲಿದ ಬಿಜೆಪಿ ಟಿಕೆಟ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮ...

ದಾವಣಗೆರೆ | ಒಳಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯಕ್ಕೆ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಹೋರಾಟ

ಸರ್ವೋಚ್ಛ ನ್ಯಾಯಾಲಯದ ಸಂವಿಧಾನಿಕ ಪೀಠವು ಒಳ ಮೀಸಲಾತಿ ವರ್ಗೀಕರಣ ಹಾಗೂ ಜಾರಿಯ...