ದಾವಣಗೆರೆ | ಸರ್ಕಾರಿ ಶಾಲೆಗಳ ಮುಚ್ಚುವಿಕೆ ವಿರೋಧಿಸಿ ವಿದ್ಯಾರ್ಥಿ ಯುವಜನ ಫೆಡರೇಷನ್ ಪ್ರತಿಭಟನೆ

Date:

ರಾಜ್ಯ ಸರ್ಕಾರದ ಕೆಪಿಎಸ್ ಮ್ಯಾಗ್ನೆಟ್ ಶಾಲೆ ಯೋಜನೆಯ ವಿರುದ್ಧ ಪ್ರತಿಭಟನೆ ನಡೆಸಿ 50 ಕ್ಕಿಂತ ಕಡಿಮೆ ದಾಖಲಾತಿ ಇರುವ ಶಾಲೆಗಳನ್ನು ವಿಲೀನಗೊಳಿಸುವ ಮೂಲಕ ಶಾಶ್ವತವಾಗಿ ಮುಚ್ಚಲು ಸರ್ಕಾರ ಮುಂದಾಗಿರುವುದನ್ನು ವಿರೋಧಿಸಿ ದಾವಣಗೆರೆ- ಅಖಿಲ ಭಾರತ ವಿದ್ಯಾರ್ಥಿ ಯುವಜನ (AISF) ಮತ್ತು ಅಖಿಲ ಭಾರತ ಯುವಜನ ಫೆಡರೇಷನ್ (AIYF) ದಾವಣಗೆರೆ ಜಿಲ್ಲಾ ಸಮಿತಿಗಳ ನೇತೃತ್ವದಲ್ಲಿ ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯ ಆವರಗೆರೆಯ ಸರ್ಕಾರಿ ಪ್ರಾಥಮಿಕ ಶಾಲೆ ಬಳಿ ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಮುಖಂಡರು, “ಸರ್ಕಾರಿ ಶಾಲೆಗಳ ವಿಲೀನ ಮತ್ತು ಮುಚ್ಚುವ ಮೂಲಕ ಗ್ರಾಮೀಣ ಪ್ರದೇಶದ ಕೃಷಿ, ಕೂಲಿ ಕಾರ್ಮಿಕರ, ಹಿಂದುಳಿದ ವರ್ಗಗಳ ಮಕ್ಕಳ ಶಿಕ್ಷಣ ಹಕ್ಕನ್ನು ಹತ್ತಿಕ್ಕಲಾಗುತ್ತಿದೆ. ಈ ಕ್ರಮದಿಂದ ಅವರನ್ನು ಇನ್ನಷ್ಟು ಬಡತನ, ಮೌಢ್ಯಕ್ಕೆ ತಳ್ಳಲಾಗುತ್ತಿದೆ. ಆದ್ದರಿಂದ ವಿಲೀನ ಕ್ರಮವನ್ನು ಕೈಬಿಟ್ಟು ಶಾಲೆಗಳಿಗೆ ಮೂಲಭೂತ ಸೌಕರ್ಯ, ಉತ್ತಮ ಶಿಕ್ಷಣ ಒದಗಿಸಬೇಕು” ಎಂದು ಆಗ್ರಹಿಸಿದರು.

ಪ್ರತಿಭಟನೆ ನಂತರ ದಾವಣಗೆರೆ ಉಪ ವಿಭಾಗಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಲಾಯಿತು. ಪ್ರತಿಭಟನೆ ನೇತೃತ್ವವನ್ನು ಅಖಿಲ ಭಾರತ ಯುವಜನ ಫೆಡರೇಶನ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ ತಿಪ್ಪೇಶ್ ವಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ವಿದ್ಯಾರ್ಥಿಗಳಿಗೆ “ಪರೀಕ್ಷೆ ಮತ್ತು ವೃತ್ತಿ ಮಾರ್ಗದರ್ಶನ” ಕಾರ್ಯಕ್ರಮ

ಪ್ರತಿಭಟನೆಯಲ್ಲಿ ವಿದ್ಯಾರ್ಥಿ ಯುವಜನ ಮುಖಂಡರಾದ ಅನಿಲ್ ಕುಮಾರ್, ನಾಗರಾಜ, ಅಣ್ಣೇಶ್, ಪ್ರಭು, ಮಂಜುನಾಥ್, ಪ್ರವೀಣ ಕೆಸಿ, ಮದನ್, ರಘುವೀರ, ಶಂಭುಲಿಂಗಪ್ಪ, ಸಂತೋಷ ಹೆಚ್ ,ಭೀಮೇಶ್, ಮುದಹದಡಿ ಸುರೇಶ್, ನಾಗರಾಜ ಎ ಸಿ, ನವೀನ್ ಸಿದ್ದಪ್ಪ ಮುಂತಾದವರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...