ದಾವಣಗೆರೆ | ನಿಯಮ ಮೀರಿಲ್ಲ, ಕ್ಷೇತ್ರದ ಅಭಿವೃದ್ಧಿಗೆ ಹಿರಿಯರ ಸಲಹೆ ಸ್ವೀಕರಿಸುವೆ: ಶಾಸಕ ಶಿವಗಂಗಾ ಬಸವರಾಜ್

Date:

“ಮಾಜಿ ಶಾಸಕ ಮಾಡಾಳ್ ವಿರುಪಾಕ್ಷಪ್ಪನವರ ಪತ್ರಿಕಾ ಹೇಳಿಕೆ ಸರಿಯಲ್ಲ. ಕಾಮಗಾರಿಗಳ ವಿಷಯದಲ್ಲಿ ನಿಯಮಾವಳಿ ಮೀರಿಲ್ಲ. ಕಿರಿಯ ಶಾಸಕನಾಗಿ ಕ್ಷೇತ್ರದ ಯಾವುದೇ ಮಾಜಿ ಶಾಸಕರು, ಹಿರಿಯರು ಸಲಹೆ ಕೊಟ್ಟರೂ ಸ್ವೀಕರಿಸಿ ಕ್ಷೇತ್ರದ ಅಭಿವೃದ್ಧಿಗೆ ಸ್ಪಂದಿಸುವೆ” ಎಂದು ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಕಾಮಗಾರಿಗಳ ವಿವರಣೆಗಳನ್ನು ಶಾಸಕರಾದ ಶಿವಗಂಗಾ ಬಸವರಾಜ್ ದಾಖಲೆಗಳ ಸಮೇತ ಬಹಿರಂಗಪಡಿಸಿದರು.

ದಾವಣಗೆರೆ ಜಿಲ್ಲೆ ಚನ್ನಗಿರಿ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು “ನಾನು ಶಾಸಕನಾದ ಮೇಲೆ ಕಾಮಗಾರಿಗಳಿಗೆ ನಿಯಮಾವಳಿ ಮೀರಿ ಹೋಗಿರುವುದಿಲ್ಲ. ಹಾಗೇನಾದರೂ ತಪ್ಪಿ ನಡೆದಾಗ ತಿದ್ದುವ ಹಕ್ಕು ಮಾಜಿ ಶಾಸಕರುಗಳಾದ ಹಿರಿಯರಾದ ವಡ್ನಾಳ್ ರಾಜಣ್ಣ, ಮಹಿಮಾ ಪಟೇಲ್, ಮಾಡಾಳ್ ವಿರುಪಾಕ್ಷಪ್ಫನವರಿಗೆ ಇದೆ. ಕಿರಿಯ ವಯಸ್ಸಿನ ಶಾಸಕನಾಗಿ ಕ್ಷೇತ್ರದಲ್ಲಿನ ಯಾವುದೇ ಹಿರಿಯರು ಸಲಹೆ ಕೊಟ್ಟರೂ ತೆಗೆದುಕೊಂಡು ಕ್ಷೇತ್ರದ ಅಭಿವೃದ್ಧಿಗೆ ಸ್ಪಂದಿಸುತ್ತೇನೆ” ಎಂದು ಸ್ಪಷ್ಟಪಡಿಸಿದರು.

“ಸಾಸ್ವೆಹಳ್ಳಿ ಏತ ನೀರಾವರಿ ವಡ್ನಾಳ್ ರಾಜಣ್ಣನವರ ಹೋರಾಟದ ಫಲ. ಇನ್ನುಳಿದ ಕಾಮಗಾರಿಗಳಿಗೆ ನಾನು ನಿಯಮಾವಳಿ ಮೀರದೆ ಹೋರಾಟ ಮಾಡಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದೇನೆ. ಇದಲ್ಲದೆ ಚನ್ನಗಿರಿ ತಾಲೂಕಿಗೆ ನೂತನ ಸರ್ಕಾರಿ ಮೆಡಿಕಲ್ ಕಾಲೇಜ್ ತರುವ ಹೋರಾಟ ನಡೆದಿದೆ ಎಂದು ಕ್ಷೇತ್ರದ ಜನರಿಗೆ ತಿಳಿದಿರಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಪ್ರಜಾಪ್ರಭುತ್ವ ದಿನ; ನನ್ನ ಮತ, ನನ್ನ ಹಕ್ಕು ಧ್ಯೇಯ ವಾಕ್ಯದೊಂದಿಗೆ ಸೈಕಲ್ ಜಾಥಾ

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರುಗಳಾದ ಮಾವಿನಕಟ್ಟೆ ಶ್ರೀಕಾಂತ್, ಹರೋನಹಳ್ಳಿ ವಿಜಯಗೌಡ್ರು, ಕೆರೆಬಿಳಚಿ ಜಬೀವುಲ್ಲಾ, ಸಂತೇಬೆನ್ನೂರು ಬ್ಲಾಕ್ ಆಧ್ಯಕ್ಷರು ಹಾಗು ಪುರಸಭೆ ಸದಸ್ಯರಾದ ಗೌಸ್ ಪೀರ್, ಇಮ್ರಾನ್, ಶಿವಾಜಿರಾವ್, ಜಿತೇಂದ್ರ ರಾಜ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...