ದಾವಣಗೆರೆ | ಸಂತ್ರಸ್ತರಿಗೆ ಮಾನವೀಯ ನೆರವು ನೀಡಬೇಕು: ಡಾ. ಲೋಹಿತ್ ನಾಯ್ಕರ್ 

Date:

ಪ್ರತಿಯೊಬ್ಬರಿಗೂ ಅವಶ್ಯಕತೆ ಇರುವ ಕಾರಣಕ್ಕಾಗಿಯೇ ಮಾನವ ಹಕ್ಕುಗಳು ಬೇಕಾಗುತ್ತವೆ. ಅದಕ್ಕಾಗಿಯೇ ಮಾನವ ಹಕ್ಕುಗಳನ್ನು ರಚಿಸಲಾಗಿದ್ದು, ಸಂವಿಧಾನದ 21 ಪರಿಚ್ಛೇದದಲ್ಲಿ ಮಾನವ ಹಕ್ಕುಗಳು ಗುರುತಿಸಲ್ಪಡುತ್ತವೆ ಎಂದು ಮಾನವ ಹಕ್ಕುಗಳ ಪ್ರತಿಪಾದಕ ಡಾ. ಲೋಹಿತ್ ನಾಯ್ಕರ್ ತಿಳಿಸಿದರು.

ದಾವಣಗೆರೆ ನಗರದ ಆ‌ರ್ ಎಲ್ ಕಾನೂನು ಕಾಲೇಜಿನಲ್ಲಿ ನಡೆದ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಪ್ರತಿಯೊಬ್ಬರೂ ಸಾಮಾಜಿಕ ಜೀವಿ. ಹಾಗಾಗಿ ಎಲ್ಲರೂ ಕೂಡಿರಬೇಕು. ಪರಸ್ಪರ ಅಪೇಕ್ಷೆಗಳಂತೆ ಇರಬೇಕು. ಅದಕ್ಕಾಗಿ ರಾಜಕೀಯ ವ್ಯವಸ್ಥೆ ಸಹ ಇರಬೇಕಾಗುತ್ತದೆ. ಸಾಮಾಜಿಕ, ಆರ್ಥಿಕ, ವೈಯಕ್ತಿಕ ಅವಶ್ಯಕತೆಗೆ ಅನುಗುಣವಾಗಿ ಮಾನವ ಹಕ್ಕುಗಳು ರೂಪಿತವಾಗಿವೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವೈಯಕ್ತಿಕ ಅಭಿಲಾಷೆ ಪೂರೈಸಲು ಹಕ್ಕುಗಳು ಇರಬೇಕು. ಅವಶ್ಯಕತೆಯಿಂದ ಹಕ್ಕುಗಳು ಉದ್ಭವವಾಗುತ್ತವೆ. ಅದಕ್ಕೆ ರೂಪುರೇಷೆ ನೀಡುವ ಜೊತೆಗೆ ಸಮಾನ ವಿತರಣೆಗೆ ನ್ಯಾಯಾಂಗ ಇರಬೇಕು. ಆರ್ಥಿಕ, ಸಾಮಾಜಿಕ, ಸಾಂಸ್ಕೃತಿಕ ನ್ಯಾಯ ಇರುತ್ತದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ಮಸೀದಿ ಬಳಿ ಕೇಸರಿ ಧ್ವಜ ಕಟ್ಟಲು ವಿರೋಧ; ಗಲಾಟೆ ಆರೋಪ

“ಬೆಳಗಾವಿ ಜಿಲ್ಲೆಯ ವಂಟಿಮುರಿ ಗ್ರಾಮದಲ್ಲಿ ಈಚೆಗೆ ನಡೆದಂತಹ ದುರ್ಘಟನೆಯನ್ನು ಗಮನಿಸಿದ ಉಚ್ಛ ನ್ಯಾಯಾಲಯದ ನ್ಯಾಯ ಮೂರ್ತಿಗಳು ಕಳವಳ ವ್ಯಕ್ತಪಡಿಸಿರುವುದನ್ನು ಎಲ್ಲರೂ ಗಮನಿಸಬೇಕು. ಪಗತಿಪರ ರಾಜ್ಯ, ಅಭಿವೃದ್ಧಿ ಹೊಂದಿದ ಬೆಳಗಾವಿ ಜಿಲ್ಲೆಯ ಘಟನೆ ನೋಡಿದರೆ ಎಲ್ಲೋ ಒಂದು ಕಡೆ ಸಾಮಾಜಿಕ ಹೇಡಿತನ ಕಂಡುಬರುತ್ತದೆ” ಎಂದು ವಿಷಾದಿಸಿದರು.

ಕಾಲೇಜಿನ ಪ್ರಾಚಾರ್ಯ ಡಾ. ಜಿ ಎಸ್ ಯತೀಶ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್ ಎಚ್ ಅರುಣ್ ಕುಮಾರ್ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...