ದಾವಣಗೆರೆ | ಯೂರಿಯಾ ರಸಗೊಬ್ಬರ ಅಭಾವ; ರೈತರ ಬೆಳೆಗಳಿಗೆ ಅಗತ್ಯ ಗೊಬ್ಬರ ಒದಗಿಸಲು ರೈತ ಸಂಘ ಆಗ್ರಹ

Date:

ರೈತರ ಬೆಳೆಗಳ ಬೆಳವಣಿಗೆಗೆ ಸಮಯವಾಗಿರುವ ಕಾರಣ ರೈತರಿಗೆ ಯೂರಿಯಾ ರಸಗೊಬ್ಬರ ಅಭಾವ ಉಂಟಾಗಿದೆ.‌ ಅಗತ್ಯವಾದ ರಸಗೊಬ್ಬರ ಸಮರ್ಪಕ ಪೂರೈಕೆಗಾಗಿ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ(ವಾಸುದೇವ ಮೇಟಿ)ಬಣದಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ತಾಲೂಕು ಕಛೇರಿ ಮುಂಬಾಗ ಪ್ರತಿಭಟನೆ ನಡೆಸಲಾಯಿತು.

ಮಂಗಳವಾರ ಪಟ್ಟಣದ ಪ್ರವಾಸಿ ಮಂದಿರದಿಂದ ಹೊರಟ ಪ್ರತಿಭಟನಾ ಕಾರರು ಸರ್ಕಾರದ ವಿರುದ್ದ ಘೋಷಣೆ ಕೂಗುತ್ತಾ ಮಹಾತ್ಮಗಾಂಧಿ ವೃತ್ತ, ಅಂಬೇಡ್ಕರ್ ವೃತ್ತದ ಮೂಲಕ ತಾಲೂಕು ಕಛೇರಿ ಮುಂಬಾಗ ಜಮಾಯಿಸಿ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.

1002366557

ಈ ವೇಳೆ ಸಂಘದ ತಾಲೂಕು ಅಧ್ಯಕ್ಷ ಕುಮಾರ್ ಭರಮಸಮುದ್ರ ಮಾತನಾಡಿ, “ಅತ್ಯಂತ ಹಿಂದುಳಿದ ತಾಲೂಕು ಜಗಳೂರಿನಲ್ಲಿ ರೈತರು ಹೇರಳವಾಗಿ ಮೆಕ್ಕೆಜೋಳ ಬೆಳೆಯನ್ನೇ ಅವಲಂಬಿಸಿದ್ದಾರೆ. ಕಳೆದ ವಾರದಿಂದ ಮಳೆ ಸುರಿಯುತ್ತಿದ್ದು ಪೈರುಗಳು
ಶೀತಮಯದಿಂದ ಬೆಳವಣಿಗೆ ಕುಂಠಿತಗೊಳ್ಳುತ್ತಿದೆ. ಆದರೆ ಪೋಷಕಾಂಶಭರಿತ ಹಾಗೂ ಶೀತ ನಿಯಂತ್ರಣಕ್ಕಾಗಿ ಅಗತ್ಯವಿರುವ ಯೂರಿಯಾ ರಸಗೊಬ್ಬರ ತಾಲೂಕಿನಾದ್ಯಂತ ಕೊರತೆ ಉಂಟಾಗಿದೆ. ಪ್ರತಿನಿತ್ಯ ರೈತರು ಖಾಸಗಿ ಫರ್ಟಿಲೈಸರ್ ಅಂಗಡಿ, ಕಂಪನಿಗಳ ಮುಂದೆ ಮುಗಿಬಿದ್ದು ರಸಗೊಬ್ಬರಕ್ಕಾಗಿ ಹರಸಾಹಸ ಪಡಬೇಕಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1002366559

“ಅಲ್ಲದೆ ಖಾಸಗಿ ಆಗ್ರೋ ಫರ್ಟಿಲೈಸರ್, ಗೊಬ್ಬರದಂಗಡಿ ಮಾಲೀಕರು ರೈತರಿಂದ ನಿಗದಿತ ದರಕ್ಕಿಂತ ಹೆಚ್ಚು ವಸೂಲಿ ಮಾಡಿ ರೈತರನ್ನು ಶೋಷಿಸುತ್ತಿದ್ದಾರೆ. ಕೃಷಿ ಅಧಿಕಾರಿಗಳು ಕೂಡ ಈ ಬಗ್ಗೆ ಗಮನಹರಿಸುತ್ತಿಲ್ಲ. ಕೂಡಲೇ ಕೃಷಿ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು. ಸರ್ಕಾರ ರಸಗೊಬ್ಬರ ಕೃತಕ ಅಭಾವ ಸೃಷ್ಟಿಸಿರುವುದು ಸರಿಯಲ್ಲ. ಕೂಡಲೇ ಅಗತ್ಯ ಯೂರಿಯಾ ಗೊಬ್ಬರ ಒದಗಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಧರ್ಮಸ್ಥಳ ದೌರ್ಜನ್ಯ ಪ್ರಕರಣಗಳ ನಿಷ್ಪಕ್ಷಪಾತ ತನಿಖೆ, ಆರೋಪಿಗಳ ಶಿಕ್ಷೆಗೆ ಕರ್ನಾಟಕ ಜನಶಕ್ತಿ ಆಗ್ರಹ

ಇದೇ ವೇಳೆ ತಹಶೀಲ್ದಾರ್ ಸೈಯದ್ ಕಲೀಂ ಉಲ್ಲಾ, ಕೃಷಿ ಇಲಾಖೆ ಸಹಾಯಕಿ ನಿರ್ದೇಶಕಿ ಶ್ವೇತಾ ಇದ್ದರು. ಈ ಸಂದರ್ಭದಲ್ಲಿ ರೈತ ಸಂಘದ ಜಿಲ್ಲಾ ಪ್ರಧಾನಕಾರ್ಯದರ್ಶಿ ಲೋಕೇಶ್ ದೊಣೆಹಳ್ಳಿ, ಉಪಾಧ್ಯಕ್ಷ ಬಸವರಾಜ್, ಗೌರವಾಧ್ಯಕ್ಷ ಪಾಲನಾಯಕ, ಪದಾಧಿಕಾರಿಗಳಾದ ತಿಪ್ಪೇಸ್ವಾಮಿ, ಕಿರಣ್ ಕುಮಾರ್, ಚೌಡಮ್ಮ, ಬೊಮ್ಮಕ್ಕ, ಶಿವರಾಜ್,ಚನ್ನಪ್ಪ,
ಏಕಾಂತಪ್ಪ, ಸೂರಜ್ಜ ,ಭೀಮಣ್ಣ, ಸಕ್ರೇಶ್, ಶಿವರಾಜ್, ಡಿಎಸ್ ಎಸ್ ನ ಸತೀಶ್ ಮಲೆಮಾಚಿಕೆರೆ, ವಕೀಲ ಆರ್ ಓಬಳೇಶ್ ಇತರರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...