ದಾವಣಗೆರೆ | ವೀರಶೈವ ಸಮಾಜಕ್ಕೆ ಹೊರಗಿನವರಿಗಿಂತ ಒಳಗಿನ ಶತ್ರುಗಳೇ ಹೆಚ್ಚು: ಸಿರಿಗೆರೆ ತರಳಬಾಳು ಶ್ರೀಗಳು

Date:

ವೀರಶೈವ ಸಮಾಜವು ಇಂದು ಅಂಧಃಪತನದತ್ತ ಸಾಗಲು ವೀರಶೈವರೇ ಕಾರಣ ಎಂದು ಸಿರಿಗೆರೆ ತರಳಬಾಳು ಶ್ರೀಗಳು ನೋವಿನ ನುಡಿ ನುಡಿದರು.

ದಾವಣಗೆರೆ ನಗರದ ಎಂಬಿಎಂ ಕಾಲೇಜು ಮೈದಾನದಲ್ಲಿ ಏರ್ಪಡಿಸಿದ್ದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ 24ನೇ ಮಹಾ ಅಧಿವೇಶನದ ಉದ್ಘಾಟನಾ ಸಮಾರಂಭದ ಸಾನಿಧ್ಯ ವಹಿಸಿ ಮಾತನಾಡಿದರು.

“ವೀರಶೈವ ಸಮಾಜವದರು ಸ್ವಾರ್ಥವನ್ನು ಬದಿಗೆ ಸರಿಸಬೇಕು. ಎಲ್ಲರೂ ಒಂದೇ ಎಂಬ ಭಾವನೆ ಇಟ್ಟುಕೊಂಡು ಸಂಘಟನೆ ಮಾಡಬೇಕು. ನಮ್ಮವರೇ ಶತ್ರುಗಳಂತಾದರೆ, ಯಾವುದೇ ರೀತಿಯ ಸಹಾಯ ಮಾಡದಿದ್ದರೆ ಸಮಾಜ ಒಗ್ಗಟ್ಟಾಗುವುದಾದರೂ ಹೇಗೆ? ಅಭಿವೃದ್ಧಿ ಹೊಂದುವುದಾದರೂ ಹೇಗೆ” ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಮುದಾಯದಲ್ಲಿ ಉಪಪಂಗಡಗಳಾಗಿ ಹೋದರೆ ಯಾವ ಸೌಲಭ್ಯವೂ ಸಿಗುವುದಿಲ್ಲ. ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಆಗದು. ವೀರಶೈವ ಲಿಂಗಾಯತ ಸಮುದಾಯದವರಲ್ಲಿ ಸ್ವಾರ್ಥ ಕಡಿಮೆಯಾಗಬೇಕು. ಸಮಾಜದ ಸಂಘಟನೆಗಾಗಿ ಒಂದಾಗಬೇಕು” ಎಂದು ಶ್ರೀಗಳು ಕರೆ ನೀಡಿದರು.

“ಯಾವುದೇ ಉಪಪಂಗಡಗಳಾಗಲೀ, ವೀರಶೈವ ಲಿಂಗಾಯತರು ಒಂದೇ ಎಂಬ ಭಾವನೆ ಮೂಡುವಂತಾಗಬೇಕು. ತಮ್ಮಲ್ಲಿರುವ ಅಲ್ಪವಾದ ಒಳಭೇದವನ್ನು ತ್ಯಜಿಸಿ ಅನ್ಯೋನ್ಯ ಭಾವದಿಂದ ವರ್ತಿಸಿ ಸಮಾಜ ಒಂದಾಗಬೇಕು. ವೀರಶೈವರ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಡಬೇಕು. ನೂರು ಅಧಿವೇಶನದ ಹಿಂದೆ ಕರೆ ಕೊಡಲಾಗಿದೆ. ಆದರೂ ಕಾರ್ಯರೂಪಕ್ಕೆ ಬರುತ್ತಿಲ್ಲ. ಕಾರ್ಯರೂಪಕ್ಕೆ ಬರುವ ಹಾಗೆ ಪ್ರಯತ್ನಿಸಿ ಸಮಾಜ ಸಂಘಟಿಸಿ, ಒಗ್ಗೂಡಿಸಲಿ” ಎಂದು ಸಲಹೆ ನೀಡಿದರು.

“ಇಲ್ಲಿ ದೀಪ ಹಚ್ಚಲಾಗಿದೆ. ಬೇರೆ ಕಡೆಗಳಲ್ಲಿ ದೀಪ ಕಾಣೆಯಾಗಿರಬಹುದು. ಸಮಾಜದ ಸಂಘಟನೆ ದೃಷ್ಟಿಯಿಂದ ದೀಪ ಹಚ್ಚುವ ಜವಾಬ್ದಾರಿ ಪ್ರತಿಯೊಬ್ಬರದ್ದು. ಅದರಲ್ಲಿಯೂ ಇಂದಿನ ಅಧಿವೇಶನದಲ್ಲಿ ಸನ್ಮಾನಿತರಾಗಿರುವವರ ಜವಾಬ್ದಾರಿ ಹೆಚ್ಚಿದೆ. ಈ ನಿಟ್ಟಿನಲ್ಲಿ ಹೆಚ್ಚಿನ ಕೆಲಸ ಮಾಡಿ” ಎಂದು ಸಿರಿಗೆರೆ ಶ್ರೀಗಳು ಕರೆ ನೀಡಿದರು.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಮಹಾಧಿವೇಶನದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ 24ನೇ ಮಹಾ ಅಧಿವೇಶನಕ್ಕೆ ಸುತ್ತೂರು ಶ್ರೀಕ್ಷೇತ್ರದ ಜಗದ್ಗುರು  ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಚಾಲನೆ ನೀಡಿದರು. ದಿವ್ಯ ಸಾನಿಧ್ಯವನ್ನು ಸಿರಿಗೆರೆ ತರಳಬಾಳು ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಶ್ರೀ ಶೈಲ ಜಗದ್ಗುರುಗಳು, ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ, ಪಂಚಮಸಾಲಿ ಪೀಠದ ವಚನಾನಂದ, ಮಹಾಸಭಾದ ಪ್ರಧಾನ ಕಾರ್ಯದರ್ಶಿ ಈಶ್ವರಖಂಡ್ರೆ‌, ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಸೇರಿದಂತೆ ‌ಸಮಾಜ‌ದ ಬಾಂಧವರು ಹಾಗೂ‌ ಹಲವು ಮಠಾಧೀಶರು ಇದ್ದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ 24ನೇ ಅಧಿವೇಶನ; ಸಮಾಜದ ಕೆಲವರ ಆಕ್ಷೇಪ

ಮುಖ್ಯ ಅತಿಥಿಗಳಾಗಿ ಶಾಸಕರುಗಳಾದ ಡಿ ಜಿ‌ ಶಾಂತನಗೌಡ, ಶಿವಗಂಗಾ ಬಸವರಾಜ್, ಬಿ ಪಿ‌ ಹರೀಶ್, ಬಿ ಕೆ ಸಂಗಮೇಶ್ವರ, ಅಥಣಿ ವೀರಣ್ಣ, ಮಾಜಿ ಸಚಿವ ಎಸ್ ಎ ರವೀಂದ್ರನಾಥ್, ಅಣಬೇರು ರಾಜಣ್ಣ, ಶಂಕರಬಿದರಿ, ಡಾ. ಎ ಎಚ್ ಶಿವಯೋಗಿ ಸ್ವಾಮಿ, ಎಸ್ ಎಸ್ ಗಣೇಶ್, ಸಚ್ಚಿದಾನಂದ ಮೂರ್ತಿ, ಬಿ ಸಿ ಉಮಾಪತಿ, ತಿಪ್ಪಣ್ಣ ಸೇರಿದಂತೆ ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡಿನಿಂದ ಆಗಮಿಸಿದ್ದ ಸಮಾಜದ ಬಾಂಧವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...