ದಾವಣಗೆರೆ | ರುದ್ರಭೂಮಿಯಲ್ಲಿ ಉಪಾಹಾರ ಸೇವಿಸಿ ಅಂಬೇಡ್ಕ‌ರ್ ಪರಿನಿರ್ವಾಣ ದಿನಾಚರಣೆ

Date:

ದಾವಣಗೆರೆ ಜಿಲ್ಲೆ ಜಗಳೂರು ನಗರದ ರುದ್ರಭೂಮಿಯಲ್ಲಿ ಮಾನವ ಬಂಧುತ್ವ ವೇದಿಕೆ ಉಪಹಾರ ಸೇವನೆಯೊಂದಿಗೆ ಡಾ. ಬಿ.ಆ‌ರ್.ಅಂಬೇಡ್ಕ‌ರ್ ಅವರ ಪರಿನಿರ್ವಾಣ ಕಾರ್ಯಕ್ರಮ ಹಾಗೂ ಮೌಢ್ಯ ಪರಿವರ್ತನಾ ದಿನ ಆಚರಣೆ ಮಾಡಿದ್ದಾರೆ.

ಈ ವೇಳೆ ಮಾನವ ಬಂಧುತ್ವ ವೇದಿಕೆ ಜಿಲ್ಲಾ ಸಂಚಾಲಕ ವಕೀಲ ಮರೇನಹಳ್ಳಿ ಬಸವರಾಜ್ ಮಾತನಾಡಿ, ಕಳೆದ ದಶಕದಿಂದ ಮಾನವಬಂಧುತ್ವ ವೇದಿಕೆಯ ರೂವಾರಿಗಳು ಹಾಗೂ ಮಾನ್ಯ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ, ಪ್ರತಿ ಡಿಸೆಂಬರ್ 6ರಂದು ಅಂಬೇಡ್ಕ‌ರ್ ಪರಿನಿರ್ವಾಣದ ಅಂಗವಾಗಿ ಬೆಳಗಾವಿಯ ಸದಾಶಿವನಗರದ ವೀರಶೈವ ರುದ್ರಭೂಮಿಯಲ್ಲಿ ಎರಡು ದಿನಗಳಕಾಲ ವೈಚಾರಿಕ, ವೈಜ್ಞಾನಿಕತೆ ಪ್ರಚಾರ, ಮೌಡ್ಯ ಮುಕ್ತಕ್ಕಾಗಿ ಆಯೋಜಿಸಿತ್ತಿದ್ದ ಸ್ಮಶಾನವಾಸ್ತವ್ಯ ಕಾರ್ಯಕ್ರಮದಲ್ಲಿ ತಾಲೂಕಿನಿಂದ ಭಾಗವಹಿಸಲಾಗುತ್ತಿತ್ತು.

ಪ್ರಸಕ್ತ ವರ್ಷ ಚಳಿಗಾಲ ಅಧಿವೇಶನ ನಡೆಯುತ್ತಿರುವ ಹಿನ್ನೆಲೆ ತಾಲೂಕು ಜಿಲ್ಲಾ ಮಟ್ಟದಲ್ಲಿ ಸ್ಮಶಾನದಲ್ಲಿ ಉಪಹಾರ ಸೇವಿಸಿ ಮೌಢ್ಯತೆ ಪರಿವರ್ತನೆ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖಂಡ ಕಾನನಕಟ್ಟೆ ಪ್ರಭು ಮಾತನಾಡಿ, ಸಂವಿಧಾನದ ಆಶಯಗಳು ಈಡೇರುವವರೆಗೂ ಸಮಾಜದಲ್ಲಿ ಸ್ವಾಸ್ಥ್ಯತೆ ಕಾಪಾಡಲು ಅಸಾಧ್ಯ. ತಳ ಸಮುದಾಯಗಳು ಶಿಕ್ಷಣ ಪಡೆದು ದೇವರುಗಳ ಹೆಸರಿನಲ್ಲಿ ನಡೆಸುವ ಮೂಢನಂಬಿಕೆ, ಕಂದಾಚಾರಗಳಿಂದ ಮುಕ್ತರಾಗಿ ಸಮಾಜದ ಮುಖ್ಯವಾಹಿನಿಗೆ ಬರಬೇಕಿದೆ. ಅಂಬೇಡ್ಕರ್ ಅವರ ಕನಸಿನಂತೆ ಮಹಿಳೆಯರು ದೇವಸ್ಥಾನದ ಮೊರೆಹೋಗದೆ ಗ್ರಂಥಾಲಯಗಳಲ್ಲಿ ಸಾಲುನಿಂತು ಪುಸ್ತಕಗಳನ್ನು ಅಭ್ಯಾಸ ಮಾಡಬೇಕಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ವಕೀಲ ಸಣ್ಣ ಓಬಯ್ಯ ಮಾತನಾಡಿ, ದೇಶಕ್ಕೆ ಸಂವಿಧಾನವೇ ಪವಿತ್ರಗ್ರಂಥವಾಗಿದೆ. ಮನುವಾದಿಗಳಿಂದ ಸಂವಿಧಾನ ತಿರುಚುವ ಹುನ್ನಾರ ನಡೆಯತ್ತಿದೆ. ಸಂವಿಧಾನ ಬದಲಾವಣೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಅದಕ್ಕೆ ದಕ್ಕೆ ಉಂಟಾದರೆ ಹೊರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಆಚರಣೆಯಲ್ಲಿ ಪ್ರಾಂಶುಪಾಲ ಎ.ಡಿ.ನಾಗಲಿಂಗಪ್ಪ, ಮಾನವ ಬಂಧುತ್ವ ವೇದಿಕೆ ತಾಲೂಕು ಸಂಚಾಲಕ ಧನ್ಯಕುಮಾರ್, ಎಚ್.ಎಂ. ಹೊಳೆ, ಡಿಎಸ್‌ಎಸ್ ಸಂಚಾಲಕ ಸತೀಶ್ ಮಲೆಮಾಚಿಕೆರೆ, ಪ್ರಗತಿಪರ ಹೊರಾಟಗಾರ ಮಾದಿಹಳ್ಳಿ ಮಂಜುನಾಥ್, ಸಿದ್ದಮ್ಮನಹಳ್ಳಿ ಬಸವರಾಜ್‌, ಮರೇನಹಳ್ಳಿ ಕುಮಾ‌ರ್, ಗುತ್ತಿದುರ್ಗ ರುದ್ರೇಶ್, ಸ್ವಾಮಿ, ಬಸಯ್ಯ, ನಾಗೇಶ್ ದೊಡ್ಡಬೊಮ್ಮನಹಳ್ಳಿ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...