ದಾವಣಗೆರೆ | ವಸತಿ ರಹಿತರಿಗೆ ಹಕ್ಕುಪತ್ರ ನೀಡಲು ಆಗ್ರಹಿಸಿ ಅಂಬೇಡ್ಕರ್ ಸೇವಾ ಸಮಿತಿ ಅನಿರ್ದಿಷ್ಟ ಧರಣಿ

Date:

ದಲಿತರು ಸೇರಿ ವಸತಿರಹಿತರಿಗೆ ಈ ಮುಂಚೆ ಮಂಜೂರಾಗಿ, ವಾಸವಾಗಿರುವ ಎರಡು ಎಕರೆ ಜಮೀನಿನಲ್ಲಿ ವಾಸವಾಗಿರುವ ನಿವೇಶನ ರಹಿತರಿಗೆ ಹಕ್ಕಪತ್ರಗಳನ್ನು ವಿತರಿಸಬೇಕು. ಇಂದಿರಾಗಾಂಧಿ ವಸತಿ ನಿಲಯದ ಜಮೀನಿಗೆ ಒಟ್ಟುಗೂಡಿಸಿರುವುದನ್ನು ಕೈ ಬಿಡಬೇಕು ಎಂದು ಒತ್ತಾಯಿಸಿ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಹಿರೇಕೋಗಲೂರು ಗ್ರಾಮದಲ್ಲಿ ಅಂಬೇಡ್ಕರ್ ಸೇವಾ ಸಮಿತಿಯ ನೇತೃತ್ವದಲ್ಲಿ ವಸತಿ ರಹಿತರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು..

1003624617

ಈ ವೇಳೆ ಮಾತನಾಡಿದ ಮುಖಂಡ, ಅಂಬೇಡ್ಕರ್ ಸೇವಾ ಸಮಿತಿ ರಾಜ್ಯಾಧ್ಯಕ್ಷ ಸಂದೇಶ್ “ಗ್ರಾಮದ 58 ಎಕರೆ ಜಮೀನನ್ನು ಗ್ರಾಮದ ಅಭಿವೃದ್ಧಿ ಕಾರ್ಯಗಳಿಗೆ ಮೀಸಲಿರಿಸಿದ್ದು, ಅದರ ಎರಡು ಎಕರೆ ಜಮೀನಿನಲ್ಲಿ ಈ ಹಿಂದೆಯೇ ಜಿಲ್ಲಾಧಿಕಾರಿಗಳು ನಿವೇಶನ ರಹಿತರಿಗೆ ವಸತಿಗೆ ಮಂಜೂರು ಮಾಡಿದ್ದರು. ಅಂದಿನಿಂದಲೂ ನಿವೇಶನ ರಹಿತರು ಅಲ್ಲಿ ವಾಸವಿದ್ದಾರೆ. ಇತ್ತೀಚೆಗೆ ಇಂದಿರಾಗಾಂಧಿ ವಸತಿ ಶಾಲೆಗೆ 7 ಎಕರೆ ಜಮೀನನ್ನು ಮಂಜೂರು ಮಾಡಿದ್ದು ಅಧಿಕಾರಿಗಳು ವಸತಿ ರಹಿತರಿಗೆ ಮೀಸಲಿರಿಸಿದ್ದ ಎರಡೂ ಎಕರೆ ಜಮೀನನ್ನು ಸೇರಿಸಿ ಸರ್ವೆ ಸ್ಕೆಚ್ ತಯಾರಿಸಿ ಮಂಜೂರು ಮಾಡಿದ್ದಾರೆ. ಇದು ಅಧಿಕಾರಿಗಳ ಕರ್ತವ್ಯ ಲೋಪ, ನಿರ್ಲಕ್ಷ್ಯವನ್ನು ತೋರಿಸುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಈ ಹಿಂದೆ ಅನಿರೀಕ್ಷಿತವಾಗಿ ಗುಡಿಸಲಿಗಳಿಗೆ ಬೆಂಕಿ ಬಿದ್ದಾಗ ಅಲ್ಲಿನ ಪರಿಸ್ಥಿತಿಯನ್ನು ಗಮನಿಸಿ, ಜಿಲ್ಲಾಧಿಕಾರಿಗಳೇ ನಿವೇಶನ ರಹಿತರಿಗೆ ಮನೆ ಕಟ್ಟಿಕೊಳ್ಳಲು ಎರಡು ಎಕರೆ ಜಮೀನನ್ನು ಮಂಜೂರು ಮಾಡಿದ್ದರು. ಈಗ ಅಧಿಕಾರಿಗಳು ಅದನ್ನು ವಸತಿ ನಿಲಯಕ್ಕೆ ಸೇರಿಸುವ ಉದ್ದೇಶದಿಂದ ಇಲ್ಲಿ ವಾಸವಾಗಿರುವವರನ್ನು ಒಕ್ಕಲಬ್ಬಿಸುವ ಸಂಚುರೂಪಿಸುತ್ತಿದ್ದಾರೆ. ಜನಪ್ರತಿನಿಧಿಗಳು ಕೂಡ ಸಮಸ್ಯೆ ಬಗೆಹರಿಸಲು ನಿರ್ಲಕ್ಷ್ಯ ಧೋರಣೆ ವಹಿಸಿದದ್ದಾರೆ. ಹಲವು ವರ್ಷಗಳಿಂದ ಇಲ್ಲಿ ವಾಸವಾಗಿರುವ ನಿವೇಶನರಹಿತರಿಗೆ ಹಕ್ಕುಪತ್ರಗಳನ್ನು ಜಿಲ್ಲಾಡಳಿತ ನೀಡಬೇಕು. ವಸತಿ ರಹಿತರಲ್ಲಿ ಬಹುತೇಕ ದಲಿತರೇ ಹೆಚ್ಚಿದ್ದಾರೆ. ಉಳಿದಿರುವ ಇತರೆ ಜಮೀನಿನಲ್ಲಿ ಇನ್ನೂ ಎರಡು ಎಕರೆ ಹೆಚ್ಚು ವಸತಿ ಶಾಲೆಗೆ ನೀಡಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1003624627

“ಮೂರು ದಿನಗಳಿಂದ ಪ್ರತಿಭಟನೆ ಕುಳಿತಿದ್ದರೂ ಯಾವುದೇ ತಾಲೂಕು ಮಟ್ಟದ ಮತ್ತು ಜಿಲ್ಲಾಮಟ್ಟದ ಅಧಿಕಾರಿಗಳು ಬಂದು ಭೇಟಿ ಮಾಡಿಲ್ಲ, ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಿಲ್ಲ. ಯಥಾ ಸ್ಥಿತಿ ಕಾಯ್ದುಕೊಳ್ಳುವಂತೆ ಉಪವಿಭಾಗಾಧಿಕಾರಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ನಿವೇಶನ ರಹಿತರಿಗೆ ಹಕ್ಕುಪತ್ರಗಳನ್ನು ನೀಡುವವರೆಗೂ ಅನಿರ್ದಿಷ್ಟಾವಧಿಯ ಹೋರಾಟ ಮುಂದುವರಿಸುತ್ತೇವೆ” ಎಂದು ಜಿಲ್ಲಾ ಘಟಕದ ಅಧ್ಯಕ್ಷ ಕುಮಾರ್ ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಬಸ್ ನಿಲ್ದಾಣದಲ್ಲಿ ಸುರಕ್ಷತೆಗೆ ಸಿಸಿಟಿವಿ ಅಳವಡಿಕೆಗೆ ಆಮ್ ಆದ್ಮಿ ಪಕ್ಷದ ಒತ್ತಾಯ

ಪ್ರತಿಭಟನೆಯಲ್ಲಿ ಅಂಬೇಡ್ಕರ್ ಸೇವಾ ಸಮಿತಿಯ ದಾವಣಗೆರೆ ಜಿಲ್ಲಾ ಗೌರವ ಅಧ್ಯಕ್ಷ ಮಂಜಪ್ಪ ನೀತಿಗೆರೆ, ರಾಜ್ಯ ವಿಭಾಗೀಯ ಸಂಚಾಲಕ ಭರ್ಮಪ್ಪ ಎಂಟು ಮನಿ,ಜಿಲ್ಲಾ ಉಪಾಧ್ಯಕ್ಷ ನವಿಲಿಹಾಳ್ ಕೃಷ್ಣಪ್ಪ, ತಾಲೂಕ್ ಅಧ್ಯಕ್ಷ ಪ್ರವೀಣ್ ಕೆ ಪಿ. ಹಿರೇಕೋಗಲೂರು, ಚಿತ್ರದುರ್ಗ ತಾಲೂಕ ಅಧ್ಯಕ್ಷ ಕಿರಣ್ ಅಂದನೂರು
ಸೇರಿದಂತೆ ಇತರ ಮುಖಂಡರು ಕಾರ್ಯಕರ್ತರು ಹಾಗೂ ವಸತಿ ರಹಿತರು ಭಾಗವಹಿಸಿದ್ದಾರೆ.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...