ದಾವಣಗೆರೆ | ವೇತನ ಹೆಚ್ಚಿಸುವಂತೆ ಅಂಗನವಾಡಿ ಕಾರ್ಯಕರ್ತೆಯರು, ಬಿಸಿಯೂಟ ತಯಾರಕರ ಒತ್ತಾಯ

Date:

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಬಿಸಿಯೂಟ ತಯಾರಕರಿಗೆ ವೇತನ ಹೆಚ್ಚಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಬಿಸಿಯೂಟ ತಯಾರಕರ ಸಂಘಟನೆ ಲೋಕಸಭಾ ಸದಸ್ಯ ಜಿ.ಎಂ. ಸಿದ್ದೇಶ್ವರಗೆ ಮನವಿ ಸಲ್ಲಿಸಿದರು.

ದಾವಣಗೆರೆಯ ಜಿಎಂಐಟಿ ಕ್ಯಾಂಪಸ್‌ನ ಆವರಣದಲ್ಲಿರುವ ಅತಿಥಿ ಗೃಹಕ್ಕೆ ತೆರಳಿ ಎಐಟಿಯುಸಿ ನೇತೃತ್ವದ ಅಂಗನವಾಡಿ ಕಾರ್ಯಕರ್ತೆಯರ ಸಂಘಟನೆ ಮತ್ತು ಬಿಸಿಯೂಟ ತಯಾರಕರ ಸಂಘಟನೆ ಕಾರ್ಯಕರ್ತೆಯರು ಜಿ.ಎಂ.ಸಿದ್ದೇಶ್ವರ  ಎದುರು ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ಕೆಲಸಕ್ಕೆ ತಕ್ಕಂತೆ ವೇತನ ದೊರೆಯುತ್ತಿಲ್ಲ. ಸಂಸದರ ಗಮನಕ್ಕೆ ತಂದು ಮುಂಬರುವ ಬಜೆಟ್ ನಲ್ಲಿ ಸ್ಕೀಮ್ ವರ್ಕರ್ಸ್ ಗಳಿಗೆ ಕನಿಷ್ಠ ವೇತನ ಜಾರಿಗೊಳಿಸುವುದು, ನಿವೃತ್ತಿ ಪಿಂಚಣಿ ಜಾರಿಗೊಳಿಸುವುದು, ಆರೋಗ್ಯ ವಿಮೆ, ಗ್ರಾಚ್ಯುಟಿ, ಮರಣ ಪರಿಹಾರ ಹಾಗೂ ಮತ್ತಿತರೆ ಬೇಡಿಕೆಗಳ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆದು ಒತ್ತಾಯ ಮಾಡಬೇಕೆಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಕ್ಕೆ ಸಂಸದರು ಸಕಾರಾತ್ಮಕವಾಗಿ ಸ್ಪಂದಿಸಿ ಕೇಂದ್ರದಲ್ಲಿ ಈ ಕುರಿತು ಸಂಬಂಧಿಸಿದಂತೆ ಇಲಾಖೆ ಮತ್ತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಒತ್ತಾಯಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ.

ಈ ವೇಳೆ ಎಐಟಿಯುಸಿ ರಾಜ್ಯ ಕಾರ್ಯದರ್ಶಿ ಕಾಮ್ರೇಡ್ ಆವರಗೆರೆ ಚಂದ್ರು, ಅಂಗನವಾಡಿ ಕಾರ್ಯಕರ್ತೆಯರ ಸಂಘಟನೆಯ ಜಿಲ್ಲಾಧ್ಯಕ್ಷೆ ಕಾಂ ಎಂ.ಬಿ. ಶಾರದಮ್ಮ, ಪ್ರಧಾನ ಕಾರ್ಯದರ್ಶಿ ಮಲ್ಲಮ್ಮ, ಖಜಾಂಚಿ ವಿಶಾಲಾಕ್ಷಿ, ಮುಖಂಡರುಗಳಾದ ನಿರ್ಮಲ, ಗೀತಾ, ರೇಣುಕಮ್ಮ, ಅಶ್ವಿನಿ, ಜಿಲ್ಲಾ ಸಂಚಾಲಕ ಆವರಗೆರೆ ವಾಸು, ಎಐವೈಎಫ್‌ನ ಕೆರನಹಳ್ಳಿ ರಾಜು, ಸುಶೀಲಮ್ಮ, ಭರಮಕ್ಕ, ಬಿಸಿಯೂಟ ತಯಾರಕರ ಮುಖಂಡರುಗಳಾದ ಸರೋಜಾ, ಜ್ಯೋತಿ ಲಕ್ಷ್ಮಿ, ಪದ್ಮಾ, ಸುಭದ್ರಮ್ಮ, ಮಂಜುಳಾ ಇತರ ಕಾರ್ಯಕರ್ತರು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...