ದಾವಣಗೆರೆ | ಮಾಜಿ ಸೈನಿಕರ ಚಟುವಟಿಕೆಗಳಿಗೆ ಸಭೆಗಳಿಗೆ ಸೈನಿಕರ ಭವನ, ಜಮೀನು ಮಂಜೂರಿಗೆ ಒತ್ತಾಯಿಸಿ ಮನವಿ

Date:

ಮಾಜಿ ಸೈನಿಕರ ಕಾರ್ಯ ಚಟುವಟಿಕೆಗಳಿಗಾಗಿ, ಅವರ ಕುಟುಂಬದ ಸಭೆ ಸಮಾರಂಭಗಳಿಗಾಗಿ ಅವಳಿ ತಾಲ್ಲೂಕಿನಲ್ಲಿ ಸೈನಿಕರ ಭವನ ನಿರ್ಮಾಣ ಮಾಡಬೇಕು, ಎಂಬ ಉದ್ದೇಶದಿಂದ 2 ಎಕರೆ ಜಮೀನು ಕೊಡಬೇಕು ಎಂದು ಆಗ್ರಹಿಸಿ ಹೊನ್ನಾಳಿ ಮತ್ತು ನ್ಯಾಮತಿ ತಾಲೂಕು ಮಾಜಿ ಸೈನಿಕರ ಕ್ಷೇಮಾಭಿವೃದ್ಧಿ ಸಂಘ(ರಿ) ದಿಂದ ಇಂದು ತಹಶೀಲ್ದಾರ್ ಮತ್ತು ಪುರಸಭೆಯ ಅಧ್ಯಕ್ಷರು, ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಲಾಯಿತು.

1002419705

ಈ ವೇಳೆ ಮಾತನಾಡಿದ ಮಾಜಿ ಸೈನಿಕರ ಕ್ಷೇಮಾಭಿವೃದ್ಧಿ ಸಂಘದ ಮುಖಂಡರು, “ಹಲವು ವರ್ಷಗಳಿಂದ ಸೈನಿಕರ ಭವನ ನಿರ್ಮಾಣಕ್ಕೆ ವಿನಂತಿಸಿ ಸಂಬಂಧಪಟ್ಟ ಎಲ್ಲಾ ಇಲಾಖೆಯ ಅಧಿಕಾರಿಗಳಿಗೂ ಮತ್ತು ಜನಪ್ರತಿನಿಧಿ ಗಳಿಗೂ ಮನವಿಯನ್ನು ಕೊಡುತ್ತಾ ಬಂದಿದ್ದೇವೆ. ಆದರೂ ಇದರ ಬಗ್ಗೆ ಕ್ರಮ ಕೈಗೊಂಡಿಲ್ಲ. ಹಾಗಾಗಿ ಮತ್ತೊಮ್ಮೆ ಕೊಟ್ಟ ಮನವಿಯ ಬಗ್ಗೆ ಎಲ್ಲರ ಗಮನಕ್ಕೆ ತಂದು ಮಂಜೂರು ಮಾಡಲು ಒತ್ತಾಯಿಸಿದ್ದೇವೆ. ಸೈನಿಕರ ಭವನ ಮತ್ತು ಸೈನಿಕರ ನಗರದ ಬಗ್ಗೆ ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಡಲಾಗಿದೆ” ಎಂದು ತಿಳಿಸಿದರು.

1002419706

“ಮನವಿಗೆ ಎಲ್ಲಾ ಅಧಿಕಾರಿಗಳೂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.‌ ಕೂಡಲೇ ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದು ಮುಂದಿನ ಹಂತಕ್ಕೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಜಾತಿ ಗಣತಿ ಸಮೀಕ್ಷೆ ಮಂಡಿಸಿ, ಅಧಿವೇಶನದಲ್ಲಿ ಒಳಮೀಸಲಾತಿ ಜಾರಿಗೊಳಿಸಿ; ದಲಿತ ಸಂಘರ್ಷ ಸಮಿತಿ

ಈ ಸಂದರ್ಭದಲ್ಲಿ ತಾಲ್ಲೂಕಿನ ತಹಶೀಲ್ದಾರ್ ಹಾಗೂ ದಂಡಾಧಿಕಾರಿಗಳಾದ ಸಿ ರಾಜೇಶ್ ಕುಮಾರ್, ಪುರಸಭೆಯ ಅಧ್ಯಕ್ಷರಾದ ಮೈಲಪ್ಪ, ಮುಖ್ಯಾಧಿಕಾರಿಗಳಾದ ಲೀಲಾವತಿ, ಪುರಸಭೆ ಸದಸ್ಯ ರಾಜೇಂದ್ರ, ಮಂಜು ಇಂಚರ, ವಿಜೇಂದ್ರಪ್ಪ, ಸೈನಿಕರ ಕ್ಷೇಮಾಭಿವೃದ್ಧಿ ಸಂಘದ ಸಂಘದ ಸಂಸ್ಥಾಪಕ ಅಧ್ಯಕ್ಷರು ಹಾಗೂ ಹಾಲಿ ಗೌರವಾಧ್ಯಕ್ಷರಾದ ವಾಸಪ್ಪ ಎಂ, ಉಪಾಧ್ಯಕ್ಷರಾದ ರಾಮಪ್ಪನವರು, ಕಾರ್ಯದರ್ಶಿಗಳಾದ ಗಂಗಾಧರ್, ಖಜಾಂಚಿ ತೋಟಪ್ಪ, ನಿರ್ದೇಶಕ ಜಯಪ್ಪ, ರವಿಕುಮಾರ್ ಸೂರಗೊಂಡನಕೊಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...