“ಸುಪ್ರೀಂ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ವಕೀಲ ರಾಕೇಶ್ ಕಿಶೋರ ಶೂ ಎಸೆಯಲು ಪ್ರಯತ್ನಿಸಿ ಅವಮಾನ ಮಾಡಿರುವುದರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಹಾಗೂ ವಕೀಲನನ್ನು ತಕ್ಷಣ ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕು” ಎಂದು ದಸಂಸ ದಾವಣಗೆರೆ ಜಿಲ್ಲಾ ಸಂಚಾಲಕ ಕುಂದವಾಡ ಮಂಜುನಾಥ ಆಗ್ರಹಿಸಿದ್ದಾರೆ.
“ಬೌದ್ಧ ಸಮುದಾಯಕ್ಕೆ ಸೇರಿರುವ ನ್ಯಾ. ಬಿ.ಎಸ್.ಗವಾಯಿ ಅವರು ಹಲವು ಸಾಮಾಜಿಕ ಸಮಸ್ಯೆಗಳನ್ನು ಎದುರಿಸಿ ಸಾಂವಿಧಾನಿಕ ಉನ್ನತ ಸ್ಥಾನಕ್ಕೇರಿದ್ದಾರೆ. ಇದನ್ನು ಸಹಿಸದ ಮನುವಾದಿಗಳು ದಾಳಿಗೆ ಮುಂದಾಗಿವೆ. ಸಂವಿಧಾನ ಜಾರಿಗೆ ಬಂದ 75 ವರ್ಷಗಳ ನಂತರವೂ ಮನುವಾದಿಗಳ ಮನಸ್ಸಲ್ಲಿ ಇನ್ನು ದಲಿತ ಸಮುದಾಯವನ್ನು ನೋಡುವ ದೃಷ್ಠಿ ಬದಲಾಗಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಮುಖ್ಯನ್ಯಾಯಮೂರ್ತಿಗಳಾದ ಬಿ.ಎಸ್.ಗವಾಯಿ ಅವರ ಜೊತೆಯಾಗಿ ನಿಲ್ಲುವ ದಲಿತ ಸಂಘರ್ಷ ಸಮಿತಿ ಹಾಗೂ ಕೋಟ್ಯಂತರ ಜಾತ್ಯತೀತ ಮನಸ್ಸುಗಳು ಈ ಘಟನೆಯನ್ನು ತೀವ್ರವಾಗಿ ಖಂಡಿಸುತ್ತವೆ” ಎಂದು ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆತ: ಕಾನೂನಿನ ಶಿಷ್ಟತೆ ಕಾಪಾಡುವವರಿಂದಲೇ ಸಂವಿಧಾನದ ಕಗ್ಗೊಲೆ
“ಸುಪ್ರೀಂ ಕೋರ್ಟ್ನಲ್ಲಿ ನಡೆದ ಘಟನೆಯನ್ನು ಕೆಲವು ಮನುವಾದಿ ಮನಸ್ಸುಗಳು ಸಂಭ್ರವಿಸುತ್ತವೆ ಇಂತಹವರ ವಿರುದ್ದ ಕಠಿಣ ಕಾನೂನು ಕ್ರಮ ಜರುಗಿಸಬೇಕು” ಎಂದು ಒತ್ತಾಯಿಸಿದರು.





