ದಾವಣಗೆರೆ | ಕನಿಷ್ಠ ವೇತನ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

Date:

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ 2025ರ ಜನವರಿಯಲ್ಲಿ ನಡೆದಿದ್ದ ಆಶಾ ಕಾರ್ಯಕರ್ತೆಯರ ರಾಜ್ಯ ಮಟ್ಟದ ಅನಿರ್ದಿಷ್ಟ ಹೋರಾಟದಲ್ಲಿ ನೀಡಿದ ಭರವಸೆಯಂತೆ ಕನಿಷ್ಠ ಹತ್ತು ಸಾವಿರ ರೂಪಾಯಿ ಪ್ರೋತ್ಸಾಹ ಧನ ಮತ್ತು ಇತರ ಬೇಡಿಕೆಗಳ ಈಡೇರಿಕೆಗೆ ಕ್ರಮ ಕೈಗೊಳ್ಳದ ಹಾಗೂ ಈವರೆಗೆ ಸ್ಪಷ್ಟ ಆದೇಶ ನೀಡದ ಸರ್ಕಾರ ಮತ್ತು ಆರೋಗ್ಯ ಇಲಾಖೆಯ ನಿರ್ಲಕ್ಷ್ಯ ಧೋರಣೆ ಖಂಡಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ದಾವಣಗೆರೆ ನಗರದ ಜಯದೇವ ವೃತ್ತದಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಮುಖಂಡರು “2025 ಜನವರಿ 7 ರಿಂದ 10 ನೇ ತಾರೀಖಿನವರೆಗೆ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ, ಆಶಾ ಕಾರ್ಯಕರ್ತೆಯರ ರಾಜ್ಯ ಮಟ್ಟದ ಅನಿರ್ದಿಷ್ಟ ಹೋರಾಟವು ರೂ.15,000 ನಿಶ್ಚಿತ ಗೌರವಧನಕ್ಕಾಗಿ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದಿತ್ತು.‌ ಈ ವೇಳೆ ಮುಖ್ಯಮಂತ್ರಿಗಳು ಸಂಘದ ಪದಾಧಿಕಾರಿಗಳನ್ನು ಕರೆದು ಆರೋಗ್ಯ ಸಚಿವರು, ಆರೋಗ್ಯ ಇಲಾಖೆಯ ಉನ್ನತ ಅಧಿಕಾರಿಗಳ ಉಪಸ್ಥಿತಿಯಲ್ಲಿ ಸಭೆ ಮಾಡಿ ಮಾಸಿಕ ಹತ್ತು ಸಾವಿರ ರೂಪಾಯಿ ಪ್ರೋತ್ಸಾಹ ಧನ ಮತ್ತು ಹೆಚ್ಚುವರಿ ಕೆಲಸಕ್ಕೆ ಇನ್ಸೆಂಟೀವ್ ಕೊಡುವುದು ಸೇರಿದಂತೆ ಹಲವು ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದ್ದರು.‌ ಆದರೆ ಸರ್ಕಾರ ಮತ್ತು ಆರೋಗ್ಯ ಇಲಾಖೆ ಪ್ರೋತ್ಸಾಹ ಧನ ಮತ್ತು ಇತರ ಬೇಡಿಕೆಗಳ ಈಡೇರಿಕೆಗೆ ಇದುವರೆಗೂ ಕ್ರಮ ಕೈಗೊಳ್ಳದೇ ಹಾಗೂ ಈವರೆಗೆ ಸ್ಪಷ್ಟ ಆದೇಶ ನೀಡದೇ ವಂಚಿಸುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.‌

1002328912

“ಈ ಕೂಡಲೇ ಅಂದು ನೀಡಿದ ಭರವಸೆಯಂತೆ ಬೇಡಿಕೆ ಈಡೇರಿಸುವ ಜೊತೆಗೆ ನಗರದ ಆಶಾ ಕಾರ್ಯಕರ್ತೆಯರ ಹೆಚ್ಚುವರಿ ಕೆಲಸ ಮತ್ತು ನಗರ ಜೀವನದ ದುಬಾರಿ ಖರ್ಚು ವೆಚ್ಚಗಳಿಗೆ ಅನುಗುಣವಾಗಿ ಕನಿಷ್ಠ ರೂ.2000ರಷ್ಟು ಗೌರವಧನವನ್ನು ಹೆಚ್ಚಿಗೆ ಮಾಡಬೇಕು. ಯಾವುದೇ ಪರಿಹಾರ ನೀಡದೇ 60 ವರ್ಷ ವಯಸ್ಸಿನ ಆಶಾ ಕಾರ್ಯಕರ್ತೆಯರಿಗೆ ಧಿಡೀರನೆ ತೆಗೆದು ನಿವೃತ್ತಿ ಮಾಡಿರುತ್ತಾರೆ. ಸೇವಾ ನಿವೃತ್ತಿ ಪಡೆಯುವ ಕಾರ್ಯಕರ್ತೆಯರಿಗೆ ಪಶ್ಚಿಮ ಬಂಗಾಳ ರಾಜ್ಯದಲ್ಲಿ ಇರುವಂತೆ ರೂ.5 ಲಕ್ಷ ನೀಡುವ ಬಗ್ಗೆ ನಿರ್ಣಯಿಸಬೇಕು. ಮತ್ತೊಂದೆಡೆ, ಆಶಾ ಕಾರ್ಯಕರ್ತೆಯರಿಗೆ ಪ್ರತೀ ತಿಂಗಳು ಸರಿಯಾಗಿ ವೇತನ ಆಗುತ್ತಿಲ್ಲ. ಈಗಲೂ ರಾಜ್ಯದಾದ್ಯಂತ 2-3 ತಿಂಗಳ ಪ್ರೋತ್ಸಾಹಧನ ಟಾಕಿ ಇದೆ. ಈ ಬಗ್ಗೆ ತುರ್ತು ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಾವಣಗೆರೆ ನಗರದ ಜಯದೇವ ಸರ್ಕಲ್ ನಲ್ಲಿ ಆಶಾ ಸಂಘಟನೆಯ ದಾವಣಗೆರೆ ಜಿಲ್ಲಾ ಸಮಿತಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿಗಳಿಗೆ ಮಾಯಕೊಂಡ ಶಾಸಕರಾದ ಕೆ ಎಸ್ ಬಸವಂತಪ್ಪರವರ ಮೂಲಕ ಮನವಿ ಸಲ್ಲಿಸಲಾಯಿತು.

1002328910

ನೂರಾರು ಆಶಾ ಕಾರ್ಯಕರ್ತೆಯರು ಜಯದೇವ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಮಾನ್ಯ ಗಣಿ ಮತ್ತು ಭೂವಿಜ್ಞಾನ ಮತ್ತು ತೋಟಗಾರಿಕೆ ಸಚಿವರು ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಮಾನ್ಯ ಎಸ್.ಎಸ್.ಮಲ್ಲಿಕಾರ್ಜುನ್ ರವರ ಮನೆಯವರೆಗೆ ತೆರಳಿ ಮಾನ್ಯ ಸಂಸದರು ಹಾಗೂ ದಾವಣಗೆರೆ ಉತ್ತರ ವಲಯ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀಯುತ ಶಾಮನೂರು ಶಿವಶಂಕರಪ್ಪ ನವರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಲಾಯಿತು.‌

ಈ ಸುದ್ದಿ ಓದಿದ್ದೀರಾ? ಶಕ್ತಿ ಯೋಜನೆ | ರಾಜ್ಯಾದ್ಯಂತ 500 ಕೋಟಿ ಮಹಿಳೆಯರ ಪ್ರಯಾಣ: ಕಾರ್ಮಿಕರಿಗೆ ಸುಲಭ ಸಂಚಾರ, ಆರ್ಥಿಕ ಬಲ

ಪ್ರತಿಭಟನೆಯಲ್ಲಿ ಆಶಾ ಕಾರ್ಯಕರ್ತೆಯರ ಸಂಘಟನೆಯ ಜಿಲ್ಲಾ ಗೌರವಾಧ್ಯಕ್ಷ ಮಂಜುನಾಥ್ ಕುಕ್ಕುವಾಡ, ಎಐಯುಟಿಯುಸಿ ಜಿಲ್ಲಾ ಖಜಾಂಚಿ ತಿಪ್ಪೇಸ್ವಾಮಿ ಅಣಬೇರು, ಮುಖಂಡ ಮಧು ತೊಗಲೇರಿ, ಆಶಾ ಸಂಘಟನೆಯ ಜಿಲ್ಲಾ ಅಧ್ಯಕ್ಷೆ ಲಲಿತಮ್ಮ ನರಗನಹಳ್ಳಿ, ಜಿಲ್ಲಾ ಕಾರ್ಯದರ್ಶಿ ನಾಗವೇಣಿ ಹಿರೇಮಳಲಿ, ಮುಖಂಡರಾದ ಹಾಲಮ್ಮ, ತಿಪ್ಪಮ್ಮ ನೀರ್ಥಡಿ, ಎಸ್.ಆರ್. ಇಂದಿರಾ, ರೀಟಾ, ಹಳದಮ್ಮ, ರೂಪ, ಮುಂಜುಳಾ ಕೊಂಡದಹಳ್ಳಿ, ಲಕ್ಷ್ಮೀದೇವಿ, ಮಂಜಮ್ಮ ಚೀಲೂರು, ಲೀಲಾವತಿ, ಫರ್ವೀನ್ ಬಾನು ಇತರರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...