ದಾವಣಗೆರೆ | ಪೌರ ಕಾರ್ಮಿಕರ ಮೇಲೆ ಹಲ್ಲೆ: ರಕ್ಷಣೆ ಸೂಕ್ತ ಕ್ರಮಕ್ಕೆ ದಲಿತ ಸಂಘರ್ಷ ಸಮಿತಿ ಆಗ್ರಹ

Date:

ದಾವಣಗೆರೆ ಜಿಲ್ಲೆ ಮಹಾನಗರ ಪಾಲಿಕೆಯ 4ನೇ ವಾರ್ಡ್ ಕಸ ಸಂಗ್ರಹಣೆ ಸಮಯದಲ್ಲಿ ವಾಹನದ ಚಾಲಕ ಮತ್ತು ಪೌರ ಕಾರ್ಮಿಕರ ಮೇಲೆ ಹಲ್ಲೆ ಮಾಡಲು ಮುಂದಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಸಾರ್ವಜನಿಕವಾಗಿ ಹಾನಿಗೊಳಿಸಿ ಗಲಾಟೆ ಮಾಡಿದವರ ವಿರುದ್ದ ಸೂಕ್ತ ಕ್ರಮ ಹಾಗೂ ಪಾಲಿಕೆಯ ಎಲ್ಲಾ ವಿಭಾಗದ ಕಾರ್ಮಿಕರಿಗೆ ಸೂಕ್ತ ಕಾನೂನು ರಕ್ಷಣೆ ನೀಡುವಂತೆ ಕೋರಿ ಮನವಿ ದಲಿತ ಸಂಘರ್ಷ ಸಮಿತಿಯ ಮುಖಂಡರು ದಾವಣಗೆರೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.‌

ಮನವಿ ಸಲ್ಲಿಸಿ ಮಾತನಾಡಿದ ಮುಖಂಡರು “ದಾವಣಗೆರೆ ನಗರದ ಮೆಹಬೂಬ್ ನಗರದಲ್ಲಿ 4ನೇ ಕ್ರಾಸಿನಲ್ಲಿ ದಿನನಿತ್ಯದಂತೆ ಮನೆ-ಮನೆ ಕಸ ಸಂಗ್ರಹಣೆಗಾಗಿ ಪಾಲಿಕೆ ಕಸ ಸಂಗ್ರಹಣೆ ವಾಹನವು ಕೆಲಸ ನಿರ್ವಹಿಸಲು ಹೋಗಿದೆ. ಆ ಸಮಯದಲ್ಲಿ ಹಸಿ ಕಸ-ಒಣ ಕಸ ಹಾಗೂ ಹಾನಿಕಾರಕ ಕಸಗಳನ್ನು ಬೇರ್ಪಡಿಸಿ ನೀಡುವುದು ಪ್ರತಿನಿತ್ಯ ಕಸ ಸಂಗ್ರಹಣ ವಾಹನದಲ್ಲಿ ಧ್ವನಿವರ್ಧಕಗಳ ಮೂಲಕ ಹೇಳುತ್ತಿರುತ್ತಾರೆ. ಕೃಷಿ ಬೇರ್ಪಡಿಸಲು ಹೇಳಿದ ಕಾರಣಕ್ಕೆ ಅಲ್ಲಿನ ನಿವಾಸಿಗಳಾದ ನೂರು ಮತ್ತು ಅಜ್ಜು ಮತ್ತು ಇತರರು ಸೇರಿದಂತೆ ಬಂದು ಚಾಲಕನನ್ನು ದೊಣ್ಣೆಗಳಿಂದ ಹಲ್ಲೆ ಮಾಡಲು ಮುಂದಾಗಿ ಸರ್ಕಾರಿ ವಾಹನದ ಮೇಲೆ ಹೊಡೆದು ಮೀಟರ್ ಮುರಿದು ವಾಹನಕ್ಕೆ ಘಾಸಿಗೊಳಿಸಿರುತ್ತಾರೆ. ಕಸ ಸಂಗ್ರಹಿಸುವ ಸಹಾಯಕ ಕಾರ್ಮಿಕರಿಗೆ ಬಾಯಿಗೆ ಬಂದಂತೆ ಬೈದು ಮೈಮೇಲೆ ಕೈ ಹಾಕಿ ಬಟ್ಟೆಗಳನ್ನು ಹರಿದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

“ದಾವಣಗೆರೆ ಜಿಲ್ಲೆಯಲ್ಲಿ ಸ್ವಚ್ಛತೆಗೆ ಪ್ರಾಮುಖ್ಯತೆ ನೀಡಿರುವ ಆಡಳಿತ ವಿಭಾಗ ಮತ್ತು ಪಾಲಿಕೆಯ ಅಧಿಕಾರಿಗಳು ನೀಡಿದ ಆದೇಶದ ಮೇರೆಗೆ ಪೌರಕಾರ್ಮಿಕರು ಕರ್ತವ್ಯ ನಿರ್ವಹಿಸಿರುತ್ತಾರೆ. ಇಂತಹ ಅಹಿತಕರ ಘಟನೆಗಳು ನಡೆದಾಗ ಕಾರ್ಮಿಕರ ಮೇಲೆ ಹಲ್ಲೆಗೆ ಮುಂದಾದಾಗ ನೇರವಾಗಿ ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆ ಕರ್ತವ್ಯ ನಿರತ ಕಾರ್ಮಿಕರಿಗೆ ಮತ್ತು ಪಾಲಿಕೆ ಎಲ್ಲಾ ಹೊರಗುತ್ತಿಗೆ ಮತ್ತು ಗುತ್ತಿಗೆಯ, ಯು.ಜಿ.ಡಿ. ಕಾರ್ಮಿಕರಿಗೂ ರಕ್ಷಣಾತ್ಮಕ ನಿಯಮಗಳನ್ನು
ಜಾರಿಗೊಳಿಸುವುದು ಅನಿವಾರ್ಯವಾಗಿದೆ” ಎಂದು ಅಭಿಪ್ರಾಯಪಟ್ಟರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪೌರ ಕಾರ್ಮಿಕರು ಹಾಗೂ ಹೊರಗುತ್ತಿಗೆ ನೌಕರರು ಸಮಾಜದ ಗಲೀಜನ್ನು ತಮ್ಮ ಮನೆಯ ಮಕ್ಕಳು ಮಾಡಿರುವ ಗಲೀಜು ಎಂಬ ಮನೋಭಾವದೊಂದಿಗೆ ಸ್ವಚ್ಚಗೊಳಿಸುತ್ತಿರುವುದು ನಮ್ಮ ಕಣ್ಣಿಗೆ ಕಾಣಿಸುತ್ತಿದೆ. ಈ ನಿಟ್ಟಿನಲ್ಲಿ ಪೌರ ಕಾರ್ಮಿಕರಿಗೆ ಸೂಕ್ತವಾದ ಕಾನೂನು ಮತ್ತು ನಿಯಮಗಳನ್ನು ರೂಪಿಸಿ ಅವರಿಗೆ ರಕ್ಷಣೆ ನೀಡಬೇಕು”ಎಂದು ಒತ್ತಾಯಿಸಿದರು.‌

“ಕಾಂಟ್ರಾಕ್ಟ್ ಲೇಬರ್ ಅಬೋಲೇಷನ್ ಆಕ್ಟ್ 1970 ರ ಪ್ರಕಾರ ಗುತ್ತಿಗೆ ಪೌರ ಕಾರ್ಮಿಕರ ರಕ್ಷಣೆ ಸರಿಯಾದ ವೇತನ ನೀಡುವುದು, ವಿಶ್ರಾಂತಿ ಅವರ ಸುರಕ್ಷತೆಯನ್ನು ಕಾಪಾಡುವುದು ಈ ಕಾನೂನಿನ ಕರ್ತವ್ಯವಾಗಿದೆ.‌ ಪೌರ ಕಾರ್ಮಿಕರ ರಕ್ಷಣೆ ಮ್ಯಾನುವಲ್ ಸ್ಯಾವೆಂಜರ್ ಆಕ್ಟ್, ಎಸ್.ಸಿ./ಎಸ್.ಟಿ. ಆಕ್ಟ್, ಲೇಬರ್ ಲಾ, ಮಿನಿಮಮ್ ವೇಜಸ್ ಆಕ್ಟ್, ಇ.ಎಸ್.ಐ./ಪಿ.ಎಫ್. ಮತ್ತು ಅಕ್ಯೂಪೇಷನಲ್ ಸೇಫ್ಟಿ ಕೋಡ್ ಕಾನೂನುಗಳು ಅನ್ವಯಿಸುತ್ತಿದ್ದು ಸಮಾಜದಲ್ಲಿ ಘನತೆ ಮತ್ತು ಗೌರವದಿಂದ ಶಾಂತಿಯುತವಾಗಿ ಕರ್ತವ್ಯ ನಿರ್ವಹಿಸಲು ಈ ಮೇಲಿನ ಕಾನೂನುಗಳ ಬಗ್ಗೆ ಜನಸಾಮಾನ್ಯರಲ್ಲಿ ಮತ್ತು ಕಾರ್ಮಿಕರಲ್ಲಿ ಜಾಗೃತಿ ಮೂಡಿಸಬೇಕು ಮತ್ತು ಪಾಲಿಕೆಯ ಕಾರ್ಮಿಕರ ಮೇಲೆ ಹಲ್ಲೆ ಮಾಡಿದಂತಹ ನೂರು ಮತ್ತು ಅಜ್ಜು ಇತರರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಿ ಅಹಿತಕರ ಘಟನೆಗಳು ಮರುಕಳಿಸದಂತೆ ಕ್ರಮ ವಹಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಅಮೆರಿಕ ಕೃಷಿ ವ್ಯಾಪಾರ ಒಪ್ಪಂದದ ಪ್ರತಿ ಸುಟ್ಟು ರೈತ ಸಂಘ ವಿರೋಧ

ಮನವಿ ಸಲ್ಲಿಸುವ ವೇಳೆ ದಸಂಸ ಮುಖಂಡರಾದ ಲಿಂಗರಾಜು ಗಾಂಧಿನಗರ, ಆದಿಲ್ ಖಾನ್, ಅರುಣ್ ಕುಮಾರ್, ಅಜಯ್ ಕುಮಾರ್, ನಾಗೇಶ್ ಹಾಜರಿದ್ದರು.‌

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ...

ದಾವಣಗೆರೆ | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಮರ್ಥ್ ಶಾಮನೂರು: ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್...

ದಾವಣಗೆರೆ | ದಕ್ಷಿಣ ಕ್ಷೇತ್ರ ಉಪಚುನಾವಣೆ; ಎಸ್ ಟಿ ಮೋರ್ಚಾದ ಶ್ರೀನಿವಾಸ್ ಗೆ ಒಲಿದ ಬಿಜೆಪಿ ಟಿಕೆಟ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮ...

ದಾವಣಗೆರೆ | ಒಳಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯಕ್ಕೆ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಹೋರಾಟ

ಸರ್ವೋಚ್ಛ ನ್ಯಾಯಾಲಯದ ಸಂವಿಧಾನಿಕ ಪೀಠವು ಒಳ ಮೀಸಲಾತಿ ವರ್ಗೀಕರಣ ಹಾಗೂ ಜಾರಿಯ...