ದಾವಣಗೆರೆ ಪಿಜೆ ಬಡಾವಣೆ ಪೊಲೀಸ್ ನಿರೀಕ್ಷಕರಾದ ಗಾಯತ್ರಿ ಹಾಗೂ ಪೊಲೀಸ್ ಸಿಬ್ಬಂದಿಯವರ ಮೇಲಿನ ಹಲ್ಲೆಯನ್ನು ಖಂಡಿಸಿ ದಾವಣಗೆರೆ ಜಿಲ್ಲಾ ನೇಕಾರ ಸಮುದಾಯಗಳ ಒಕ್ಕೂಟ, ಮಹಿಳಾ ಘಟಕ ಹಾಗೂ ನೇಕಾರರ ವೇದಿಕೆ ವತಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಿ ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಒತ್ತಾಯಿಸಿದರು.
ದಾವಣಗೆರೆಯಲ್ಲಿ ಜನವರಿ 31, 2026ರಂದು ಆರೋಪಿಗಳ ಮೇಲೆ ಕ್ರಮ ಕೈಗೊಳ್ಳಲು ಕರ್ತವ್ಯದ ಮೇಲೆ ತೆರಳಿದ್ದ ಬಡಾವಣೆ ಠಾಣೆಯ ವೃತ್ತ ನಿರೀಕ್ಷಕರಾದ ಗಾಯತ್ರಿ ಹಾಗೂ ಪೊಲೀಸ್ ಸಿಬ್ಬಂದಿಯವರ ಮೇಲೆ ಹಲ್ಲೆ ಮಾಡಿ, ನಿಂದಿಸಿರುವುದು ಅಕ್ಷಮ್ಯ ಅಪರಾಧ. ಪ್ರಾಮಾಣಿಕ ಮತ್ತು ನ್ಯಾಯಯುತ ಅಧಿಕಾರಿಯಾದ ಸಿ.ಪಿ.ಐ. ಗಾಯತ್ರಿಯವರು ಹಿಂದುಳಿದ ನೇಕಾರ ಸಮುದಾಯಕ್ಕೆ ಸೇರಿರುವುದು ಅಷ್ಟೇ ಅಲ್ಲದೇ, ಪ್ರಮುಖವಾದ ಜವಾಬ್ದಾರಿಯಲ್ಲಿ ಇರುವ ಇವರಿಗೆ ಹಲ್ಲೆಯಾದರೆ ಸಾಮಾನ್ಯರಿಗೆ ರಕ್ಷಣೆ ಎಲ್ಲಿದೆ? ಎಂಬ ಪ್ರಶ್ನೆ ಕಾಡುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದರು.
“ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಇವರಲ್ಲದೆ ಇನ್ನೂ ಅನೇಕರು ಇವರ ಮೇಲೆ ಹಲ್ಲೆ ಮಾಡಿರುವ ಮಾಹಿತಿ ಇದ್ದು, ತಕ್ಷಣವೇ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಹಾಗೂ ಉಳಿದವರನ್ನು ಬಂಧಿಸಬೇಕು ಎಂದು ಈ ಮೂಲಕ ಆಗ್ರಹಿಸುತ್ತಿದ್ದೇವೆ. ಈ ಘಟನೆಯಿಂದ ದಾವಣಗೆರೆ ಸಾಮಾನ್ಯ ನಾಗರೀಕರು ಈ ವಿಷಯದ ಚರ್ಚಿಸುತ್ತಿದ್ದು, ಹಲವಾರು ಸಂಘ-ಸಂಸ್ಥೆಗಳು ಈ ಘಟನೆಯನ್ನು ಖಂಡಿಸಿದ್ದು, ಸಂಬಂಧಿಸಿದವರ ವಿರುದ್ಧ ಕಾನೂನಿನ ಕ್ರಮಕೈಗೊಳ್ಳದೇ ಹೋದಲ್ಲಿ, ಇಡೀ ರಾಜ್ಯಾದಾದ್ಯಂತ ನೇಕಾರ ಸಮುದಾಯ ಹಾಗೂ ಹಿಂದುಳಿದ ಸಮುದಾಯಗಳು ಬೀದಿಗಿಳಿದು ಹೋರಾಟ ಮಾಡಲಾಗುವುದು ಎಂದು ಎಚ್ಚರಿಸುತ್ತಿದ್ದೇವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸುದ್ದಿ ಓದಿದ್ದೀರಾ? http://ದಾವಣಗೆರೆ | ವಿಶ್ವವಿದ್ಯಾಲಯದ ಘಟಿಕೋತ್ಸವ: ಚಿನ್ನದ ಹುಡುಗಿ ನಯನ ಎನ್ ಬಿ ಏಳು ಪದಕ
ಗೌರವಾಧ್ಯಕ್ಷ ಎಸ್.ಕೆ. ಬಸವರಾಜ್, ಅಧ್ಯಕ್ಷ ಶ್ರೀಕಾಂತ್ ಎಂ ಕಾಕಿ, ಪ್ರಧಾನ ಕಾರ್ಯದರ್ಶಿ ಡಿ.ಎಸ್.ಕೆ. ಪರಶುರಾಮ್, ಖಜಾಂಜಿ ಗಿರಿಮಲ್ಲೇಶ್ ಎಂ. ಸೇರಿದಂತೆ ಪದಾಧಿಕಾರಿಗಳು, ಮಹಿಳೆಯರು ಸೇರಿದಂತೆ ಇತರರು ಭಾಗವಹಿಸಿದ್ದರು.





