ದಾವಣಗೆರೆ | ಅನಾರೋಗ್ಯಕ್ಕೆ ಕಾರಣವಾದ ಅವಲಕ್ಕಿ ಮಿಲ್ ಮಂಡಕ್ಕಿ ಭಟ್ಟಿ ಸ್ಥಳಾಂತರಿಸಿ; ಸ್ಲಂ ಜನಾಂದೋಲನ ಕರ್ನಾಟಕ

Date:

ಸ್ಥಳೀಯ ನಿವಾಸಿಗಳಿಗೆ ಅನಾರೋಗ್ಯ ಉಂಟುಮಾಡುವ ದಾವಣಗೆರೆ ನಗರದ 9 ನೇ ವಾರ್ಡಿನ ಭಾಷಾನಗರದಲ್ಲಿರುವ ರೋಷ್ಟರ್ ಮಷಿನ್, ಅವಲಕ್ಕಿ ಮಿಲ್, ಮಂಡಕ್ಕಿ ಭಟ್ಟಿಗಳನ್ನು ಸ್ಥಳಾಂತರಿಸಬೇಕು. ಇವುಗಳಿಂದ ಬರುವ ಸಣ್ಣ ಸಣ್ಣ ಧೂಳು, ಹೊಗೆ ಇತರ ತ್ಯಾಜ್ಯಗಳಿಂದಾಗಿ ಶ್ವಾಸಕೋಶದ ಆರೋಗ್ಯ ಸಮಸ್ಯೆಗೆ ಜನ ಗುರಿಯಾಗುತ್ತಿದ್ದು, ಮಂಡಕ್ಕಿ ಭಟ್ಟಿ ಸುತ್ತ ಮುತ್ತಲಿನ ಪರಿಸರದಲ್ಲಿ ಜನರಿಗೆ ಆರೋಗ್ಯಕರ ವಾತಾವರಣ ಕಲ್ಪಿಸಬೇಕು ಎಂದು ಆಗ್ರಹಿಸಿ ಸ್ಲಂ ಜನಾಂದೋಲನ ಕರ್ನಾಟಕ ಸಂಘಟನೆ ಮುಖಂಡರು, ಕಾರ್ಯಕರ್ತರು ಹಾಗೂ ಸ್ಥಳೀಯ ನಿವಾಸಿಗಳು ದಾವಣಗೆರೆ ಜಿಲ್ಲಾಡಳಿತ ಭವನದ ಬಳಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

1002273372

ಇದೇ ವೇಳೆ ಮಾತನಾಡಿದ ಸಂಘಟನೆಯ ರಾಜ್ಯ ಗೌರವಾಧ್ಯಕ್ಷ ಆನಂದ್ ಎಸ್ ಎಲ್ “ಇಲ್ಲಿನ ಹಲವಾರು ಜನ ಅಸ್ತಮಾ, ಉಸಿರಾಟ, ಶ್ವಾಸಕೋಶ ಸಂಬಂಧಿ ಕಾಯಿಲೆಗೆ ಅಲ್ಲಿನ ನಿವಾಸಿಗಳು ತುತ್ತಾಗಿದ್ದಾರೆ. ಇಲ್ಲಿನ ಸುತ್ತಮುತ್ತಲಿನ ನಿವಾಸಿಗಳು, ಪಾದಚಾರಿಗಳು ವಾಹನ ಸವಾರರು, ಚಾಲಕರಿಗೆ ಭಟ್ಟಿ, ಮಿಲ್‌ಗಳಿಂದ ಹೊರ ಬರುವ ಧೂಳು, ಬತ್ತದ ಸಿಪ್ಪೆ ಕಣ್ಣುಗಳಲ್ಲಿ ಸೇರಿಕೊಂಡು ತೊಂದರೆ ಅನುಭವಿಸುತ್ತಿದ್ದಾರೆ. ಅನೇಕರು ಕಣ್ಣಿನ ಸಮಸ್ಯೆಗೆ ತುತ್ತಾಗಿದ್ದಾರೆ. ಮಿಲ್‌ನಿಂದ ಬರುವ ತ್ಯಾಜ್ಯ, ಭತ್ತದ ಧೂಳು, ತೌಡುನಿಂದಾಗಿ ಚರಂಡಿ, ಒಳಚರಂಡಿ ಕಟ್ಟಿಕೊಂಡು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಇಡೀ ಸಮಸ್ಯೆಗಳಿಗೆ ಮಂಡಕ್ಕಿ ಭಟ್ಟಿಗಳು, ಅವಲಕ್ಕಿ ಮಿಲ್‌ಗಳು, ರೋಸ್ಟರ್ ಯಂತ್ರಗಳೇ ಕಾರಣವಾಗಿವೆ” ಎಂದು ಆರೋಪಿಸಿದರು.‌

1002273373

“ಚರಂಡಿ, ತ್ಯಾಜ್ಯ ನೀರು ಕುಡಿಯುವ ನೀರಿನ ಪೈಪ್‌ನೊಳಗೆ ಸೇರಿಸಿಕೊಂಡು ಸರಬರಾಜು ಆಗುತ್ತಿದೆ. ಇದೇ ನೀರನ್ನೇ ಅಡುಗೆಗೆ, ದಿನನಿತ್ಯಕ್ಕೆ ಬಳಸುತ್ತಿದ್ದಾರೆ. ಇದರಿಂದಾಗಿ ಕಲುಷಿತ ನೀರು, ಆಹಾರ ಸೇವಿಸಿ. ಜನರು ಆಸ್ಪತ್ರೆಗೆ ಅಲೆದಾಡುವಂತಾಗಿದೆ. ಮಕ್ಕಳು, ಮಹಿಳೆಯರು, ಹಿರಿಯ ನಾಗರೀಕರು ಹೀಗೆ ಜನ ಬದುಕುವುದು ದುಸ್ತರವಾಗಿದೆ”ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1002273374

ಸಂಘಟನೆಯ ಪ್ರಧಾನ ಕಾರ್ಯದರ್ಶಿ ರೇಣುಕಾ ಯಲ್ಲಮ್ಮ ಮಾತನಾಡಿ, “ಈ ಹಿಂದೆ ಸ್ಥಳಾಂತರಕ್ಕೆ ಮನವಿ ಸಲ್ಲಿಸಿದ ವೇಳೆ ಜಿಲ್ಲಾಡಳಿತ ಮಂಡಕ್ಕಿ, ಅವಲಕ್ಕಿ ಭಟ್ಟಿ, ಮಿಲ್‌ಗಳಿಗೆ ಪರ್ಯಾಯ ಜಾಗ ಕಲ್ಪಿಸುವುದಾಗಿ 2021ರಲ್ಲಿ ಜಿಲ್ಲಾಡಳಿತ ಮತ್ತು ಶಾಸಕರು ಭರವಸೆ ನೀಡಿದ್ದರು. ಇದಕ್ಕೆ ಪ್ರತಿಯಾಗಿ ಹೊಸದಾಗಿ ಮತ್ತಷ್ಟು ಮಿಲ್ ಗಳನ್ನು ಹಾಕುತ್ತಿದ್ದಾರೆ. ದಿನೇ ದಿನೇ ಸಮಸ್ಯೆಗಳು ಹೆಚ್ಚುತ್ತಿವೆ. ಇಲ್ಲಿನ ಸುತ್ತಮುತ್ತಲಿನ ನಿವಾಸಿಗಳು ದಲಿತರು, ಅಲ್ಪಸಂಖ್ಯಾತರೇ ಆಗಿದ್ದು, ಎಲ್ಲರೂ ಶ್ರಮಿಕರು, ಕೂಲಿಯವರಾಗಿದ್ದು, ದುಡಿದ ಹಣವನ್ನು ಅನಾರೋಗ್ಯ, ಚಿಕಿತ್ಸೆಗೆ ಖರ್ಚು ಮಾಡಿ ಉಪವಾಸ ಮಲಗುವ ಸ್ಥಿತಿ ಇಲ್ಲಿನ ಬಡವರ್ಗದ ಜನರದ್ದಾಗಿದೆ.
ಇಲ್ಲಿ ಜನರ ಆರೋಗ್ಯ ಕಾಪಾಡಲು ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.‌

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಚಳ್ಳಕೆರೆ, ಗೋಸಿಕೆರೆ ಸೇರಿ ಜಿಲ್ಲೆಯಲ್ಲಿ ಹಿಂದೂ ಮುಸ್ಲಿಮರ ಭಾವೈಕ್ಯತಾ ಹಬ್ಬ ಮೊಹರಂ ಆಚರಣೆಯ ಸಡಗರ

ಈ ವೇಳೆ ಸಂಘಟನೆಯ ಮುಖಂಡರಾದ ರಾಮಚಂದ್ರ ಅಕ್ಕಿ, ಮಂಜುಳಾ, ಎನ್.ದಾದಾಪೀರ, ಬೀಬೀಜಾನ್, ಬಾಲರಾಜ, ಎಂ.ಮಹಬೂಬ್ ಶಾಹೀನಾಬಾನು, ತಸೀಮಾ ಬಾನು, ಅಸ್ಮಾ ಬಾನು, ಗುಲ್ದಾರ್ ಬಾನು, ನಗೀನಾ, ಸಿರೋಜ್ ಖಾನ್, ಜಾಕೀರಾ ಬೀ, ಜಬೀ, ತಸ್ಲಿಮಾ, ಜ್ಯೋತಿ, ರಹತ್, ಶಾಹೀನಾ, ಗೌಸಿಯಾ ತಾಜ್, ಮುಬೀನಾ ಬೀ, ಶಭೀನಾ, ಸನಾವುಲ್ಲಾ, ಜಾಕೀರ್, ಸೈಯದ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

931f0c6c51d5094fd09854fe60afc89197e460e7a77cac502ebfd2074238fae8?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...