ದಾವಣಗೆರೆ | ವಿಶ್ವವಿದ್ಯಾನಿಲಯದಲ್ಲಿ ಭ್ರಷ್ಟಾಚಾರ, ಕಾನೂನು ಉಲ್ಲಂಘನೆ ಆರೋಪ; ಅವ್ಯವಹಾರ ತನಿಖೆಗೆ ದಸಂಸ ಆಗ್ರಹ

Date:

ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ನಡೆದಿರುವ ಭ್ರಷ್ಟಾಚಾರ, ಕಾನೂನು ಉಲ್ಲಂಘನೆ ಸೇರಿದಂತೆ ಇತರೆ ಅವ್ಯವಹಾರಗಳ ಕುರಿತು ಉನ್ನತ ಮಟ್ಟದ ತನಿಖೆ ನಡೆಸುವಂತೆ ದಸಂಸ(DSS) ಜಿಲ್ಲಾ ಸಂಚಾಲಕ ಕುಂದವಾಡ ಮಂಜುನಾಥ್ ಸರ್ಕಾರವನ್ನು ಆಗ್ರಹಿಸಿದರು.

ದಾವಣಗೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ವಿಶ್ವವಿದ್ಯಾನಿಲಯದಲ್ಲಿ ಕೆಲವು ಆರ್ಥಿಕ, ರಾಜಕೀಯವಾಗಿ ಸಬಲರಾಗಿದ್ದವರು ಅಲ್ಲಿನ ಸರ್ಕಾರಿ ಹುದ್ದೆಗಳನ್ನು ಹಣಬಲ, ರಾಜಕೀಯ ಬಲದಿಂದ ಖರೀದಿ ಮಾಡಿಕೊಂಡಿದ್ದಾರೆ. ಇದರಿಂದಾಗಿ ಎಷ್ಟೋ ನಿಷ್ಟಾವಂತ, ಅರ್ಹರಿಗೆ ಸರ್ಕಾರಿ ಹುದ್ದೆಗಳಲ್ಲಿ ಸೇವೆ ಸಲ್ಲಿಸಲು ಅವಕಾಶ ಇಲ್ಲದಂತಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ದಾವಿವಿಯಲ್ಲಿ ಭೋಧಕೇತರ ಹುದ್ದೆಗೆ ಏರ್ಪಡಿಸಲಾದ ಪರೀಕ್ಷೆಗಳನ್ನು ಹಲವಾರು ಬಾರಿ ಮುಂದೂಡಿದ್ದು, ಅದಕ್ಕೆ ಸಂಬಂಧಿಸಿದ ಯಾವುದೇ ಮಾಹಿತಿಗಳನ್ನು ನೀಡುತ್ತಿಲ್ಲ. ಅಲ್ಲದೇ ವಿವಿಯ ಕುಲಪತಿ ಇಲ್ಲದ ವೇಳೆ ಅಕ್ರಮವಾಗಿ ಕೆಲವರನ್ನು ನೇಮಕಾತಿ ಮಾಡಿಕೊಳ್ಳಲಾಗಿದ್ದು, ಕುಲಪತಿಗಳ ಬದಲು ಕುಲಸಚಿವರು ಸಹಿ ಮಾಡಿರುವುದು ಹಲವಾರು ಅನುಮಾನ ಮೂಡಿಸುತ್ತಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1002343711

“ಬೋಧಕ ಹುದ್ದೆಗಳ ಆಯ್ಕೆಯಲ್ಲೂ ಭ್ರಷ್ಟಾಚಾರ ನಡೆದಿದ್ದು. 30ರಿಂದ 50 ಲಕ್ಷ ಲಂಚ ನೀಡಿದವರಿಗೆ ಮಾತ್ರ ಆಯ್ಕೆ ಮಾಡಲಾಗಿದೆ ಎನ್ನುವ ಆರೋಪ, ಚರ್ಚೆಗಳು ಕೇಳಿ ಬರುತ್ತಿವೆ. ಹುದ್ದೆಗಳಿಗೆ ಆಯ್ಕೆಯಾದವರಿಗೆ ಹಲವು ಬ್ಯಾಂಕಿನವರು ಸಾಲ ನೀಡಲು ಮುಂದಾಗಿದ್ದಾರೆ. ಇದಕ್ಕೆ ಪೂರಕ ಎನ್ನುವಂತೆ ಬಹುತೇಕ ಬೋಧಕ ಸಿಬ್ಬಂದಿಗಳು ಏಕಕಾಲದಲ್ಲೇ ಬ್ಯಾಂಕಿನಲ್ಲಿ ಸಾಲ ಪಡೆದಿರುತ್ತಾರೆ. ಅಲ್ಲದೇ ಕುಲ ಸಚಿವರ ಪತ್ನಿಯೇ ಇಲ್ಲಿ ಬೋಧಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವೆಲ್ಲವೂ ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ” ಎಂದರು.

“ಕಾಲೇಜು ಅಭಿವೃದ್ಧಿ ಪರಿಷತ್ತಿನಲ್ಲೂ ಕಾಯಿದೆ ಕಾನೂನುಗಳನ್ನು ಪಾಲಿಸದೇ ಹೊಸ ಕಾಲೇಜುಗಳಿಗೆ ಅನುಮತಿ ಕೇಳಿ ಬಂದವರಿಗೆ ಯಾವುದೇ ಮಾನದಂಡಗಳನ್ನು ಪಾಲಿಸದೇ ಹಣ ಪಡೆದು ಅನುಮತಿ ನೀಡಿರುತ್ತಾರೆ. ಇದಲ್ಲದೇ ಇಂಜಿನಿಯರಿಂಗ್ ವಿಭಾಗ, ಪರಿಕ್ಷಾಂಗ ವಿಭಾಗದಲ್ಲಿ ಮಾತ್ರವಲ್ಲದೇ ಟೆಂಡರ್ ನೀಡುವ ಪ್ರಕ್ರಿಯೆಯಲ್ಲೂ ಭ್ರಷ್ಟಾಚಾರ ನಡೆದಿದೆ” ಎಂದು ಆರೋಪಿಸಿದರು.

“ಈ ಹಿನ್ನೆಲೆಯಲ್ಲಿ ಸರ್ಕಾರ ದಾವಣಗೆರೆ ವಿಶ್ವ ವಿದ್ಯಾನಿಲಯಕ್ಕೆ ಸಂಬಂಧ ಪಟ್ಟಂತೆ ಸಮಗ್ರ ತನಿಖೆ ನಡೆಸುವ ಮೂಲಕ ಉನ್ನತ ಮಟ್ಟದ ಅಧಿಕಾರಿಗಳನ್ನು ನೇಮಿಸಬೇಕು. ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಶಕ್ತಿ ಯೋಜನೆ | ರಾಜ್ಯಾದ್ಯಂತ 500 ಕೋಟಿ ಮಹಿಳೆಯರ ಪ್ರಯಾಣ: ಕಾರ್ಮಿಕರಿಗೆ ಸುಲಭ ಸಂಚಾರ, ಆರ್ಥಿಕ ಬಲ

ಸುದ್ದಿಗೋಷ್ಠಿಯಲ್ಲಿ ದಲಿತ ವಾಣಿಜ್ಯೋದ್ಯಮಿಗಳ‌ ಸಂಘದ ಅಧ್ಯಕ್ಷ ಕಬ್ಬೂರು ಮಂಜುನಾಥ್, ದಸಂಸದ ಜೆ.ಮಹಾಂತೇಶ್, ಚಿತ್ತಾನಹಳ್ಳಿ ನಾಗರಾಜ್, ಮಂಜುನಾಥ್, ಕುಂದವಾಡದ ಶಿವಕುಮಾ‌ರ್ ಹಾಗೂ ಇತರರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...