ದಾವಣಗೆರೆ | ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ದಲಿತ ಸಂಘಟನೆಗಳಿಂದ ಹರಿಹರದಲ್ಲಿ ಆ.18ಕ್ಕೆ ಪ್ರತಿಭಟನೆ

Date:

ಪರಿಶಿಷ್ಟ ಜಾತಿ ಜನಾಂಗದವರಿಗೆ ಯಥಾವತ್ತಾಗಿ ಒಳ ಮೀಸಲಾತಿ ಜಾರಿ ಮಾಡಲು ಒತ್ತಾಯಿಸಿ, ದಾವಣಗೆರೆ ಜಿಲ್ಲೆಯ ಹರಿಹರ ನಗರದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನಾ ಜಾಥಾ ಹಮ್ಮಿಕೊಂಡಿದ್ದು, 2025, ಆಗಸ್ಟ್ 18, ಸೋಮವಾರ ಬೆಳಿಗ್ಗೆ 10 ಘಂಟೆಗೆ ಹರಿಹರ ನಗರದ ಎ.ಕೆ ಕಾಲೋನಿಯಿಂದ ಕಾಲ್ನಡಿಗೆಯೊಂದಿಗೆ ಹೊರಟು ತಹಶೀಲ್ದಾರರ ಕಚೇರಿ ತಲುಪಿ, ಕಛೇರಿ ಮುಂಬಾಗ ಪ್ರತಿಭಟನೆ ಮತ್ತು ಧರಣಿ ನಡೆಸಲಾಗುವುದು ಎಂದು ದಸಂಸ ಮುಖಂಡರು ಹರಿಹರದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಹರಿಹರದಲ್ಲಿ ಸುದ್ದಿಗೋಷ್ಠಿ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಮುಖಂಡರು,”ಮಾನ್ಯ ಸರ್ವೋಚ್ಚ ನ್ಯಾಯಾಲಯದ ಆದೇಶದ ಮೇರೆಗೆ ಒಳಮೀಸಲಾತಿಯನ್ನು ಜಾರಿ ಮಾಡುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಮಹಾತ್ಮ ಪ್ರೊ.ಬಿ ಕೃಷ್ಣಪ್ಪ ಸ್ಥಾಪಿತ ಹರಿಹರ ತಾಲೂಕು ಸಮಿತಿ ವತಿಯಿಂದ ಹಮ್ಮಿಕೊಂಡಿರುತ್ತೇವೆ. ಕಳೆದ 32 ವರ್ಷಗಳಿಂದ ಪರಿಶಿಷ್ಟ ಜಾತಿ ಪಟ್ಟಿಯಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿರುವ ಮಾದಿಗ ಸಮುದಾಯವು ಮೀಸಲಾತಿಯನ್ನು ಪಡೆಯುವುದರಲ್ಲಿ ಅನ್ಯಾಯವಾಗುತ್ತಿರುವ ಬಗ್ಗೆ ಹೋರಾಟ ನಡೆಸಿದ್ದರಿಂದ ನ್ಯಾಯಮೂರ್ತಿ ಸದಾಶಿವ ಆಯೋಗವನ್ನು ರಚಿಸಿದ ಸರ್ಕಾರಕ್ಕೆ ಮಾದಿಗ ಸಮುದಾಯಕ್ಕೆ ಶೇ. 63 ರಷ್ಟು ಒಳಮೀಸಲಾತಿ ಕೊಡಬೇಕೆಂದು ವರದಿ ಸಲ್ಲಿಸಿದೆ. ಅದೇ ರೀತಿಯಾಗಿ ಮಾಧುಸ್ವಾಮಿ ನೇತೃತ್ವದ ಉಪ ಸಮಿತಿಯು ಕೂಡ ಮಾದಿಗ ಸಮುದಾಯ ಪರಿಶಿಷ್ಟ ಜಾತಿ ಜನಾಂಗದಲ್ಲಿ ಅತೀ ಹೆಚ್ಚಿನ ಪ್ರಮಾಣದಲ್ಲಿದ್ದು, ಶೇ. 63 ಒಳಮೀಸಲಾತಿಯನ್ನು ಕೊಡಬೇಕೆಂದು ವರದಿ ಸಲ್ಲಿಸಿದೆ” ಎಂದು ತಿಳಿಸಿದರು.

“ಆದರೆ ಈಗಿನ ಸಿದ್ದರಾಮಯ್ಯನವರ ಸರಕಾರ ಎರಡೂ ವರದಿಗಳನ್ನು ಬದಿಗಿಟ್ಟು ನ್ಯಾ. ನಾಗಮೋಹನದಾಸ್ ಅವರ ನೇತೃತ್ವದಲ್ಲಿ ಮತ್ತೊಂದು ಆಯೋಗವನ್ನು ರಚಿಸಿದ್ದು, ನ್ಯಾ. ನಾಗಮೋಹನದಾಸ್ ಆಯೋಗವು ಕೂಡ ಶೇ.6ರಷ್ಟು ಮಾದಿಗ, ಹಾಗೂ ಹೊಲೆಯ ಶೇ.5ರಂತೆ ಮತ್ತು ಇತರರಿಗೆ ಕೆಲವು ಶೇಕಡವಾರು ವಿಂಗಡಿಸಿ ವರದಿ ಕೊಟ್ಟಿರುವಂತೆ ಯಥಾವತ್ತಾಗಿ ಯಾರದೇ ಒತ್ತಡಕ್ಕೂ ಮಣಿಯದೇ ಸರಕಾರವು ಈ ಅಧಿವೇಶನದಲ್ಲಿ ಒಳಮೀಸಲಾತಿ ಜಾರಿಗೊಳಿಸಬೇಕೆಂದು ಒತ್ತಾಯಿಸುತ್ತೇವೆ” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹರಿಹರ ತಾಲೂಕಿನ ಮಾದಿಗ ಸಮಾಜದ ಮುಖಂಡರು ಹಾಗೂ ಹರಿಹರ ತಾಲೂಕಿನ ದಲಿತ ಸಂಘಟನೆಗಳ ಮುಖಂಡರು ಮತ್ತು ಪದಾಧಿಕಾರಿಗಳು ನಮ್ಮ ಸಂಘಟನೆಯ ಹೋರಾಟದಲ್ಲಿ ಭಾಗಿಯಾಗಿ ಸಹಕರಿಸಬೇಕು. ಹಾಗೂ ಒಳಮೀಸಲಾತಿ ಪರವಾದ ಎಲ್ಲಾ ಸಂಘ ಸಂಸ್ಥೆಯ ಮುಖಂಡರು ಹೋರಾಟಕ್ಕೆ ಬೆಂಬಲ ನೀಡಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಸ್ವಾತಂತ್ರ್ಯೋತ್ಸವ ದಿನ ಒಳಮೀಸಲಾತಿ ವಿಳಂಬ ವಿರೋಧಿಸಿ ಕಪ್ಪು ಬಟ್ಟೆ ಧರಿಸಿ ಆಕ್ರೋಶ; ದಲಿತ ಮುಖಂಡರ ಬಂಧನ

ಸುದ್ದಿಗೋಷ್ಠಿಯಲ್ಲಿ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹನುಮಂತಪ್ಪ, ಎಕೆ ಪ್ರಕಾಶ್, ಮಂಜಣ್ಣ, ಕರಿಬಸಪ್ಪ, ತಾಲೂಕು ಸಂಚಾಲಕ ಆರ್ ಶ್ರೀನಿವಾಸ್, ಪಕ್ಕೀರೇಶ್ ಯಾದವ್,ಎ.ಕೆ. ನಾಗಪ್ಪ, ಪ್ರವೀಣ, ಕೊಟ್ರೇಶ್, ತಿಪ್ಪೇಶ್, ದೇವರೆಡ್ಡಿ ಸೇರಿದಂತೆ ಮುಖಂಡರು ಪಾಲ್ಗೊಂಡಿದ್ದರು.‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...