ದಾವಣಗೆರೆ | ದಲಿತರೇ ಜಾತಿಯ ಹೆಸರಿನಲ್ಲಿ ಅತಿಹೆಚ್ಚು ಶೋಷಣೆಗೆ ಒಳಗಾಗಿದ್ದಾರೆ; ಎಐಡಿಆರ್ ಎಂ ರಾಜ್ಯಾಧ್ಯಕ್ಷ ಡಾ.ಜನಾರ್ಧನ್

Date:

ದಾವಣಗೆರೆ ಪಂಪಾಪತಿ ಭವನದಲ್ಲಿ ಅಖಿಲ ಭಾರತ ದಲಿತ ಹಕ್ಕುಗಳ ಆಂದೋಲನದ ಜಿಲ್ಲಾ ‌ಸಮ್ಮೇಳನ ಆಯೋಜಿಸಲಾಗಿತ್ತು. ಸಮ್ಮೇಳನ ಉದ್ಘಾಟಿಸಿದ ಎಐಡಿಆರ್ ಎಂ ರಾಜ್ಯಾಧ್ಯಕ್ಷರಾದ ಡಾ.ಜನಾರ್ಧನ್ ಮಾತನಾಡಿ, “ಜಾತಿ ಸಮಸ್ಯೆಗೆ 12 ನೇ ಶತಮಾನದಲ್ಲಿ ಶರಣರು ಉತ್ತರ ಹೇಳಿದ್ದಾರೆ. ಜಾತೀಯ ಹೆಸರಿನಲ್ಲಿ ಇಂದಿಗೂ ಅತ್ಯಂತ ಶೋಷಣೆಗೆ ಒಳಗಾಗಿರುವವರು ದಲಿತರು” ಎಂದು ವಿಷಾದ ವ್ಯಕ್ತಪಡಿಸಿದರು.

1002122132

“ಸಮ ಸಮಾಜದ ಕನಸು ಕಟ್ಟುವವರ ಆಶಯಗಳನ್ನು ನಾವು ಮುಂದುವರೆಸಿಕೊಂಡು ಹೋಗಬೇಕೆಂದು ಕಾರ್ಲ್ ಮಾರ್ಕ್ಸ್ ಹೇಳುತ್ತಾರೆ. ಭೂಮಿ ಸರ್ಕಾರದ ಕೈಯಲ್ಲಿರಬೇಕು. ಕೈಗಾರಿಕೆಗಳು ಸಾರ್ವಜನಿಕ ಸ್ವತ್ತಾಗಬೇಕು ಎಂದು ಅಂಬೇಡ್ಕರ್ ಹೇಳಿದ್ದಾರೆ. ಇವರಿಬ್ಬರ ನಡುವೆ ವ್ಯತ್ಯಾಸವನ್ನು ಸೃಷ್ಟಿ ಮಾಡುವ ಮೂರ್ಖರೂ ಇದ್ದಾರೆ. ಅದರಿಂದ ನಾವು ಎಚ್ಚರದಿಂದಿರಬೇಕು” ಎಂದು ತಿಳಿಸಿದರು.

1002122130

“1920 ಕ್ಕಿಂತ ಮೊದಲಿನಿಂದಲೂ ದಲಿತ ಹಕ್ಕುಗಳಿಗಾಗಿ ಸಿಪಿಐ ಪಕ್ಷ ಹೋರಾಟ ಮಾಡುತ್ತಾ ಬಂದಿದೆ. ಕೆಲವರು ಇದನ್ನು ದಿಕ್ಕು ತಪ್ಪಿಸುವ ಸಲುವಾಗಿ ಅಪಪ್ರಚಾರ ಮಾಡುವವರಿದ್ದಾರೆ. ಪಕ್ಷವು ಶೋಷಿತ ಸಮುದಾಯದ ಮಧ್ಯೆ ನಿರಂತರವಾಗಿ ಹೋರಾಡುತ್ತಾ ಬಂದಿದೆ. ನಾವು ಅದನ್ನು ಒಂದು ಆಂದೋಲನವೆಂದು ಕರೆಯುತ್ತೇವೆ. ಏಕೆಂದರೆ ಎಲ್ಲಾ ದಲಿತ ಸಂಘಟನೆಗಳನ್ನು ಸೇರಿಸಿಕೊಂಡು ಹೋರಾಟ ಮಾಡುವ ಉದ್ದೇಶದಿಂದ ದೂರ ದೃಷ್ಟಿಯ ಆಲೋಚನೆಯಿಂದಾಗಿ ದಲಿತ ಹಕ್ಕುಗಳಿಗಾಗಿ ಹೋರಾಟ ಮಾಡುತ್ತೇವೆ. 80ರ ದಶಕದಲ್ಲಿ ತುಂಬಾ ಉಚ್ಛ್ರಾಯ ಸ್ಥಿತಿಯಲ್ಲಿದ್ದ ದಲಿತ ಸಂಘಟನೆಗಳು ವಿಘಟನೆಗೊಂಡಿದೆ. ಈಗ ಅದನ್ನು ಪುನಶ್ಚೇತನ ಗೊಳಿಸಬೇಕಾಗಿದೆ. ಈ ಸಮಾಜ ಮಹಿಳೆಯನ್ನು ಅತ್ಯಂತ ಕೀಳಾಗಿ ಕಾಣುತ್ತಿದೆ. ಅದರಲ್ಲೂ ದಲಿತ ಮಹಿಳೆಯರನ್ನು ತುಂಬಾ ಕೀಳಾಗಿ ಕಾಣುತ್ತಿದ್ದು ದೇವದಾಸಿ ಪದ್ಧತಿಯಲ್ಲಿರುವವರು ದಲಿತ ಮಹಿಳೆಯರು ಮಾತ್ರ. ಇದನ್ನು ನಾವು ಜಾಗೃತಿ ಮೂಡಿಸುವುದರ ಮೂಲಕ ಹೋಗಲಾಡಿಸಬೇಕಾಗಿದೆ” ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ರೈತೋದಯ ಹಸಿರುಸೇನೆಯಿಂದ 1008 ಜೋಡಿ ಸಾಮೂಹಿಕ ವಿವಾಹ ಕಾರ್ಯಕ್ರಮ; ಪೂರ್ವಭಾವಿ ಸಭೆ

ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾ ಕಾರ್ಯದರ್ಶಿ ಆವರಗೆರೆ ಚಂದ್ರು ಮಾತನಾಡಿ, “ಕಾರ್ಯಕರ್ತರು ಹಳ್ಳಿಗಳಿಗೆ, ನಗರದ ಕೆಲವು ಏರಿಯಾಗಳಿಗೆ ತೆರಳಿ ಎಲ್ಲಾ ಜಾತಿಯ ಬಡವರ ಪರವಾಗಿ ಅವರ ಹಕ್ಕುಗಳನ್ನು ಕೊಡಿಸಲು ಸಂಘಟನೆ ಮಾಡುವುದರ ಮೂಲಕ ಸಂಘಟನೆ ಬಲವರ್ಧನೆಗೆ ಮುಂದಾಗಬೇಕು” ಎಂದು ಸಲಹೆ ನೀಡಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ| ಸರ್ಕಾರಿ ಶಾಲೆ ಮುಚ್ಚುವುದನ್ನು ವಿರೋಧಿಸಿ ಎಐಡಿಎಸ್ಓ ಸಹಿ ಸಂಗ್ರಹ ಅಭಿಯಾನ

ಸಮ್ಮೇಳನದಲ್ಲಿ ಸಿಪಿಐ ಜಿಲ್ಲಾ ಸಹಕಾರ್ಯದರ್ಶಿ ಹೆಚ್‌ಜಿ ಉಮೇಶ್ ಆವರಗೆರೆ, ಮುಖಂಡರಾದ ಪಿ ಷಣ್ಮುಖ ಸ್ವಾಮಿ, ಎಸ್ ಎಸ್ ಮಲ್ಲಮ್ಮ, ವಿ ಲಕ್ಷ್ಮಣ, ಜಿ ಯಲ್ಲಪ್ಪ, ನರೇಗಾ ರಂಗನಾಥ್, ಶೇಖರ ನಾಯಕ್, ಯುವ ಮುಖಂಡ ಕೆರನಳ್ಳಿ ರಾಜು, ತಿಪ್ಪೇಶ್, ಸಿಪಿಐ ಜಿಲ್ಲಾ ಮಂಡಳಿ ಸದಸ್ಯ ಕೆ ಬಾನಪ್ಪ ಸೇರಿದಂತೆ ಇತರ ಸದಸ್ಯರು ಹಾಗೂ ಮುಖಂಡರು ಭಾಗವಹಿಸಿದ್ದರು

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...