ದಾವಣಗೆರೆ | ಮುಖ್ಯ ನ್ಯಾಯಾಧೀಶರ ಮೇಲೆ ಹಲ್ಲೆ ಪ್ರಯತ್ನ ಖಂಡಿಸಿ ವಕೀಲನ ಗಡೀಪಾರಿಗೆ ದಸಂಸ ಆಗ್ರಹ

Date:

ಸುಪ್ರೀಂಕೋರ್ಟಿನ ಮುಖ್ಯ ನ್ಯಾಯಾಧೀಶ ಬಿ ಆರ್ ಗವಾಯಿಯವರ ಮೇಲೆ ಶೂ ಎಸೆತ ಮತ್ತು ಹಲ್ಲೆ ಪ್ರಯತ್ನಕ್ಕೆ ಮುಂದಾಗಿದ್ದ ವಕೀಲನ ಮೇಲೆ ಕಾನೂನು ಕ್ರಮ ಮತ್ತು ಗಡೀಪಾರಿಗೆ ಒತ್ತಾಯಿಸಿ
ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಕೃಷ್ಣಪ್ಪ)(ದಸಂಸ ) ಮತ್ತು ದಾವಣಗೆರೆಯ‌ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಮುಖಂಡರು, ಕಾರ್ಯಕರ್ತರು ಡಾ.ಬಿಆರ್ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ದಾವಣಗೆರೆ ಉಪವಿಭಾಗಾಧಿಕಾರಿಗಳ ಮೂಲಕ ಮಾನ್ಯ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

1002901836

ಈ ವೇಳೆ ಮಾತನಾಡಿದ ದಸಂಸ ಮುಖಂಡ ಕುಂದುವಾಡ ಮಂಜುನಾಥ್ “ದೇಶದ ಉನ್ನತ ನ್ಯಾಯಾಂಗ ವ್ಯವಸ್ಥೆಯ ಮುಖ್ಯಸ್ಥರಿಗೆ ನ್ಯಾಯಾಲಯದೊಳಗೇ ಹಲ್ಲೆಗೆ ಪ್ರಯತ್ನಿಸಿ ಇಡೀ ದೇಶದ ನ್ಯಾಯಾಂಗ ಮತ್ತು ಸಂವಿಧಾನಕ್ಕೆ ಸನಾತನವಾದಿಗಳು ಅವಮಾನ ಮಾಡಿದ್ದಾರೆ. ಈವರೆಗೂ ಸರ್ಕಾರದ ಮಂತ್ರಿಗಳು ಮತ್ತು ಉನ್ನತ ಸ್ಥಾನದಲ್ಲಿರುವವರು ಇದನ್ನು ಖಂಡಿಸಿ ಮಾತನಾಡದೆ ಇರುವುದನ್ನು ನೋಡಿದರೆ ಪರೋಕ್ಷವಾಗಿ ಇವರೇ ಮನುವಾದಿಗಳಿಗೆ, ಸನಾತನವಾದಿಗಳಿಗೆ ಕುಮಕ್ಕು ನೀಡುತ್ತಿದ್ದಾರೆ ಎನ್ನುವ ಅನುಮಾನ ಬರುತ್ತಿದೆ. ಈ ಕೂಡಲೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನ್ಯಾ. ಬಿ ಆರ್ ಗವಾಯಿ ಅವರ ಮೇಲೆ ಹಲ್ಲೆಗೆ ಪ್ರಯತ್ನಿಸಿದ ವಕೀಲ ರಾಕೇಶ್ ಕಿಶೋರ್ನನ್ನು ಶಿಕ್ಷೆಗೊಳಪಡಿಸಿ ದೇಶದಿಂದಲೇ ಗಡಿಪಾರು ಮಾಡಬೇಕು” ಎಂದು ಆಗ್ರಹಿಸಿದರು.

“ಮುಖ್ಯ ನ್ಯಾಯಮೂರ್ತಿಗಳು ಬೌದ್ಧ ಧರ್ಮದ ಅನುಯಾಯಿ, ಅಂಬೇಡ್ಕರ್ ವಾದಿಗಳಾಗಿದ್ದು ಅವರು ನ್ಯಾಯಕ್ಕೆ ಚ್ಯುತಿ ಬರದ ರೀತಿಯಲ್ಲಿ ತೀರ್ಪುಗಳನ್ನು ನೀಡುತ್ತಿರುವುದು ಮನುವಾದಿಗಳಿಗೆ ಮತ್ತು ಸನಾತನವಾದಿಗಳಿಗೆ ಸಹಿಸಿಕೊಳ್ಳುವುದು ಕಷ್ಟವಾಗುತ್ತಿದೆ. ಹೀಗಾಗಿ ಹಲ್ಲೆ ಮಾಡಲು ಪ್ರಯತ್ನಿಸುತ್ತಾರೆ. ಈ ಕೃತ್ಯ ಇಡೀ ದೇಶ, ಪ್ರಜಾಪ್ರಭುತ್ವದ ವ್ಯವಸ್ಥೆ ತಲೆತಗ್ಗಿಸುವಂಥಾಗಿದೆ. ಹಾಗಾಗಿ ಕೂಡಲೇ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1002901839

ಈ ವೇಳೆ ಮಾತನಾಡಿದ ನೆರಳು ಬೀಡಿ ಕಾರ್ಮಿಕರ ಸಂಘಟನೆಯ ಜಬೀನ ಖಾನಂ “ಸರ್ವೋಚ್ಚ ನ್ಯಾಯಾಲಯದ ಮುಖ್ಯನ್ಯಾಯಧೀಶ ಬಿಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿ ಈ ದೇಶದ ಸಂವಿಧಾನ ಮತ್ತು ದೇಶಕ್ಕೆ ಮಾಡಿದ ಅವಮಾನವೆಸಗಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಿರಿಯ ದಸಂಸ ಮುಖಂಡ ಬುಳ್ಳಸಾಗರ ಸಿದ್ದರಾಮಣ್ಣ ಮಾತನಾಡಿ, “ಸನಾತನ, ಮನುವಾದಿಗಳು ಎಲ್ಲೆಡೆ ಇದ್ದಾರೆ, ಬಿಜೆಪಿ ಹಾಗೂ ಇತರ ರೂಪದಲ್ಲಿ ಎಲ್ಲೆಡೆ ಕೋಮುವಾದ ಬೆಳೆಸುತ್ತಿದೆ. ಇದರ ವಿರುದ್ಧ ನಾವು ಜಾಗೃತರಾಗಿರಬೇಕು. ಮುಂದೆ ಇದರ ವಿರುದ್ಧ ಸಮರ್ಥವಾಗಿ ಸಂಘಟನೆ ಮೂಲಕ ಯುವಕರಿಗೆ ಮನವರಿಕೆ ಮಾಡಿಕೊಡುವ ಕೆಲಸ ಮಾಡಬೇಕು” ಎಂದು ತಿಳಿಸಿದರು.

1002901837

ಮುಸ್ಲಿಂ ಒಕ್ಕೂಟದ ಮುಖಂಡ ಟಿ ಅಸ್ಗರ್ ಮಾತನಾಡಿ” ಮುಖ್ಯ ನ್ಯಾಯಾಧೀಶರ ಮೇಲಿನ ಹಲ್ಲೆ ಸಂವಿಧಾನದ ಮೇಲಿನ ಹಲ್ಲೆ. ಇದನ್ನು ಇಡೀ ಮುಸ್ಲಿಂ ಒಕ್ಕೂಟ ಖಂಡಿಸುತ್ತದೆ. ಅಂಬೇಡ್ಕರ್, ಸಂವಿಧಾನಪರ ಹೋರಾಟಕ್ಕೆ ನಾವು ಸದಾ ಬೆಂಬಲಿಸುತ್ತೇವೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆ: ಗಣತಿದಾರರ ವಿರೋಧ

ಪ್ರತಿಭಟನೆಯಲ್ಲಿ ಸಮಿತಿಯ ಮುಖಂಡರಾದ ತಾಲೂಕು ಸಂಚಾಲಕರಿದ ಚಿತ್ರಲಿಂಗಪ್ಪ, ನಾಗರಾಜ್ ಚಿತ್ತನಹಳ್ಳಿ, ಪರಮೇಶ್ವರಪ್ಪ, ಮುಖಂಡರಾದ ಪ್ರದೀಪ್ ಕೆಟಿಜೆ ನಗರ, ಮಂಜುನಾಥ್ ಶಾಂತಿನಗರ, ಹಾಲ್ವರ್ತಿ ಮಹಂತೇಶ್, ಶಂಕರ್ ಗಾಂಧಿನಗರ, ಶಿವಶಂಕರ್, ಖಾಲಿದ್ ಅಲಿ, ಪ್ರಶಾಂತ್ ತುರ್ಚಘಟ್ಟ, ಬೇತೂರು ಹನುಮಂತಪ್ಪ, ನಾಗರಾಜ್ ತುರ್ಚಘಟ್ಟ, ತ್ಯಾಗರಾಜು, ಚೆನಲ್ಲಿ ಆಲೂರು ದುರ್ಗಾ ಪ್ರಸಾದ್, ನಿಂಗಪ್ಪ ಅಣಜಿ ,ಆರತಿ ಬಿ ಚಿತ್ತಾನಳ್ಳಿ, ರಾಕೇಶ್, ತಿಪ್ಪೇಶ್, ಸರ್ಕಾರಿ ಶಾಲೆ ಉಳಿಸಿ ಹೋರಾಟ ಸಮಿತಿ ಮುಖಂಡ ಲಿಂಗರಾಜು ಎಂ ಗಾಂಧಿನಗರ, ಮುಖಂಡ ಲಿಯಾಖತ್ ಅಲಿ, ನೆರಳು ಬೀಡಿ ಕಾರ್ಮಿಕ ಸಂಘಟನೆಯ ಜಬೀನಖಾನಂ, ಕರಿಬಸಪ್ಪ, ಜೆಡಿಎಸ್ ಮುಖಂಡ, ದಾವಣಗೆರೆ ಮುಸ್ಲಿಂ ಒಕ್ಕೂಟದ ಸಂಚಾಲಕ ಟಿ ಅಜ್ಗರ್, ಎಸ್ ಡಿ ಪಿ ಐ ಜಿಲ್ಲಾಧ್ಯಕ್ಷ ತಾಹಿರ್ ಸೇರಿದಂತೆ ಪ್ರಗತಿಪರ ಸಂಘಟನೆಗಳ ಒಕ್ಕೂಟದ ದಾವಣಗೆರೆಯ ಸಂಘಟನೆಗಳ, ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...