ದಾವಣಗೆರೆ | ಡಿಜಿಟಲ್ ಆರೆಸ್ಟ್ ಪ್ರಕರಣ; ಪೊಲೀಸರಿಂದ ತನಿಖೆ, ಆರೋಪಿಯ ಬಂಧನ

Date:

ದಾವಣಗೆರೆಯ ಶಿಕ್ಷಕಿಯೊಬ್ಬರಿಂದ ಡಿಜಿಟಲ್ ಅರೆಸ್ಟ್ ಪ್ರಕರಣ, 22.4 ಲಕ್ಷ ರೂ. ಅಕ್ರಮವಾಗಿ ವರ್ಗಾವಣೆ ಮಾಡಿಸಿಕೊಂಡ ದೂರಿನ ಹಿನ್ನೆಲೆಯಲ್ಲಿ ದಾವಣಗೆರೆ ಪೊಲೀಸರು ಹಾಸನ ಜಿಲ್ಲೆ, ಬೇಲೂರು ತಾಲೂಕಿನ ಕೊರಟಿಕೆರೆ ಗ್ರಾಮದ ಅರುಣ್ ಕುಮಾರ್ (35) ಎನ್ನುವ ಆರೋಪಿಯನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದಾರೆ.

ದಾವಣಗೆರೆಯ ಶಿಕ್ಷಕಿಯೊಬ್ಬರು ನೀಡಿದ ದೂರಿನಂತೆ 2025, ಫೆಬ್ರವರಿ 02ರಂದು ಶಾಲೆಯಲ್ಲಿರುವಾಗ ಬೆಳಿಗ್ಗೆ 09:30 ಕ್ಕೆ +9672786862 ನಂಬರ್ ನಿಂದ ಕರೆ ಮಾಡಿ ನಾನು ಬ್ಲೂ ಡಾಟ್ ಕೊರಿಯರ್ ಮುಂಬೈ ಎಂದು ಪರಿಚಯಿಸಿಕೊಂಡು ನಿಮ್ಮ ಫೆಡಕ್ಸ್ ಕೊರಿಯರ್ ನಲ್ಲಿ ಕೆಲವು ಔಷಧಗಳು ಮುಂಬೈನಿಂದ ದುಬೈಗೆ ಪಾರ್ಸಲ್ ಹೋಗುತ್ತಿದ್ದು ಅದರಲ್ಲಿ ಡ್ರಗ್ಸ್ ಕೂಡ ಇದೆ ಎಂದು ಹೆದರಿಸಿದ್ದು, ನಿಮ್ಮ ಗುರುತನ್ನು ದುರುಪಯೋಗಪಡಿಸಿಕೊಂಡಿರುವುದಾಗಿ ಹೇಳಿ ನಿಮ್ಮ ಮೇಲೆ ಪ್ರಕರಣ ದಾಖಲಿಸುವುದಾಗಿ ತಿಳಿಸಿದ್ದಾರೆ ಎಂದು ವಿವರಿಸಲಾಗಿದೆ.

‘ಆಧಾರ ಕಾರ್ಡ್ ಮತ್ತು ಇ -ಮೇಲ್ ವಿಳಾಸ ಪಡೆದುಕೊಂಡು, 8983204966 ನಂಬರಿನಿಂದ ವಾಟ್ಸಾಪ್ ಕರೆಯಲ್ಲಿ DCP ಮಾತನಾಡುತ್ತಿರುವುದಾಗಿ ಹೇಳಿ ನರೇಶ್ ಗೊಯಿಲ್ ಅನ್ನುವ ವ್ಯಕ್ತಿ ಮನಿಲ್ಯಾಂಡರಿಂಗ್ ಮಾಡುತ್ತಿದ್ದಾನೆ. ಆ ಕೇಸಿನಲ್ಲಿ ನೀವು ಕೂಡ ಇದ್ದು, ಪ್ರತಿ ತಿಂಗಳು 20 ಲಕ್ಷ ನಿಮ್ಮ ಖಾತೆಗೆ ಬರುತ್ತಿದ್ದು, ನಿಮ್ಮ ಖಾತೆಯಲ್ಲಿರುವ ಹಣ ಲೀಗಲ್ ಅಥಾವ ILLEGAL ಎಂದು ಚೆಕ್ ಮಾಡಬೇಕು ಎನ್ನುವ ಕಾರಣಕ್ಕೆ ನನ್ನ ಖಾತೆಯಿಂದ ರೂ. 22,40,000 ಹಣವನ್ನು ವರ್ಗಾವಣೆ ಮಾಡಿಸಿಕೊಂಡು ವಂಚನೆ ಮಾಡಿರುತ್ತಾರೆ’ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೂರಿನ ಮೇರೆಗೆ ದಾವಣಗೆರೆ ಸಿಇಎನ್ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಬಂಕಾಳಿ ನಾಗಪ್ಪ ಹಾಗೂ ಸಿಬ್ಬಂದಿಗಳಾದ ಅಶೋಕ, ಮುತ್ತುರಾಜ್, ಯೋಗೀಶ್ ನಾಯ್ಕ್, ನಿಜಲಿಂಗಪ್ಪ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ. ಇನ್ನು 2 ಜನ ಆರೋಪಿತರು ತಲೆಮರೆಸಿಕೊಂಡಿದ್ದು, ಸದರಿ ಆರೋಪಿತರ ಪತ್ತೆ ಕಾರ್ಯ ಮತ್ತು ತನಿಖೆ ಮುಂದುವರೆದಿರುತ್ತದೆ. ಆರೋಪಿಯನ್ನು ಘನ ನ್ಯಾಯಾಲಯಕ್ಕೆ ಹಾಜರುಪಡಿಸಿ ತನಿಖೆ ಮುಂದುವರೆಸಲಾಗಿದೆ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಕೆರೆ ನೀರು ಪೋಲು, ನೀರಾವರಿ ಇಲಾಖೆ ನಿರ್ಲಕ್ಷ್ಯ; ದುರಸ್ತಿಗೆ ರೈತಸಂಘದ ಮುಖಂಡರ ಆಗ್ರಹ

ಸದರಿ ಕಾರ್ಯಚರಣೆಯಲ್ಲಿ ಯಶಸ್ವಿಯಾದ ಪೊಲೀಸ್ ಸಿಬ್ಬಂದಿಗಳ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಪ್ರಶಂಸೆ ವ್ಯಕ್ತಪಡಿಸಿರುತ್ತಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...