ದಾವಣಗೆರೆ | ಸಂಚಾರ ಸುರಕ್ಷತೆಗೆ ರಸ್ತೆಗಿಳಿದ ಜಿಲ್ಲಾಧಿಕಾರಿ; ಸಂಚಾರ ನಿಯಮ ಪಾಲಿಸದ ವಾಹನಗಳ ವಶ, ನೋಟೀಸ್ ಜಾರಿ

Date:

ಸಂಚಾರ ನಿಯಮಗಳ ಕಟ್ಟುನಿಟ್ಟಿನ ಪಾಲನೆ ಸೇರಿದಂತೆ ಅಪಘಾತ ಪ್ರಮಾಣವನ್ನು ಗಣನೀಯವಾಗಿ ತಗ್ಗಿಸಲು ಸತತ ಪ್ರಯತ್ನ ಕೈಗೊಳ್ಳುತ್ತಿದ್ದು, ಬೆಳ್ಳಂಬೆಳಗ್ಗೆ ರಸ್ತೆಗಿಳಿದ ಜಿಲ್ಲಾಧಿಕಾರಿ ಜಿಎಂ ಗಂಗಾಧರಸ್ವಾಮಿ ನಂಬರ್ ಪ್ಲೇಟ್ ಇಲ್ಲದ, ಸಂಚಾರ ನಿಯಮ ಪಾಲಿಸದ 30 ಕ್ಕೂ ಹೆಚ್ಚು ವಾಹನಗಳನ್ನು ವಶಕ್ಕೆ ಪಡೆದು ದಾವಣಗೆರೆ ಸಂಚಾರಿ ದಕ್ಷಿಣ ವಲಯ ಠಾಣೆಗೆ ಹಸ್ತಾಂತರಿಸಿ, ಮಾಲೀಕರಿಗೆ ಕೋರ್ಟ್ ಮೂಲಕ ನೋಟಿಸ್ ನೀಡಲು ಸೂಚನೆ ನೀಡಿದರು.

1002281648

ದಾವಣಗೆರೆ ಜಿಲ್ಲಾಧಿಕಾರಿ ಅವರು ಜುಲೈ 8 ರಂದು ಮಂಗಳವಾರ ಬೆಳ್ಳಂಬೆಳಗ್ಗೆ ರಸ್ತೆಗಿಳಿದು 30ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದು ಕಾರ್ಯಾಚರಣೆ ನಡೆಸಿದರು. ಕೆಲವು ಕಾಲೇಜಿನ ವಿದ್ಯಾರ್ಥಿಗಳು ದ್ವಿಚಕ್ರವಾಹನಕ್ಕೆ ನಂಬರ್ ಪ್ಲೇಟ್ ಇಲ್ಲದೇ ವಾಹನ ಚಲಾಯಿಸುತ್ತಿರುವುದು ಮತ್ತು ವಯಸ್ಕರು ಕೂಡ ವಾಹನದ ನಂಬರ್ ಪ್ಲೇಟ್ ಇಲ್ಲದೇ ವಾಹನ ಚಲಾಯಿಸುತ್ತಿರುವುದನ್ನು ಪತ್ತೆಹಚ್ಚಿ, ಅಂತಹ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.

1002281647 1

ವಾಹನದ ನಂಬರ್ ಪ್ಲೇಟ್ ಇಲ್ಲದೇ ಚಲಾಯಿಸುವುದು ಮೋಟಾರ್ ವಾಹನ ಕಾಯಿದೆಯ ಸೆಕ್ಷನ್ 177 ರ ಉಲ್ಲಂಘನೆಯಾಗಿದ್ದು ದಂಡನೆಗೆ ಅವಕಾಶ ನೀಡಲಾಗಿದೆ. ವಾಹನಗಳಿಗೆ ಕಾನೂನು ಬದ್ದತೆ, ಗುರುತು ಮತ್ತು ಭದ್ರತೆಗೆ ಸಂಬಂಧಿಸಿದಾಗಿದ್ದು ಪ್ರತಿಯೊಂದು ವಾಹನದ ಗುರುತಿಗಾಗಿ ಮತ್ತು ಅಪರಾಧಗಳಲ್ಲಿ ಬಳಸುವ ವಾಹನ ಗುರುತಿಗಾಗಿ ಮತ್ತು ಸಂಚಾರಿ ನಿಯಮಗಳ ಉಲ್ಲಂಘನೆ ಪತ್ತೆ, ಕಳ್ಳತನ ಪತ್ತೆಹಚ್ಚಲು ಪ್ರತಿ ವಾಹನದ ನಂಬರ್ ಪ್ಲೇಟ್ ಸಹಾಯಕವಾಗಿದ್ದು ಪ್ರತಿ ವಾಹನಗಳಲ್ಲಿ ನಂಬರ್ ಪ್ಲೇಟ್ ಅಳವಡಿಕೆ ಕಾನೂನುಬದ್ದವಾಗಿದೆ. ಆದರೆ ನಂಬರ್ ಪ್ಲೇಟ್ ಇಲ್ಲದೇ ವಾಹನಗಳನ್ನು ಬಳಸುತಿದ್ದು ಈ ವಾಹನಗಳ ಮಾಲಿಕರಿಗೆ ನ್ಯಾಯಾಲಯದ ಮೂಲಕ ನೋಟಿಸ್ ನೀಡಲು ಸೂಚನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಮಹಾನಗರ ಪಾಲಿಕೆ ನೌಕರ ಮುಷ್ಕರ; ದಾವಣಗೆರೆಯಲ್ಲಿ ಸೇವೆಗಳ‌ ವ್ಯತ್ಯಯದಿಂದ ಜನರ ಪರದಾಟ

ಬೆಳಗ್ಗೆ 6 ರಿಂದ ಮಧ್ಯಾಹ್ನದ 12 ಗಂಟೆಯವರೆಗೆ ಡೆಂಟಲ್ ಕಾಲೇಜು ರಸ್ತೆ, ಬಾಯ್ಸ್ ಹಾಸ್ಟೆಲ್, ಕ್ರೀಡಾ ನಿಲಯ, ಎಂಸಿಸಿ ಬಿ ಬ್ಲಾಕ್, ಶಾಮನೂರು ವರ್ತುಲ ರಸ್ತೆಯಲ್ಲಿ ಜಿಲ್ಲಾಧಿಕಾರ ನೇತೃತ್ವದಲ್ಲಿ ಮಿಂಚಿನ ಸಂಚಾರ ಕೈಗೊಳ್ಳಲಾಯಿತು. ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಸೇರಿದಂತೆ ಸಂಚಾರ ವಿಭಾಗದ ಪೊಲೀಸರು ಭಾಗವಹಿಸಿದ್ದರು.

931f0c6c51d5094fd09854fe60afc89197e460e7a77cac502ebfd2074238fae8?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ...

ದಾವಣಗೆರೆ | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಮರ್ಥ್ ಶಾಮನೂರು: ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್...

ದಾವಣಗೆರೆ | ದಕ್ಷಿಣ ಕ್ಷೇತ್ರ ಉಪಚುನಾವಣೆ; ಎಸ್ ಟಿ ಮೋರ್ಚಾದ ಶ್ರೀನಿವಾಸ್ ಗೆ ಒಲಿದ ಬಿಜೆಪಿ ಟಿಕೆಟ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮ...

ದಾವಣಗೆರೆ | ಒಳಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯಕ್ಕೆ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಹೋರಾಟ

ಸರ್ವೋಚ್ಛ ನ್ಯಾಯಾಲಯದ ಸಂವಿಧಾನಿಕ ಪೀಠವು ಒಳ ಮೀಸಲಾತಿ ವರ್ಗೀಕರಣ ಹಾಗೂ ಜಾರಿಯ...