ದಾವಣಗೆರೆ | ತುಂಗಭದ್ರಾ ನದಿಯಲ್ಲಿ ವೃದ್ಧೆ ಆತ್ಮಹತ್ಯೆ ಯತ್ನ: ರಕ್ಷಿಸಿದ ಹರಿಹರ ಪೊಲೀಸರು.‌

Date:

ಜೀವನದಲ್ಲಿ ಬೇಸರಗೊಂಡು ತುಂಗಭದ್ರಾ ನದಿಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲು ಹೋಗಿದ್ದ ವಯೋವೃದ್ಧೆಯನ್ನು ರಕ್ಷಿಸಿದ ದಾವಣಗೆರೆ ಜಿಲ್ಲೆ ಹರಿಹರ ಪೊಲೀಸರು, ಉಪಚರಿಸಿ ವಿಳಾಸ ಪತ್ತೆ ಮಾಡಿ ಸುರಕ್ಷಿತವಾಗಿ ಮಗನೊಂದಿಗೆ ಕಳುಹಿಸಿದ ಮಾನವೀಯ ಘಟನೆ ಹರಿಹರದಲ್ಲಿ ನಡೆದಿದೆ.

ಹರಿಹರ ತಾಲೂಕಿನ 87 ವರ್ಷದ ವಯೋವೃದ್ಧೆಯೊಬ್ಬರು ಮನೆಯಲ್ಲಿ ಬೇಸರಗೊಂಡು ನಗರದ ಪಕ್ಕದಲ್ಲಿ ಹರಿಯುವ ತುಂಗಭದ್ರಾ ನದಿ ಹತ್ತಿರ ಬಂದು ನದಿಯಲ್ಲಿ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಹೊಳೆ ಹತ್ತಿರದಲ್ಲೇ ಇದ್ದ ಅಫ್ತಾಬ್ ಎನ್ನುವವರು ಇದನ್ನು ಗಮನಿಸಿ, ಕೂಡಲೇ ಹರಿಹರ ನಗರ ಠಾಣೆಯ ಸಿಬ್ಬಂದಿ ಎಂ ಕೋಟೇಶ್ವರಗೆ ತಿಳಿಸಿದ್ದಾರೆ.

1002832194

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಠಾನದಿಂದ ಪ್ರೊ.ಬಿ.ವಿ.ವೀರಭದ್ರಪ್ಪ ವೈಚಾರಿಕ ಸಾಹಿತ್ಯ ಸಂವಾದ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೂಡಲೇ ಎಂ ಕೋಟೇಶ್ವರ ತಕ್ಷಣ ನದಿ ಹತ್ತಿರ ಹೋಗಿ ಸದರಿ ವಯೋವೃದ್ದೆಯನ್ನು ಸ್ಥಳೀಯರೊಂದಿಗೆ ರಕ್ಷಣೆ ಮಾಡಿದ್ದು, ನಂತರ ಸಹಾಯವಾಣಿ 112 ಗೆ ಕರೆ ಮಾಡಿ, 112 ಕರ್ತವ್ಯ ಅಧಿಕಾರಿಗಳಾದ ಗುತ್ಯಪ್ಪ ಹಾಗೂ ಚಾಲಕ ನಾಗಪ್ಪ ರವರ ಸಹಾಯದಿಂದ ಸದರಿ ನೊಂದ ವಯೋವೃದ್ಧೆಯನ್ನು ರಕ್ಷಿಸಿ, ಠಾಣೆಗೆ ಕರೆತಂದಿದ್ದಾರೆ. ನಂತರ ವಿಳಾಸ ಪತ್ತೆ ಮಾಡಿ ನಂತರ ವೃದ್ದೆಯ ಮಗ ಶಿವಕುಮಾರ್ ಜೊತೆ ಸುರಕ್ಷಿತವಾಗಿ ಮನೆಗೆ ಕಳಿಸಿ ಕೊಟ್ಟಿದ್ದಾರೆ. ಹರಿಹರ ನಗರದ ಪೊಲೀಸರ ಕಾರ್ಯವನ್ನು ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್ ರವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...