ದಾವಣಗೆರೆ | ವಿದ್ಯಾರ್ಥಿಗಳಿಗೆ “ಪರೀಕ್ಷೆ ಮತ್ತು ವೃತ್ತಿ ಮಾರ್ಗದರ್ಶನ” ಕಾರ್ಯಕ್ರಮ

Date:

ದಾವಣಗೆರೆ: ದಾವಣಗೆರೆ ವೆಲ್ಫೇರ್ ಫೌಂಡೇಶನ್ನ ಅಧ್ಯಕ್ಷ ಹಾಗೂ ಏಐಎಂಐಎಂ ಜಿಲ್ಲಾಧ್ಯಕ್ಷ ಮುಹಮ್ಮದ್ ಅಲಿ ಶೋಯಬ್ ಅವರ ಮಾರ್ಗದರ್ಶನದಲ್ಲಿ, ಷಾಹೀನ್ ಸಂಸ್ಥೆಗಳು ಸಮೂಹ ಮತ್ತು ಐಎಲ್ಎಂ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗಾಗಿ “ಹೌ ಟು ಫೇಸ್ ಎಕ್ಸಾಮ್ ಅಂಡ್ ಕೆರಿಯರ್ ಗೈಡೆನ್ಸ್” (ಪರೀಕ್ಷೆ ಮತ್ತು ವೃತ್ತಿ ಮಾರ್ಗದರ್ಶನ) ಕಾರ್ಯಕ್ರಮವನ್ನು ಗೋಲ್ಡನ್ ಪ್ಯಾಲೇಸ್ನಲ್ಲಿ ಆಯೋಜಿಸಲಾಗಿತ್ತು.

ಪರೀಕ್ಷೆಯ ಸಮಯದಲ್ಲಿ ವಿದ್ಯಾರ್ಥಿಗಳು ಎದುರಿಸುವ ಆತಂಕ, ಒತ್ತಡಗಳನ್ನು ನಿಭಾಯಿಸುವುದು ಹಾಗೂ ಭವಿಷ್ಯದ ವೃತ್ತಿ ಮಾರ್ಗಗಳ ಕುರಿತು ಸ್ಪಷ್ಟ ಮಾರ್ಗದರ್ಶನ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು SSLC ವಿದ್ಯಾರ್ಥಿಗಳಿಗಾಗಿ ಏರ್ಪಡಿಸಲಾಗಿತ್ತು.

1003432902

ಕಾರ್ಯಕ್ರಮದಲ್ಲಿ ಕೌಶಲ್ಯ ತರಬೇತುದಾರ ಅಮೀರ್ ಹಾಶಿಮಿ, ಕೆರಿಯರ್ ಕೌನ್ಸಿಲರ್ ಹಾಗೂ ಲೈಫ್ ಕೋಚ್ ಅತೀಕ್-ಉರ್-ರೆಹಮಾನ್ ಅವರು ತರಬೇತಿ ನೀಡುವ ಮೂಲಕ “ಪರೀಕ್ಷಾ ಸಿದ್ಧತೆಯ ಕ್ರಮಬದ್ಧ ತಂತ್ರಗಳು, ಸಮಯ ನಿರ್ವಹಣೆ, ವೃತ್ತಿ ಆಯ್ಕೆಯ ಅವಕಾಶಗಳು ಹಾಗೂ ಜೀವನ ಕೌಶಲಗಳ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಜ್ಞಾನಪೂರ್ಣ ಮಾಹಿತಿ ಹಂಚಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದಲ್ಲಿ ಫೌಂಡೇಶನ್ನಿನಿಂದ “ಈ ಪೀಳಿಗೆಯ ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ, ತಮ್ಮ ಭವಿಷ್ಯವನ್ನು ಬೆಳೆಸಿಕೊಳ್ಳಲು ಈ ಕಾರ್ಯಕ್ರಮ ನೆರವಾಗಲಿ ಎಂಬುದು ನಮ್ಮ ಆಶಯ ವ್ಯಕ್ತಪಡಿಸಿ, ಸಹಯೋಗ ನೀಡಿದ ಎಲ್ಲಾ ಸಂಸ್ಥೆಗಳು, ಪೋಷಕರು ಮತ್ತು ಉತ್ಸಾಹಿ ವಿದ್ಯಾರ್ಥಿಗಳಿಗೆ ಕೃತಜ್ಞತೆ ಸಲ್ಲಿಸಿದರು.

ದಾವಣಗೆರೆಯ ವಿವಿಧ ಶಾಲೆಗಳ ಸುಮಾರು ನೂರಾರು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಯೋಜನ ಪಡೆದರು. ಭವಿಷ್ಯದಲ್ಲೂ ಇಂತಹ ಉಪಯುಕ್ತ ಮಾರ್ಗದರ್ಶನ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ವಿದ್ಯಾರ್ಥಿಗಳು, ಆಯೋಜಕರು ಆಶಯ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...