ದಾವಣಗೆರೆ | ಭತ್ತ ಬೆಂಬಲ ಬೆಲೆಗೆ ಖರೀದಿಸುವಂತೆ ಆಗ್ರಹಿಸಿ ರೈತ ಸಂಘ ರಸ್ತೆ ತಡೆದು ಪ್ರತಿಭಟನೆ.

Date:

ಭತ್ತದ ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ, ಬೆಂಬಲ ಬೆಲೆಗೆ ಖರೀದಿಸುವಂತೆ ಆದೇಶ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ದಾವಣಗೆರೆ ಜಿಲ್ಲೆ ಚಿಕ್ಕತೊಗಲೇರಿ ಬಳಿಯ ರಾಜ್ಯ ಹೆದ್ದಾರಿ ಸೇರಿದಂತೆ ಜಿಲ್ಲೆಯ ವಿವಿಧೆಡೆ ರಸ್ತೆ ತಡೆ ನಡೆಸಿ ಒತ್ತಾಯಿಸಿತು.

1002006848
ಜಿಲ್ಲೆಯ ಹಲವೆಡೆ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು

ಭತ್ತಕ್ಕೆ ಕನಿಷ್ಠ 3500 ರೂಪಾಯಿಗಳ ಬೆಂಬಲ ಬೆಲೆ ನೀಡಬೇಕು ಮತ್ತು ಹೆಚ್ಚುವರಿ 1000 ರೂ. ಬೋನಸ್ ನೀಡಬೇಕು. ಈ ಕೂಡಲೇ ಖರೀದಿದಾರರಿಗೆ 3500 ಕ್ಕಿಂತ ಹೆಚ್ಚಿನ ಬೆಲೆಗೆ ಖರೀದಿಗೆ ಆದೇಶ ನೀಡಲು ಈ ಕೂಡಲೇ ಕೃಷಿ ಸಚಿವರು ಅಥವಾ ಮುಖ್ಯಮಂತ್ರಿಗಳು ಸಭೆ ನಡೆಸಿ ಆದೇಶಿಸಬೇಕು ಎಂದು ಒತ್ತಾಯಿಸಿ ದಾವಣಗೆರೆಯ ಚಿಕ್ಕತೊಗಲೇರಿ, ಜಗಳೂರು ತಾಲೂಕು ಸೇರಿದಂತೆ ಹಲವೆಡೆ ಮುಖಂಡ ಹುಚ್ಚವನಹಳ್ಳಿ ಮಂಜುನಾಥ್ ನೇತೃತ್ವದ ಕರ್ನಾಟಕ ರಾಜ್ಯ ರೈತ ಸಂಘ ರಸ್ತೆ ತಡೆ ನಡೆಸಿತು.

1002006849 1

ಈ ವೇಳೆ ಮಾತನಾಡಿದ ಮುಖಂಡ ಹುಚ್ಚವನಹಳ್ಳಿ ಮಂಜುನಾಥ್, “ಭತ್ತದ ಬೆಲೆ ಕುಸಿತದಿಂದ ರೈತರು ಆತಂಕಗೊಂಡಿದ್ದಾರೆ.‌ ಈಗ ಸಿಗುತ್ತಿರುವ ಬೆಲೆಯಿಂದಾಗಿ ಭತ್ತದ ಖರ್ಚು ವೆಚ್ಚಗಳಿಗೆ ಅದು ಸಾಕಾಗುತ್ತಿಲ್ಲ. ರೈತರು ನಷ್ಟದ ಬೆಲೆಗೆ ಭತ್ತ ಮಾರಾಟ ಮಾಡುವಂತಾಗಿದೆ. ಆದ್ದರಿಂದ ಜಿಲ್ಲಾಧಿಕಾರಿಗಳಿಗೆ 3500 ಗಳಿಗೆ ಭತ್ತ ಖರೀದಿ ಮಾಡಲು ಆದೇಶ ನೀಡಲು ಕೃಷಿ ಸಚಿವರ ಅಥವಾ ಮುಖ್ಯಮಂತ್ರಿಗಳ ಸಭೆ ಕರೆಯಬೇಕೆಂದು ಮನವಿ ನೀಡಿದ್ದು ಅದಕ್ಕೆ ಸ್ಪಂದಿಸಿಲ್ಲ. ಸರ್ಕಾರಕ್ಕೆ ರೈತರ ಹಿತಾಸಕ್ತಿ ಬಗ್ಗೆ ಕಾಳಜಿಯೇ ಇಲ್ಲ. ಕಾರಣ ರೈತರು ರಸ್ತೆ ತಡೆ ನಡೆಸುತ್ತಿದ್ದು ಈ ಕೂಡಲೇ ಭತ್ತದ ಖರೀದಿಗೆ 3500 ಬೆಂಬಲ ಬೆಲೆಗೆ ತೆಗೆದುಕೊಳ್ಳಲು ಆದೇಶಿಸಬೇಕು ಮತ್ತು ಹೆಚ್ಚುವರಿ ಬೋನಸ್ ನೀಡಬೇಕು” ಎಂದು ಒತ್ತಾಯಿಸಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1002006852

“ಜಿಲ್ಲಾಡಳಿತ ಸೂಕ್ತವಾಗಿ ಸ್ಪಂದಿಸದ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಜಿಲ್ಲಾದ್ಯಂತ ಎಲ್ಲ ರೈತರು ತಮ್ಮ ಗ್ರಾಮಗಳಲ್ಲಿಯೇ ರಸ್ತೆತಡೆ ಮಾಡಿ ಸರ್ಕಾರಕ್ಕೆ ಎಚ್ಚರಿಕೆ ನೀಡಲು ಕರೆ ನೀಡಲಾಗಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಸಾಲಬಾಧೆ, ಬೆಳೆ ಕೈಕೊಟ್ಟದ್ದರಿಂದ ವಿಷ ಸೇವಿಸಿ ರೈತ ಆತ್ಮಹತ್ಯೆ.‌

ಈ ವೇಳೆ ರೈತಸಂಘದ ಮುಖಂಡರಾದ ಎಲೋದಹಳ್ಳಿ ರವಿಕುಮಾರ್, ಆನಗೋಡು ಭೀಮಣ್ಣ, ಗಂಡುಗಲಿ, ಹರಿಹರದ ಗರಡಿ ಮನೆ ಬಸವರಾಜ್, ಯರವನಾಗತಿಹಳ್ಳಿ ರುದ್ರಪ್ಪ, ಹೂವಿನ ಮಡು ನಾಗರಾಜ್, ಚನ್ನಸಮುದ್ರ ಭೀಮಣ್ಣ, ಮರಡಿ ಸತೀಶ್ ಹಾಗೂ ಇತರ ಮುಖಂಡರು, ರೈತರು ಭಾಗವಹಿಸಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆಗೆ ಸಮರ್ಥ್, ಬಾಗಲಕೋಟೆಗೆ ಉಮೇಶ್: ಕಾಂಗ್ರೆಸ್ ಅಧಿಕೃತ ಘೋಷಣೆ

ರಾಜ್ಯದ 2 ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್‌ ಟಿಕೆಟ್‌ ಘೋಷಣೆ ಮಾಡಿದ್ದು, ದಾವಣಗೆರೆ...

ದಾವಣಗೆರೆ | ರಂಜಾನ್ ಪ್ರಾರ್ಥನೆ ವೇಳೆ ಈದ್ಗಾ ಮೈದಾನದಲ್ಲಿ ಹೆಜ್ಜೇನು ದಾಳಿ

ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ದಾವಣಗೆರೆ ತಾಲೂಕಿನ ಆನಗೋಡು ಬಳಿ ಈದ್ಗಾ ಮೈದಾನದಲ್ಲಿ...

ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ...

ದಾವಣಗೆರೆ | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಮರ್ಥ್ ಶಾಮನೂರು: ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್...