ದಾವಣಗೆರೆ: ಭತ್ತ ಖರೀದಿ ಕೇಂದ್ರಕ್ಕೆ ಆಗ್ರಹಿಸಿ ರಸ್ತೆಯಲ್ಲಿ ಭತ್ತ ಸುರಿದು ರೈತರ ಪ್ರತಿಭಟನೆ.

Date:

‘ಜಿಲ್ಲೆಯಲ್ಲಿ ಭತ್ತದ ಕಟಾವು ಆರಂಭವಾಗಿದೆ.ಭತ್ತದ ಬೆಲೆ ಕುಸಿತದಿಂದ ರೈತರಿಗೆ ನಷ್ಟವಾಗುತ್ತಿದೆ. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಕೂಡಲೇ ಭತ್ತ ಖರೀದಿಗೆ ಜಿಲ್ಲಾಡಳಿತ ಪ್ರಕ್ರಿಯೆ ಆರಂಭಿಸಬೇಕು’ ಎಂದು ಆಗ್ರಹಿಸಿ ದಾವಣಗೆರೆಯಲ್ಲಿ ಪಿ.ಬಿ. ರಸ್ತೆಗೆ ಭತ್ತ ಸುರಿದು ರೈತರು ಪ್ರತಿಭಟನೆ ನಡೆಸಿದರು.‌

ಜಿಲ್ಲಾಡಳಿತವು ಕೂಡಲೇ ಭತ್ತ ಖರೀದಿಗೆ ನೋಂದಣಿ ಪ್ರಕ್ರಿಯೆ ಆರಂಭಿಸಬೇಕು. ಖರೀದಿ ಕೇಂದ್ರಗಳನ್ನು ತೆರೆಯಬೇಕು’ ಎಂದು ಒತ್ತಾಯಿಸಿ ಜಿಲ್ಲಾ ರೈತ ಒಕ್ಕೂಟದ ನೇತೃತ್ವದಲ್ಲಿ ರೈತರು ಇಲ್ಲಿನ ಪಿ.ಬಿ.ರಸ್ತೆಯಲ್ಲಿ ವಾಹನ ಸಂಚಾರ ತಡೆದು ಶನಿವಾರ ಪ್ರತಿಭಟನೆ ನಡೆಸಿದರು. ಮಾನವ ಸರಪಳಿ ರಚಿಸಿದ ರೈತರು, ರಸ್ತೆ ಮಧ್ಯದಲ್ಲಿ ಭತ್ತ ಸುರಿದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

‘ಜಿಲ್ಲೆಯಲ್ಲಿ ಭತ್ತದ ಬೆಳೆ ಕಟಾವಿಗೆ ಬಂದಿದ್ದು, ಮುಕ್ತ ಮಾರುಕಟ್ಟೆಯಲ್ಲಿ ಕ್ವಿಂಟಲ್ ಭತ್ತದ ದರ ₹1,900 ರಿಂದ ₹1,950 ಇದ್ದು ದೂರು ಕುಸಿತವಾಗಿದೆ.‌ ಬೆಲೆ ಕುಸಿತದಿಂದ ರೈತರಿಗೆ ನಷ್ಟ ಆಗುತ್ತಿದೆ. ಭತ್ತ ಬೆಳೆಯುವ ರೈತರಿಗೆ ಅನ್ಯಾಯವಾಗುತ್ತಿದೆ. ಜಿಲ್ಲಾಡಳಿತ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಕೂಡಲೇ ಭತ್ತ ಖರೀದಿ ಪ್ರಕ್ರಿಯೆ ಆರಂಭಿಸಬೇಕು’ ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಕ್ವಿಂಟಲ್ ಭತ್ತಕ್ಕೆ ₹2,320 ನಿಗದಿಪಡಿಸಿದ್ದು, ರಾಜ್ಯ ಸರ್ಕಾರ ₹500 ಪ್ರೋತ್ಸಾಹಧನ ಮಂಜೂರು ಮಾಡಿ ₹2,820ರ ದರದಲ್ಲಿ ಖರೀದಿ ಮಾಡಬೇಕು. ಏಪ್ರಿಲ್ 15ರಂದು ಜಿಲ್ಲಾ ಟಾಸ್ಕ್‌ಫೋರ್ಸ್‌ ಸಮಿತಿ ಸಭೆ ನಡೆಸಿ, ಖರೀದಿ ಕೇಂದ್ರ ತೆರೆಯದಿರುವ ರೈತ ವಿರೋಧಿ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಪಾಕಿಸ್ತಾನಿ ಮಹಿಳೆಯ ಅಧ್ಯಯನ ವೀಸಾ, ಭಾರತ ಬಿಡುವ ಅಗತ್ಯವಿಲ್ಲ; ಎಸ್ಸಿ ಉಮಾ ಪ್ರಶಾಂತ್.‌

ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಮನವಿ ಸ್ವೀಕರಿಸಬೇಕು ಎಂದು ರೈತರು ಪಟ್ಟು ಹಿಡಿದಿದ್ದರು. ಉಪವಿಭಾಗಾಧಿಕಾರಿ ಆಗಮಿಸಿ ರೈತರ ಮನವಿ ಸ್ವೀಕರಿಸಿದರು. ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಿದ್ದ ಕಾರಣ ಸವಾರರು ಬೇರೆ ಮಾರ್ಗಗಳಲ್ಲಿ ಸಂಚರಿಸಿದರು.

ರೈತ ಮುಖಂಡರಾದ ತೇಜಸ್ವಿ ಪಟೇಲ್, ಬಿ.ಎಂ.ಸತೀಶ್, ಬೆಳವನೂರು ನಾಗೇಶ್ವರರಾವ್, ಧನಂಜಯ ಕಡ್ಲೇಬಾಳು, ಲೋಕಿಕೆರೆ ನಾಗರಾಜ್ ಸೇರಿದಂತೆ ಹಲವಾರು ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ...

ದಾವಣಗೆರೆ | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಮರ್ಥ್ ಶಾಮನೂರು: ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್...

ದಾವಣಗೆರೆ | ದಕ್ಷಿಣ ಕ್ಷೇತ್ರ ಉಪಚುನಾವಣೆ; ಎಸ್ ಟಿ ಮೋರ್ಚಾದ ಶ್ರೀನಿವಾಸ್ ಗೆ ಒಲಿದ ಬಿಜೆಪಿ ಟಿಕೆಟ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮ...

ದಾವಣಗೆರೆ | ಒಳಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯಕ್ಕೆ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಹೋರಾಟ

ಸರ್ವೋಚ್ಛ ನ್ಯಾಯಾಲಯದ ಸಂವಿಧಾನಿಕ ಪೀಠವು ಒಳ ಮೀಸಲಾತಿ ವರ್ಗೀಕರಣ ಹಾಗೂ ಜಾರಿಯ...