ದಾವಣಗೆರೆ | ಯೂರಿಯಾ ರಸಗೊಬ್ಬರ ಪೂರೈಕೆಗೆ ಜಗಳೂರಿನ ಹಲವೆಡೆ ರೈತಸಂಘ ರಸ್ತೆ ತಡೆದು ಪ್ರತಿಭಟನೆ

Date:

*ಕರ್ನಾಟಕ ರಾಜ್ಯ ರೈತ ಸಂಘದ ಹಲವು ಸಂಘಟನೆಗಳು ಜಗಳೂರು ತಾಲೂಕಿನ ರೈತರಿಗೆ ಯೂರಿಯಾ ರಸಗೊಬ್ಬರ ಪೂರೈಕೆಗಾಗಿ ದಾವಣಗೆರೆ ಜಿಲ್ಲೆ ಜಗಳೂರು ಎಪಿಎಂಸಿ ಸೇರಿದಂತೆ ತಾಲೂಕಿನ ವಿವಿಧೆಡೆ ರಾಜ್ಯ ರಸ್ತೆ , ಹೆದ್ದಾರಿಗಳನ್ನು ತಡೆದು ಬೃಹತ್ ಪ್ರತಿಭಟನೆಯನ್ನು ಮಾಡಲಾಯಿತು.

1002410351

ಪ್ರತಿಭಟನೆಯಲ್ಲಿದ್ದ ತಾಲೂಕಿನ ರೈತ ಸಂಘದ ಅಧ್ಯಕ್ಷ ಕುಮಾರ್ ಭರಮಸಮುದ್ರ ಮಾತನಾಡಿ “ದಾವಣಗೆರೆ ಜಿಲ್ಲೆ, ಜಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆ ಯೂರಿಯಾ ರಸಗೊಬ್ಬರ ಪೂರೈಕೆಯಿಲ್ಲದೇ ರೈತರು ಕಂಗಾಲಾಗಿದ್ದಾರೆ. ಪೈರಿನ ಬೆಳವಣಿಗೆಗೆ ಹಂತದಲ್ಲಿ ಅತ್ಯವಶ್ಯಕವಾಗಿ ಬೇಕಿದ್ದ ಯೂರಿಯಾ ಸಿಗದೇ ಬೆಳೆಗಳ ಇಳುವರಿ ಕುಂಠಿತವಾಗಿ ರೈತ ಆರ್ಥಿಕವಾಗಿ ನಷ್ಟಕ್ಕೆ ಗುರಿಯಾಗುತ್ತಾರೆ.‌ ಸಕಾಲಕ್ಕೆ ಗೊಬ್ಬರ ಪೂರೈಸಬೇಕಿದ್ದ ಸರ್ಕಾರ, ಕೃಷಿ ಇಲಾಖೆ ಕುಂಟು ನೆಪಗಳನ್ನು ಹೇಳಿ ಕಾಲಹರಣ ಮಾಡುತ್ತಿದ್ದಾರೆ” ಎಂದು ಆರೋಪಿಸಿದರು.

1002410350

“ಅಗತ್ಯ ಗೊಬ್ಬರ ಒದಗಿಸಲು ಕೃಷಿ ಇಲಾಖೆ, ಸಚಿವರು ವಿಫಲರಾಗಿದ್ದಾರೆ. ಕೃಷಿ ಸಚಿವ ಚೆಲುವರಾಯಸ್ವಾಮಿ ಇಸ್ರೇಲ್, ಇರಾನ್, ಉಕ್ರೇನ್ ಎಂದು ತೋರಿಸಿ ಕುಂಟು ನೆಪಗಳನ್ನು ಹೇಳುತ್ತಿದ್ದಾರೆ. ಆಗಿರುವ ವಿಳಂಬ, ತಪ್ಪನ್ನು ಒಪ್ಪಿಕೊಂಡು, ಕೂಡಲೇ ಜಿಲ್ಲೆಯ ರೈತರಿಗೆ ಅವಶ್ಯಕವಾದ ರಸಗೊಬ್ಬರ ಪೂರೈಕೆಗೆ ಜಿಲ್ಲಾಡಳಿತ ಕೃಷಿ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು, ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಆಗುವ ರೈತರ ಆರ್ಥಿಕ ನಷ್ಟಕ್ಕೆ, ಅನಾಹುತಗಳಿಗೆ ಅವರೇ ಕಾರಣರಾಗುತ್ತಾರೆ” ಎಂದು ರೈತ ಮುಖಂಡ ಹುಚ್ಚವ್ವನಹಳ್ಳಿ ಮಂಜುನಾಥ್ ಈದಿನ ಡಾಟ್ ಕಾಮ್ ಗೆ ಪ್ರತಿಕ್ರಿಯೆ ನೀಡಿ ಸರ್ಕಾರಕ್ಕೆ ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1002410348

ಹಲವೆಡೆ ರೈತ ಸಂಘದ ಬಣಗಳ ಮುಖಂಡರು ಕಾರ್ಯಕರ್ತರು ಹೆದ್ದಾರಿ ರಸ್ತೆ ತಡೆ ನಡೆಸಿದ್ದರಿಂದ ವಾಹನಗಳುನಿಂತಲ್ಲೇ ನಿಂತು ಸಂಚಾರ ದಟ್ಟಣೆ ಹೆಚ್ಚಾಯಿತು. ಪ್ರತಿಭಟನಾ ಸ್ಥಳಕ್ಕೆ ದಾವಣಗೆರೆ ಕೃಷಿ ಜಂಟಿ ನಿರ್ದೇಶಕರಾದ ಜಿಯಾಉಲ್ಲಾ ಕೆ, ಡಿ.ವೈ.ಎಸ್. ಪಿ ಬಸವರಾಜ್, ಜಗಳೂರು ಪೊಲೀಸ್ ವೃತ್ತ ನಿರೀಕ್ಷಕರಾದ ಸಿದ್ದರಾಮಯ್ಯ, ಪೊಲೀಸ್ ಸಬ್ ಇನ್ಸ್ಪೆಕ್ಟರ್ ಗಾದಿಲಿಂಗಪ್ಪ, ಜಗಳೂರು ತಾಲೂಕು ದಂಡಾಧಿಕಾರಿ ಸೈಯದ್ ಕಲೀಮ್ ಉಲ್ಲ, ಹಾಗೂ ಜಗಳೂರು ತಾಲೂಕು ಸಹಾಯಕ ಕೃಷಿ ನಿರ್ದೇಶಕರು ಡಿ ಶ್ವೇತ, ಇವರು ಧರಣಿ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾ ರೈತರಿಗೆ ಇನ್ನೆರಡು ದಿನಗಳಲ್ಲಿ ಅಂದರೆ ಗುರುವಾರದ ಒಳಗೆ ಯೂರಿಯಾ ರಸಗೊಬ್ಬರವನ್ನು ಪೂರ್ಣ ಪ್ರಮಾಣದಲ್ಲಿ ಒದಗಿಸುತ್ತೇವೆಂದು ಭರವಸೆ ನೀಡಿದ ನಂತರ ರೈತ ಸಂಘಟನೆ ಕಾರ್ಯಕರ್ತರು ಹಾಗೂ ರೈತರು ಧರಣಿ ಸತ್ಯಾಗ್ರಹವನ್ನು ಹಿಂಪಡೆದರು.

1002410347

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಯೂರಿಯಾ ರಸಗೊಬ್ಬರ ಕೊರತೆ: ವಿತರಕ ಏಜೆನ್ಸಿ ವಿರುದ್ಧ ರೈತ ಸಂಘ ಪ್ರತಿಭಟನೆ

ಈ ಪ್ರತಿಭಟನಾ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ (ವಾಸುದೇವ ಮೇಟಿ ಬಣದ) ತಾಲೂಕು ಅಧ್ಯಕ್ಷರಾದ ಬಿ ಕುಮಾರ್ ಭರಮಸಮುದ್ರ, ತಾಲೂಕು ಉಪಾಧ್ಯಕ್ಷರಾದ ದೊಡ್ಡಬೊಮ್ಮನಹಳ್ಳಿ ಬಸವರಾಜ್, ಜಿಲ್ಲಾ ಕಾರ್ಯದರ್ಶಿಯಾದ ಕಿರಣ್ ಕುಮಾರ್ ಟಿ, ಜಿಲ್ಲಾ ಜಂಟಿ ಕಾರ್ಯದರ್ಶಿ ಕುಮಾರಸ್ವಾಮಿ, (ಹುಚ್ಚವ್ವನಹಳ್ಳಿ ಮಂಜುನಾಥ್ ಬಣ) ಅಧ್ಯಕ್ಷ ಕಸವನಹಳ್ಳಿ ನಾಗರಾಜ್, ಪ್ರಧಾನ ಕಾರ್ಯದರ್ಶಿ ರಾಜು, ಗೌಡಗೊಂಡನಳ್ಳಿ ಸತೀಶ, ಘಟಕದ ಅಧ್ಯಕ್ಷರಾದ ಚನ್ನಬಸಪ್ಪ ಹಾಗೂ ವಕೀಲರಾದ ಆರ್. ಓಬಳೇಶ್, ಮುಖಂಡರಾದ ಗುರುಸಿದ್ದಣ್ಣ, ಚಿರಂಜೀವಿ, ಗೌರಿಪುರ ಸತ್ಯಮೂರ್ತಿ, ಮಲ್ಲೇಶ್, ಸೂರಪ್ಪ, ತಿಪ್ಪಣ್ಣ, ಗುಂಡಪ್ಪ, ಈರಜ್ಜ, ಮಧು, ಪ್ರಕಾಶ್, ಕಾಡಪ್ಪ, ಕೃಷ್ಣಪ್ಪ, ಸೇರಿದಂತೆ ಮತ್ತು ರೈತ ಮಹಿಳೆಯರು ಸೇರಿದಂತೆ ಸಾವಿರಾರು ರೈತರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...