ದಾವಣಗೆರೆ | ಫೆ. 12ರ ಅಖಿಲ ಭಾರತ ಮುಷ್ಕರ; ಸಂಯುಕ್ತ ಹೋರಾಟ ಕರ್ನಾಟಕ ಬೈಕ್ ರ್ಯಾಲಿ

Date:

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಿಗೆ ಸೇರಿ ಕಾರ್ಮಿಕ, ರೈತರ ವಿರುದ್ಧ ಹಾಗೂ ಜನ ವಿರೋಧಿ ನೀತಿಗಳನ್ನು ಜಾರಿಗೆ ತಂದು ಜನರ ಸ್ವಾತಂತ್ರ್ಯ ಮತ್ತು ದುಡಿಯುವ ಜನರ ಹಕ್ಕನ್ನು ಕಿತ್ತುಕೊಳ್ಳಲಾಗುತ್ತಿದೆ ಎಂದು ಪ್ರತಿಭಟಿಸಿ ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಾರ್ಮಿಕ ಸಂಘಟನೆಗಳು, ಕರೆ ನೀಡಿರುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರದ ಅಂಗವಾಗಿ ಸಂಯುಕ್ತ ಹೋರಾಟ ಕರ್ನಾಟಕದ ಮುಖಂಡರು ಇಂದು ದಾವಣಗೆರೆಯ ಜಯದೇವ ವೃತ್ತದಿಂದ ಬೈಕ್ ರ್ಯಾಲಿ ನಡೆಸಿದರು.

ದಾವಣಗೆರೆಯಲ್ಲಿ ಜಯದೇವ ವೃತ್ತದಿಂದ ಬೈಕ್ ರ್ಯಾಲಿ ಪ್ರಾರಂಭಿಸಿದ ಸಂಯುಕ್ತ ಹೋರಾಟ ಕರ್ನಾಟಕದ ಮುಖಂಡರು ಹಾಗೂ ಕಾರ್ಯಕರ್ತರು ಜಯದೇವ ವೃತದಿಂದ ಪ್ರಾರಂಭಿಸಿ ಅಂಬೇಡ್ಕರ್ ವೃತ್ತ, ಹದಡಿ ರಸ್ತೆ ಮೂಲಕ ಎಚ್ ಕೆ ಆರ್ ವೃತ್ತ, ಭಗತ್ ಸಿಂಗ್ ನಗರ, ಕೆಎಸ್ಆರ್ಟಿಸಿ ಬಸ್ ನಿಲ್ದಾಣ, ಕೃಷಿ ಮಾರುಕಟ್ಟೆಯ ಪ್ರಾಂಗಣಕ್ಕೆ ತೆರಳಿ, ಮಂಡಿಪೇಟೆ ಮೂಲಕ ಹೊಂಡದ ಸರ್ಕಲ್, ನಗರಸಭೆ ಮುಂಬಾಗದ ಮೂಲಕ ಜಯದೇವ ವೃತ್ತದಲ್ಲಿ ಸಮಾರೋಪಗೊಂಡಿತು.

WhatsApp Image 2026 02 10 at 6.46.31 PM

ಈ ವೇಳೆ ಮಾತನಾಡಿದ ಎಐಯುಟಿಯುಸಿ ರಾಜ್ಯಾಧ್ಯಕ್ಷ ಸೋಮಶೇಖರ್ ಬಳ್ಳಾರಿ “ಈ ದೇಶದಲ್ಲಿ ಅದಾನಿ ಅಂಬಾನಿಗಳಂತಹ ಬಂಡವಾಳಶಾಹಿಗಳ ಹಿತಾಸಕ್ತಿಗೋಸ್ಕರ, ಅವರ ಸಂಪತ್ತನ್ನು ಹೆಚ್ಚಿಸಲು ಕಾರ್ಮಿಕರ, ರೈತರ ಹಾಗೂ ಜನಸಾಮಾನ್ಯರ ವಿರುದ್ಧವಾಗಿ ಜನ ವಿರೋಧಿ ನೀತಿಗಳನ್ನು ಕೇಂದ್ರ ಸರ್ಕಾರ ಜಾರಿಗೊಳಿಸುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೊಡ್ಡ ದೊಡ್ಡ ಕೈಗಾರಿಕೋದ್ಯಮಿಗಳ ಮತ್ತು ಬಂಡವಾಳಶಾಹಿಗಳ ಅನುಕೂಲತೆಯ ದೃಷ್ಟಿಯಿಂದ ಕಾರ್ಮಿಕ ಕಾನೂನುಗಳನ್ನು ಸರಳೀಕರಣಗೊಳಿಸಿ ಲೇಬರ್ ಕೋಡ್ ಗಳನ್ನು ಜಾರಿಗೆ ತಂದು ಕಾರ್ಮಿಕರ ಸ್ವಾತಂತ್ರ್ಯ , ಹಕ್ಕುಗಳನ್ನು ಹತ್ತಿಕ್ಕಲಾಗುತ್ತಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಹಲವು ಜನವಿರೋಧಿ ನೀತಿ, ಕಾರ್ಮಿಕ ವಿರೋಧಿ ನೀತಿಗಳ ಮೂಲಕ ದುಡಿಯುವ ಅವಧಿಯ ಹೆಚ್ಚು ಮಾಡಿ, ಮುಷ್ಕರದ ಹಕ್ಕನ್ನು ಕಿತ್ತುಕೊಳ್ಳಲಾಗುತ್ತಿದೆ, ಸಂಘಟನೆಯ ಹಕ್ಕು ಕಿತ್ತುಕೊಳ್ಳಲಾಗುತ್ತಿದೆ, ಕಾಯಂ ಉದ್ಯೋಗದ ಹಕ್ಕನ್ನು ಕಿತ್ತುಕೊಳ್ಳಲಾಗುತ್ತಿದೆ” ಎಂದು ಆರೋಪಿಸಿದರು.

“ಇದರೊಂದಿಗೆ ರೈತ ವಿರೋಧಿ ನೀತಿಗಳನ್ನು ಕೂಡ ಜಾರಿಗೊಳಿಸಲಾಗುತ್ತಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಒಟ್ಟಿಗೆ ಸೇರಿ ಬಂಡವಾಳ ಶಾಹಿಗಳ ಪರ ನೀತಿಗಳನ್ನು ಜಾರಿಗೊಳಿಸುತ್ತಿವೆ. ಇದರ ವಿರುದ್ಧ 10 ಕಾರ್ಮಿಕ ಸಂಘಟನೆಗಳು ಹಾಗೂ ಸಂಯುಕ್ತ ಕಿಸಾನ್ ಮೋರ್ಚಾ ಒಟ್ಟಿಗೆ ಸೇರಿ ಕಾರ್ಮಿಕ, ರೈತ ವಿರೋಧಿ, ಜನ ವಿರೋಧಿ ನೀತಿಗಳನ್ನು ವಿರೋಧಿಸಿ ರದ್ದು ಮಾಡಲು ಒತ್ತಾಯಿಸಿ 2026, ಫೆಬ್ರವರಿ 12ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರವನ್ನು ನಡೆಸುತ್ತಿದ್ದೇವೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಪರಿಶಿಷ್ಟರ ಎಸ್‌ಸಿಪಿಎಸ್‌ಟಿ ಅನುದಾನ ದುರ್ಬಳಕೆ ನಿಲ್ಲಿಸಿ: ದಸಂಸ ಮುಖಂಡ ಮಂಜುನಾಥ ಕುಂದುವಾಡ

ಬೈಕ್ ರಾಲಿಯಲ್ಲಿ ಸಂಯುಕ್ತ ಹೋರಾಟ ಕರ್ನಾಟಕದ ಮುಖಂಡರಾದ ಉಮೇಶ್ ಆವರ್ಗೆರೆ, ರಾಘವೇಂದ್ರ ನಾಯರಿ, ಮಂಜುನಾಥ್ ಕೈದಾಳ್, ಮಧು ತೊಗಲೇರಿ, ಐರಣಿ ಚಂದ್ರು, ಲಕ್ಷ್ಮಣ್, ರಮೇಶ್ ದಾಸರ್, ಶಿವಕುಮಾರ್, ರೈತ ಸಂಘದ ಹೊನ್ನೂರು ಮುನಿಯಪ್ಪ, ಬುಳ್ಳಾಪುರ ಹನುಮಂತಪ್ಪ, ಜನಶಕ್ತಿಯ ಸತೀಶ್ ಅರವಿಂದ್, ಪವಿತ್ರ ಅರವಿಂದ್, ಆದಿಲ್ ಖಾನ್, ರಾಮಾಂಜನೇಯ, ಅಶ್ವಖ್ ಸೇರಿದಂತೆ ಹಲವರು ಭಾಗವಹಿಸಿದ್ದರು.‌

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...