ದಾವಣಗೆರೆ | ಅಂಬೇಡ್ಕರ್ ಭವನದ ನಿರ್ಮಾಣಕ್ಕೆ ಶಂಕುಸ್ಥಾಪನೆ, ದಲಿತ ಹೋರಾಟಗಾರರ ಸಂತಸ.

Date:

ದಾವಣಗೆರೆ ಸರ್ಕೀಟ್ ಹೌಸ್ ಪಕ್ಕದ ಜಾಗದಲ್ಲಿ ದಲಿತ ಸಂಘಟನೆಗಳ ಮುಖಂಡರು ಕಾರ್ಯಕರ್ತರು ಜಮಾಯಿಸಿದ್ದರು. ಅಲ್ಲಿದ್ದ ಎಲ್ಲರ ಮನದಲ್ಲಿ ಏನೋ ಒಂದು ಸಾರ್ಥಕತೆ ಸಾಧಿಸಿದ ಭಾವ ಮನಸ್ಸಿನಲ್ಲಿ ತುಂಬಿತ್ತು. ಇದಕ್ಕೆ ಕಾರಣವಾಗಿದ್ದು ದಾವಣಗೆರೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ಅಂಬೇಡ್ಕರ್ ಭವನದ ಭೂಮಿ ಪೂಜೆ ಮತ್ತು ಶಂಕುಸ್ಥಾಪನೆಯ ಕಾರ್ಯಕ್ರಮ.

ಬಹುದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಅಂಬೇಡ್ಕರ್ ಭವನದ ಜಾಗದ ನಿಗದಿ ವಿವಾದಕ್ಕೆ ಸಂಬಂಧಿಸಿದಂತೆ ಹಲವುವರ್ಷಗಳಿಂದ ದಲಿತ ಸಂಘಟನೆಗಳು ಹೋರಾಟಗಾರರು ಮತ್ತು ಸ್ಥಳೀಯ ಜಿಲ್ಲಾಡಳಿತದ ನಡುವೆ ತಿಕ್ಕಾಟಕ್ಕೆ ಕಾರಣವಾಗಿದ್ದ ಅಂಬೇಡ್ಕರ್ ಭವನದ ನಿರ್ಮಾಣ ಕಾಮಗಾರಿ ಯಶಸ್ವಿಯಾಗಿ ಸುಖಾಂತ್ಯ ಕಂಡಿದೆ. ದಾವಣಗೆರೆ ಸರ್ಕಿಟ್ ಹೌಸ್ ಬಳಿಯ ಜಾಗನಿಗಧಿ ಮಾಡಿ ಅಂಬೇಡ್ಕರ್ ಭವನಕ್ಕೆ ಈಗಾಗಲೇ ಒದಗಿಸಲಾಗಿದ್ದ ಅನುದಾನ ಸೇರಿದಂತೆ ಮತ್ತಷ್ಟು ಅನುದಾನವನ್ನು ಒದಗಿಸಿ ಶಂಕುಸ್ಥಾಪನೆ ನೆರವೇರಿಸಿದ್ದು ದಲಿತ ಸಂಘಟನೆಗಳಲ್ಲಿ ಉತ್ಸಾಹದ ಮತ್ತು ಸಂತೋಷದ ಅಲೆ ಎಬ್ಬಿಸಿತ್ತು.

ಡಾ.ಅಂಬೇಡ್ಕರ್ ರವರ 134ನೇ ಜಯಂತಿಯ ದಿನವೇ ಸುಮಾರು ಇಪ್ಪತ್ತು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಅಂಬೇಡ್ಕರ್ ಭವನದ ಭೂಮಿ ಪೂಜೆ, ಶಂಕುಸ್ಥಾಪನೆಯನ್ನು ಮಧ್ಯಾಹ್ನ 2.30ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ನೆರವೇರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001836091

ಕಾರ್ಯಕ್ರಮದಲ್ಲಿ ಮಾತನಾಡಿದ ಗಣಿ, ಭೂವಿಜ್ಞಾನ ಮತ್ತು ತೋಟಗಾರಿಕೆ ಸಚಿವ ಮಲ್ಲಿಕಾರ್ಜುನ್, “ಬಹಳ ದಿನಗಳಿಂದಲೂ ನೆನೆಗುದಿಗೆ ಬಿದ್ದಿದ್ದ ಅಂಬೇಡ್ಕರ್ ಭವನದ ಭೂಮಿ ಪೂಜೆ ಇಂದು ನೆಡೆದಿದೆ.‌ 2000 ಇಸವಿಯಲ್ಲೇ ಪ್ರಾರಂಭವಾಗಬೇಕಿತ್ತು. ದಲಿತ ಸಂಘಟನೆಗಳ ಮುಖಂಡರ ಮುಖಂಡ ಒಮ್ಮತವಿಲ್ಲದೆ ಮುಂದಕ್ಕೆ ಬಂದಿತ್ತು. ಡಾ.ಅಂಬೇಡ್ಕರ್ ಅವರ ಆಶಯದಂತೆ ದಲಿತ, ಹಿಂದುಳಿದ ವರ್ಗಗಳ ಮಕ್ಕಳಿಗೆ ಹಾಸ್ಟೆಲ್, ವಿಧ್ಯಾಭ್ಯಾಸ ನೀಡುವ ಕೆಲಸ ಸರ್ಕಾರ ಮಾಡುತ್ತಿದೆ.‌ ಪೌರಕಾರ್ಮಿಕರಿಗೆ ಖಾಯಂ ಮಾಡುವ ಕೆಲಸ ನೆಡೆಯುತ್ತಿದೆ. ಈ ಜಾಗ ಡಿಸಿಸಿ ಬ್ಯಾಂಕ್ ನವರಿಗೆ ಕಟ್ಟಡಕ್ಕೆ ನೀಡಲಾಗಿತ್ತು. ಆದರೆ ಅವರಿಗೆ ಬೇರೆ ಜಾಗ ಕೊಟ್ಟು ಅಂಬೇಡ್ಕರ್ ಭವನಕ್ಕೆ ಜಾಗ ಮರು ಮಂಜೂರು ಮಾಡಲಾಗಿದೆ.‌ ಒಳ್ಳೆಯ ಗುತ್ತಿಗೆದಾರರಿಗೆ ಈ ಕೆಲಸ ವಹಿಸಲಾಗುವುದು. ಹಣದ ಕೊರತೆ ಇಲ್ಲ. ಉತ್ತಮ ಸುಸಜ್ಜಿತ ಭವನ ನಿರ್ಮಾಣಕ್ಕೆ ಸರ್ಕಾರ ಮತ್ತು ಜಿಲ್ಲಾಡಳಿತ ಬದ್ದವಾಗಿದೆ. ಎಚ್. ಆಂಜನೇಯ ಸಚಿವರಾಗಿದ್ದಾಗ ಜಿಲ್ಲೆಯ ಬಹುತೇಕ ಕಡೆ ಸಮುದಾಯ ಭವನ ನಿರ್ಮಾಣಕ್ಕೆ ಉತ್ತಮ ಅನುದಾನ ಬಿಡುಗಡೆ ಮಾಡಿಸಿದ್ದೇವೆ. ಎಲ್ಲರೂ ಕೈಜೋಡಿಸಿ ಬೆಂಗಳೂರಿನಲ್ಲಿರುವಂತಹ ಉತ್ತಮ, ಸುಸಜ್ಜಿತ ಅಂಬೇಡ್ಕರ್ ಭವನ ನಿರ್ಮಾಣ ಮಾಡಲು ಎಲ್ಲರೂ ಕೈಜೋಡಿಸೋಣ” ಎಂದು ತಿಳಿಸಿದರು.

1001836095
ಅಂಬೇಡ್ಕರ್ ಭವನದ ಶಂಕುಸ್ಥಾಪನೆ

ಶಾಸಕ ಬಸವಂತಪ್ಪ ಮಾತನಾಡಿ,”ಬಹಳ ದಿನಗಳ ನಂತರ ಅಂಬೇಡ್ಕರ್ ಭವನ ನಿರ್ಮಾಣ ಸಂತೋಷದ ವಿಷಯ. ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ನಿರ್ಮಾಣಕ್ಕೆ ಜಾಗ ದೊರೆತಿದೆ. ಇದಕ್ಕೆ ಕಾರಣರಾದ ಸಚಿವರು, ಸಂಘಟನೆಯ ಕಾರ್ಯಕರ್ತರು, ಮುಖಂಡರಿಗೆ ಅಭಿನಂದನೆಗಳು. ಉತ್ತಮವಾದ ಅಂಬೇಡ್ಕರ್ ಭವನ ನಿರ್ಮಾಣ ಎಲ್ಲರ ಕನಸಾಗಿತ್ತು. ಬೆಂಗಳೂರು, ವಸಂತನಗರದ ರೀತಿ ಉತ್ತಮ ಭವನ ನಿರ್ಮಾಣವಾಗಬೇಕು. ಮುಖಂಡರಿಗೆ ಭವನ ನಿರ್ಮಾಣದ ಬಗ್ಗೆ ದೂರದೃಷ್ಟಿ ಬೇಕು. ಇದು ಸಮಾಜದ ಎಲ್ಲ ಸಮುದಾಯಗಳಿಗೆ ಉಪಯೋಗವಾಗಬೇಕು” ಎಂದು ಅಭಿಪ್ರಾಯಪಟ್ಟರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಸಂಭ್ರಮದ ಅಂಬೇಡ್ಕರ್ ಜಯಂತಿ ಆಚರಣೆ ಮತ್ತು ‘ಅರಿವೇ ಅಂಬೇಡ್ಕರ’ ವಿಶೇಷ ಸಂಚಿಕೆ ಬಿಡುಗಡೆ.

ಕಾರ್ಯಕ್ರಮದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್ ಇಟ್ನಾಳ್, ಮಹಾ ನಗರ ಪಾಲಿಕೆ ಆಯುಕ್ತ ರೇಣುಕಾ, ಮುಖಂಡರಾದ ಡಿ ಬಸವರಾಜ್, ರವಿ ನಾರಾಯಣ್, ಮಲ್ಲೇಶ್, ಕುಂದುವಾಡ ಮಂಜುನಾಥ್, ಬಸವರಾಜು, ನೀಲಗಿರಿಯಪ್ಪ, ಮಲ್ಲಿಕಾರ್ಜುನ್, ಹನುಮಂತಪ್ಪ, ಆವರಗೆರೆ ಉಮೇಶ್, ದುಗ್ಗಪ್ಪ, ಹಾಲೇಶ್, ಮಲ್ಲಪ್ಪ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಕಾರ್ಯಕರ್ತರು ಹಾಜರಿದ್ದರು. ಹೆಗ್ಗರೆ ರಂಗಪ್ಪ, ಐರಣಿ ಚಂದ್ರು ಕ್ರಾಂತಿಗೀತೆ ಹಾಡಿದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ...

ದಾವಣಗೆರೆ | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಮರ್ಥ್ ಶಾಮನೂರು: ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್...

ದಾವಣಗೆರೆ | ದಕ್ಷಿಣ ಕ್ಷೇತ್ರ ಉಪಚುನಾವಣೆ; ಎಸ್ ಟಿ ಮೋರ್ಚಾದ ಶ್ರೀನಿವಾಸ್ ಗೆ ಒಲಿದ ಬಿಜೆಪಿ ಟಿಕೆಟ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮ...

ದಾವಣಗೆರೆ | ಒಳಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯಕ್ಕೆ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಹೋರಾಟ

ಸರ್ವೋಚ್ಛ ನ್ಯಾಯಾಲಯದ ಸಂವಿಧಾನಿಕ ಪೀಠವು ಒಳ ಮೀಸಲಾತಿ ವರ್ಗೀಕರಣ ಹಾಗೂ ಜಾರಿಯ...