ದಾವಣಗೆರೆ | ನರೇಗಾ ಕೂಲಿಕಾರರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ

Date:

ನರೇಗಾ ಕಾರ್ಮಿಕರ ಆರೋಗ್ಯದ ಸುರಕ್ಷತೆ ಮತ್ತು ಕಲ್ಯಾಣಕ್ಕಾಗಿ, ಮಹಾತ್ಮ ಗಾಂಧಿ ನರೇಗಾ ಯೋಜನೆ ಅಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಕೂಲಿಕಾರರಿಗಾಗಿ
ದಾವಣಗೆರೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ವಿವಿಧ ತಾಲೂಕುಗಳಲ್ಲಿನ ಕಾಮಗಾರಿಯ ಸ್ಥಳಗಳಲ್ಲಿಯೇ ಉಚಿತ ಆರೋಗ್ಯ ತಪಾಸಣೆ ಶಿಬಿರಗಳನ್ನು ನವಂಬರ್ 15 ರಂದು ಆಯೋಜಿಸಲಾಗಿದೆ.

1003085365

ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್ “ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಗ್ರಾಮೀಣ ಪ್ರದೇಶಗಳಲ್ಲಿ ದುಡಿದು ಜೀವನ ಸಾಗಿಸುತ್ತಿರುವ ಕೂಲಿಕಾರರ ಆರೋಗ್ಯ ನಮ್ಮ ಪ್ರಮುಖ ಆದ್ಯತೆ. ಶ್ರಮದ ಮೂಲಕ ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡುತ್ತಿರುವ ಈ ಶ್ರಮಜೀವಿಗಳ ದೈಹಿಕ ಕ್ಷೇಮತೆ ಖಚಿತಪಡಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿರುತ್ತದೆ. ಈ ಉಚಿತ ಆರೋಗ್ಯ ತಪಾಸಣೆ ಶಿಬಿರಗಳು, ನರೇಗಾ ಕಾರ್ಮಿಕರ ಆರೋಗ್ಯದ ಮೇಲಿನ ಕಾಳಜಿಯ ಪ್ರತೀಕವಾಗಿದೆ. ಈ ಶಿಬಿರಗಳ ಮೂಲಕ ಪ್ರತಿ ಕೆಲಸಗಾರರು ತಮ್ಮ ಆರೋಗ್ಯದ ಬಗ್ಗೆ ಅರಿವು ಪಡೆಯಬೇಕು, ಸಮಯಕ್ಕೆ ಸರಿಯಾಗಿ ತಪಾಸಣೆ ಮಾಡಿಸಿಕೊಳ್ಳಬೇಕು ಮತ್ತು ಅಗತ್ಯ ಚಿಕಿತ್ಸೆಯನ್ನು ಪಡೆಯಬೇಕು. ಎಲ್ಲ ಇಲಾಖಾ ಅಧಿಕಾರಿಗಳು, ವೈದ್ಯಕೀಯ ಸಿಬ್ಬಂದಿ ಹಾಗೂ ಪಂಚಾಯತ್ ನೌಕರರು ಈ ಕಾರ್ಯದಲ್ಲಿ ಸಕ್ರಿಯವಾಗಿ ಭಾಗವಹಿಸಿ ಶಿಬಿರಗಳನ್ನು ಯಶಸ್ವಿಯಾಗಿ ನಡೆಸಬೇಕು” ಎಂದು ತಿಳಿಸಿದ್ದಾರೆ.

1003085363

ಶಿಬಿರಗಳು ಚನ್ನಗಿರಿ ತಾಲ್ಲೂಕು – ದಾಗಿನಕಟ್ಟೆ ಗ್ರಾಮ ಪಂಚಾಯಿತಿ, ದಾವಣಗೆರೆ ತಾಲ್ಲೂಕು – ಕಾಡಜ್ಜಿ ಗ್ರಾಮ ಪಂಚಾಯಿತಿ, ಹರಿಹರ ತಾಲ್ಲೂಕು – ಕಡರನಾಯಕನಹಳ್ಳಿ ಗ್ರಾಮ ಪಂಚಾಯಿತಿ, ಹೊನ್ನಾಳಿ ತಾಲ್ಲೂಕು – ತಿಮ್ಲಾಪುರ ಗ್ರಾಮ ಪಂಚಾಯಿತಿ, ಜಗಳೂರು ತಾಲ್ಲೂಕು – ತೋರಣಗಟ್ಟೆ ಗ್ರಾಮ ಪಂಚಾಯಿತಿ, ನ್ಯಾಮತಿ ತಾಲ್ಲೂಕು – ಕುಂಕುವಾ ಗ್ರಾಮ ಪಂಚಾಯಿತಿಯಲ್ಲಿ ನಡೆಯಲಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಲಿತರ ಸಾಗುವಳಿ ಭೂಮಿಯ ಅತಿಕ್ರಮಣ; ಅಂದನೂರಿನಲ್ಲಿ ದಲಿತ ಶೋಷಣೆಯ ಮತ್ತೊಂದು ಮಗ್ಗುಲು

ರಕ್ತದ ಒತ್ತಡ, ರಕ್ತದಲ್ಲಿನ ಸಕ್ಕರೆ, ಕ್ಷಯರೋಗ, ಪರೀಕ್ಷೆ, ಕುಷ್ಟರೋಗ ಪರೀಕ್ಷೆ, ಜ್ವರದ ಪ್ರಕರಣಗಳಲ್ಲಿ ರಕ್ತದ ಮಾದರಿ ಸಂಗ್ರಹ ಹಾಗೂ ಅಗತ್ಯವಿದ್ದರೆ ಇತರೆ ತಪಾಸಣೆಗಳನ್ನೂ ನಡೆಸಲಾಗುತ್ತದೆ. ಈ ಶಿಬಿರಗಳ ಮೂಲಕ ನರೇಗಾ ಕಾರ್ಮಿಕರ ಆರೋಗ್ಯದ ಮೇಲಿನ ಕಾಳಜಿಯನ್ನು ಬಲಪಡಿಸುವ ಜೊತೆಗೆ, ಸಮಯೋಚಿತ ವೈದ್ಯಕೀಯ ನೆರವು ಮತ್ತು ಅರಿವು ಮೂಡಿಸುವ ಉದ್ದೇಶ ಹೊಂದಲಾಗಿದೆ ಎಂದು ತಿಳಿಸಲಾಗಿದೆ.‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...