ದಾವಣಗೆರೆ | ಆಸ್ಪತ್ರೆಗಳಲ್ಲಿ ಉಚಿತ ಔಷಧ ನೀಡಿ; ಡ್ರಗ್ ಆಕ್ಷನ್ ಫೋರಮ್ ನೆರಳು ಬೀಡಿ ಕಾರ್ಮಿಕರ ಸಂಘ ಆಗ್ರಹ

Date:

ರಾಜ್ಯದ ಎಲ್ಲಾ ಸರ್ಕಾರಿ ಆರೋಗ್ಯ ಸಂಸ್ಥೆ, ಆಸ್ಪತ್ರೆಗಳಲ್ಲಿ ಎಲ್ಲರಿಗೂ ಉಚಿತವಾಗಿ, ನಿರಂತರವಾಗಿ ಗುಣಮಟ್ಟದ ಔಷಧ ದೊರೆಯುವಂತೆ ಖಾತ್ರಿಪಡಿಸುವ ಜೊತೆಗೆ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮವನ್ನು ಸ್ವಾಯತ್ತತೆ ಮತ್ತು ಜವಾಬ್ದಾರಿಯಿಂದ ಕಾರ್ಯನಿರ್ವಹಿಸುವಂತೆ ಸುಧಾರಣೆ ಮಾಡಲು ಕ್ರಮಕೈಗೊಳ್ಳಲು ಡ್ರಗ್ ಆಕ್ಷನ್ ಫೋರಮ್ – ಕರ್ನಾಟಕ ಹಾಗೂ ನೆರಳು ಬೀಡಿ ಕಾರ್ಮಿಕರ ಯೂನಿಯನ್ ದಾವಣಗೆರೆ ಜಂಟಿಯಾಗಿ ಆಗ್ರಹಿಸಿವೆ.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಡ್ರಗ್ ಆಕ್ಷನ್ ಫೋರಮ್ – ಕರ್ನಾಟಕ ಸಂಘಟನೆಯ ಅಧ್ಯಕ್ಷ ಡಾ.ಗೋಪಾಲ ದಾಬಡೆ, “ಕರ್ನಾಟಕ ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ನಿಯಮಿತವನ್ನು ಬಲ ಪಡಿಸಲು, ರಾಜ್ಯದ ಎಲ್ಲಾ ಸರ್ಕಾರಿ ಸೌಲಭ್ಯಗಳಲ್ಲಿ ಗುಣಮಟ್ಟದ ಔಷಧಿಗಳ ನಿರಂತರ ಪೂರೈಕೆಯನ್ನು ಖಾತರಿಪಡಿಸುವತ್ತ ಗಮನ ಹರಿಸಬೇಕಾಗಿದೆ. ಸರ್ಕಾರಿ ಆಸ್ಪತ್ರೆಗಳಿಗೆ ಬಂದ ಯಾವುದೇ ರೋಗಿಯು ಖಾಸಗಿ ಫಾರ್ಮಸಿಗಳಿಂದ ಅಥವಾ ಜನ ಔಷಧಿ ಕೇಂದ್ರಗಳ ಅಂಗಡಿಯಿಂದ ಔಷಧಿಗಳನ್ನು ಖರೀದಿಸುವಂತಾಗಬಾರದು” ಎಂದು ಒತ್ತಾಯಿಸಿದರು.

“ಕರ್ನಾಟಕದಲ್ಲಿ ಸರಕಾರಿ ಆಸ್ಪತ್ರೆಗಳ ಹೊರಗಡೆ 1400 ಜನೌಷಧಿ ಕೇಂದ್ರಗಳು ಕೆಲಸ ಮಾಡುತ್ತಿದ್ದು ಅವಶ್ಯಕತೆ ಇರುವವರಿಗೆ ಅಗ್ಗದ ಜನರಿಕ್ ಔಷಧಗಳು ಜನರ ಕೈಗೆಟಕುವ ದರದಲ್ಲಿ ಲಭ್ಯವಿದ್ದೇ ಇದೆ. ಇದಲ್ಲದೇ ರೋಗಿಗಳಿಗೆ ನೀಡುವ ಎಲ್ಲಾ ಔಷಧಿಗಳ ಗುಣ ಪರೀಕ್ಷೆಗಳಾಗುವಂತೆ ಮಾಡಿ. ಇಲ್ಲವಾದರೆ ಕಳಪೆ ಗುಣಮಟ್ಟದ ಔಷದಿಗಳಿಂದ ಅಕ್ಟೋಬರ್ 2024 ರಲ್ಲಿ ಬಳ್ಳಾರಿಯಲ್ಲಿ ಮತ್ತು ಇತರೆ ಜಿಲ್ಲಾ ಆಸ್ಪತ್ರೆಗಳಲ್ಲಿ ಸಂಭವಿಸಿದ ತಾಯಂದಿರ ಸಾವುಗಳನ್ನು ಇನ್ನಾದರೂ ತಡೆಯಲು ಸಾಧ್ಯ” ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸರಕಾರಿ ಆಸ್ಪತ್ರೆಯ ಆವರಣದಲ್ಲಿ ಜನ ಔಷಧಿ ಕೇಂದ್ರಗಳನ್ನು ತೆಗೆದು ಹಾಕುವುದು ಸರಕಾರದ ಒಂದು ದ್ವಂದ್ವ ನೀತಿಯನ್ನು ಸರಿಪಡಿಸುತ್ತದೆ.ಸಾರ್ವಜನಿಕ ಆಸ್ಪತ್ರೆಗಳ ಆವರಣದಲ್ಲಿ ಔಷಧಿಗಳು ಉಚಿತವಾಗಿರಬೇಕು. ಅದೇ ಅವರಣದಲ್ಲಿ ಸರಕಾರದಿಂದಲೇ ಅವುಗಳ ಮಾರಾಟ ಒಂದು ದ್ವಂದ್ವ ನೀತಿಯಾಗುತ್ತದೆ. ಸರಕಾರದ ಈಗಿನ ಆದೇಶವು ಈ ದ್ವಂದ್ವ ನೀತಿಗೆ ತೆರೆ ಎಳೆಯುತ್ತದೆ. ಈಗ ಸರ್ಕಾರವು ತಾನೇ ಸ್ಥಾಪಿಸಿರುವ ಕೆಎಸ್ಎಂಎಸ್ಸಿಎಲ್ ಉಚಿತ ಔಷಧಗಳನ್ನು ಅಲ್ಲಿ ಬರುವ ರೋಗಿಗಳಿಗೆ ಪೂರ್ಣ ಪ್ರಮಾಣದಲ್ಲಿ ಸಿಗುವಂತೆ ಮಾಡಬೇಕು” ಎಂದು ಆಗ್ರಹಿಸಿದರು.

“2023 ಆಗಸ್ಟ್ ತಿಂಗಳಲ್ಲಿ ಕರ್ನಾಟಕದ ಆರೋಗ್ಯ ಸಚಿವರೊಂದಿಗೆ ಡಿಎಎಫ್-ಕೆ, ಎಸ್ಎಸ್ಕೆ-ಕೆ ಸದಸ್ಯರ ಜೊತೆ ಆದ ಸಭೆಯ ಪ್ರಮುಖ ಚರ್ಚೆ ವಿಷಯ ಇದೇ ಆಗಿತ್ತು. ಆ ನಂತರ 2025ರ ಫೆಬ್ರುವರಿಯಲ್ಲಿ ಡಿಎಎಫ್-ಕೆ, ಎಸ್ಎಸ್ಕೆ-ಕೆ ಸದಸ್ಯರುಗಳ ಸಮೇತ ಹಲವಾರು ಸಂಘಟನೆಗಳು ಉಚಿತ ಮತ್ತು ಗುಣಮಟ್ಟದ ಔಷಧಿಗಳನ್ನು ಎಲ್ಲಾ ಸರ್ಕಾರಿ ಆಸ್ಪತ್ರೆಗೆ ಒದಗಿಸಬೇಕು ಎಂದು ಒತ್ತಾಯಿಸಿ ಆರೋಗ್ಯ ಹಕ್ಕು ಜಾಥಾ’ವನ್ನು 15 ಜಿಲ್ಲೆಗಳಲ್ಲಿ ನಡೆಸಿದ್ದವು” ಎಂದು ಮಾಹಿತಿ ನೀಡಿದರು.

“ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ನಿಯಮಿತದ ಗುಣಮಟ್ಟವು ತಮಿಳುನಾಡು ವೈದ್ಯಕೀಯ ಸೇವೆಗಳ ನಿಗಮದಂತೆ ಆಗಬೇಕು. ಉತ್ತಮ ವ್ಯವಸ್ಥೆಗಳೊಂದಿಗೆ, ಕೆಎಸ್ಎಂಎಸ್ಸಿಎಲ್ ಏಕಕಾಲದಲ್ಲಿ ಹೆಚ್ಚು ಔಷಧಿಗಳನ್ನು ಖರೀದಿಸಿ ರೋಗಿಗಳಿಗೆ ವಿತರಿಸಬೇಕು. ಆಗ ಜನೌಷಧಿ ಕೇಂದ್ರಗಳ ಮೇಲೆ ಅವಲಂಬನೆಯನ್ನು ಕಡಿಮೆಯಾಗುತ್ತದೆ. ಜೊತೆಗೆ ಇದು ಔಟ್ ಆಫ್ ಪಾಕೇಟ್ ವೆಚ್ಚಗಳನ್ನು ಕಡಿಮೆ ಮಾಡುತ್ತದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಬಾಲ್ಯ ವಿವಾಹಕ್ಕೆ ಯತ್ನ ಮದುವೆ ಬೇಡವೆಂದು ಅಂಗಲಾಚಿದ ಬಾಲಕಿಯ ರಕ್ಷಣೆ; ಐವರ ಮೇಲೆ ದೂರು ದಾಖಲು

ಸುದ್ದಿಗೋಷ್ಟಿಯಲ್ಲಿ ನೆರಳು ಬೀಡಿ ಕಾರ್ಮಿಕರ ಯೂನಿಯನ್ ಅಧ್ಯಕ್ಷೆ ಜಬೀನಾ ಖಾನಂ, ಪ್ರಧಾನ ಕಾರ್ಯದರ್ಶಿ ಎಂ.ಕರಿಬಸಪ್ಪ, ಶೀರಿನ್ ಬಾನು, ನೂರ್ ಫಾತೀಮಾ, ಹಸೀನಾ, ಶಾಹಿನಾ, ನಾಯಿರಾ, ಫಜ್ಲುನ್ ಬೀ, ರೇಷ್ಮಾಬಾನು ಇತರರು ಹಾಜರಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ...

ದಾವಣಗೆರೆ | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಮರ್ಥ್ ಶಾಮನೂರು: ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್...

ದಾವಣಗೆರೆ | ದಕ್ಷಿಣ ಕ್ಷೇತ್ರ ಉಪಚುನಾವಣೆ; ಎಸ್ ಟಿ ಮೋರ್ಚಾದ ಶ್ರೀನಿವಾಸ್ ಗೆ ಒಲಿದ ಬಿಜೆಪಿ ಟಿಕೆಟ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮ...

ದಾವಣಗೆರೆ | ಒಳಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯಕ್ಕೆ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಹೋರಾಟ

ಸರ್ವೋಚ್ಛ ನ್ಯಾಯಾಲಯದ ಸಂವಿಧಾನಿಕ ಪೀಠವು ಒಳ ಮೀಸಲಾತಿ ವರ್ಗೀಕರಣ ಹಾಗೂ ಜಾರಿಯ...