ದಾವಣಗೆರೆ | ಸರ್ಕಾರಿ ಗೋಮಾಳ, ಕೆರೆ ಒತ್ತುವರಿ;ಸಾವಿರಾರು ಅಡಿಕೆ ಮರಗಳ ತೆರವು.

Date:

ಕಬ್ಬೂರು ಗ್ರಾಮಸ್ಥರ ಹಲವು ತಿಂಗಳುಗಳ ಹೋರಾಟದ ಫಲವಾಗಿ ಒತ್ತುವರಿಯಾಗಿದ್ದ ಸರ್ಕಾರಿ ಗೋಮಾಳ ಜಮೀನು ಮತ್ತು ಕೆರೆಯನ್ನು ತೆರವುಗೊಳಿಸುವ ಕಾರ್ಯಕ್ಕೆ ಬುಧವಾರ ಚಾಲನೆ ನೀಡಲಾಗಿದೆ. ಭೂಮಾಪಕರು ಅಳತೆ ಮಾಡಿ ಒತ್ತುವರಿ ಮಾಡಿದ್ದ ಜಾಗದಲ್ಲಿ ಬೆಳೆದಿದ್ದ ಫಲಕ್ಕೆ ಬಂದ ಅಡಿಕೆ ಮರಗಳನ್ನು ತೆರವುಗೊಳಿಸಿದ್ದು ದಾವಣಗೆರೆ ತಾಲೂಕಿನ ಕಬ್ಬೂರು ಗ್ರಾಮದಲ್ಲಿ ಕಾರ್ಯಾಚರಣೆ ನೆಡೆದಿದೆ.

‘ಸರ್ಕಾರಿ ಗೋಮಾಳ ಜಮೀನು ಮತ್ತು ಕೆರೆಯನ್ನು ಒತ್ತುವರಿ ಮಾಡಲಾಗಿದೆ’ ಎಂದು ಆರೋಪಿಸಿ ತಾಲೂಕಿನ ಕಬ್ಬೂರು ಗ್ರಾಮಸ್ಥರು ಹಲವು ಬಾರಿ ದಾವಣಗೆರೆ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದರು.

1001713377

ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಬುಧವಾರ ಉಪವಿಭಾಗಾಧಿಕಾರಿ ಸಂತೋಷ್ ಪಾಟೀಲ್, ತಹಸೀಲ್ದಾರ್ ಡಾ.ಅಶ್ವತ್ಥ್, ಭೂ ದಾಖಲೆಗಳ ಉಪನಿರ್ದೇಶಕಿ ಕಸ್ತೂರಿ ಅವರ ಸಮ್ಮುಖದಲ್ಲಿ ಭೂಮಾಪಕರು ಮತ್ತು ಪರ್ಯಾವೇಕ್ಷಕರು ಅಳತೆ ಕಾರ್ಯ ಕೈಗೊಂಡರು. ಈ ಸಂದರ್ಭದಲ್ಲಿ ಒತ್ತುವರಿಯಾದ ಎರಡ್ಮೂರು ಎಕರೆ ಜಾಗದಲ್ಲಿ ಬೆಳೆದಿದ್ದ ಫಲಕ್ಕೆ ಬಂದಿದ್ದ ಸಾವಿರಾರು ಅಡಿಕೆ ಮರಗಳನ್ನು ಜೆಸಿಬಿ ಯಂತ್ರಗಳ ಮೂಲಕ ತೆರವುಗೊಳಿಸಲಾಯಿತು. ಗೋಮಾಳ ಜಮೀನು ಮತ್ತು ಕೆರೆಯ ನಾಲ್ಕು ಭಾಗಗಳಲ್ಲಿ ಒತ್ತುವರಿಯಾಗಿದ್ದು, ಈಗ ಒಂದು ಭಾಗದಲ್ಲಿ ಮಾತ್ರ ಅಳತೆ ಮಾಡಿ ಒತ್ತುವರಿಯಾದ ಜಾಗವನ್ನು ತೆರವುಗೊಳಿಸುತ್ತಿದ್ದಾರೆ. ಅಳತೆ ಕಾರ್ಯಾಚರಣೆ ಮುಂದುವರಿದಿದೆ. ಸಂಪೂರ್ಣ ಅಳತೆ ಮಾಡಿದ ಮೇಲೆ ವಸ್ತುನಿಷ್ಠವಾಗಿ ಹದ್ದುಬಸ್ತ್ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಸ್ವರೂಪದ ಹೋರಾಟ ನಡೆಸಲಾಗುವುದು ಎಂದು ಗ್ರಾಮಸ್ಥರು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001713337
ಒತ್ತುವರಿ ಕಾರ್ಯಾಚರಣೆ ವೇಳೆ ಕಬ್ಬೂರು ಗ್ರಾಮಸ್ಥರು

ಈ ಸಂದರ್ಭದಲ್ಲಿ ಮಾತನಾಡಿದ ದಸಂಸ ಜಿಲ್ಲಾಧ್ಯಕ್ಷ ಮಂಜುನಾಥ್ ಕುಂದುವಾಡ, “ಗ್ರಾಮದಲ್ಲಿ ಸರ್ಕಾರಿ ಗೋಮಾಳ ಜಮೀನು ಮತ್ತು ಕೆರೆಯ ಜಾಗ ಒತ್ತುವರಿಯಾಗಿದ್ದು, ತೆರವುಗೊಳಿಸಿ ಹದ್ದುಬಸ್ತು ಮಾಡುವಂತೆ ಇಡೀ ಗ್ರಾಮಸ್ಥರೇ ಹೋರಾಟ ಮಾಡುತ್ತಿದ್ದಾರೆ. ಆದರೆ ಅಧಿಕಾರಿಗಳು ಒಂದು ಪ್ರಭಾವಿ ಕುಟುಂಬದ ಪ್ರಭಾವಕ್ಕೊಳಗಾಗಿ ಗ್ರಾಮಸ್ಥರ ವಿರುದ್ಧವೇ ದಬ್ಬಾಳಿಕೆ ಮಾಡುತ್ತಿದ್ದಾರೆೆ” ಎಂದು ಆರೋಪಿಸಿದರು.

1001713401
ಜಿಲ್ಲಾಧಿಕಾರಿಗಳ ಕಛೇರಿ ಮುಂದಿನ ಹೋರಾಟ

“ಹೋರಾಟದ ಪ್ರತಿಫಲವಾಗಿ ಇಂದು ಆರಂಭಿಕ ಯಶಸ್ಸು ಸಿಕ್ಕಿದೆ. ಅಳತೆ ಕಾರ್ಯ ಸಂಪೂರ್ಣಗೊಳಿಸಿದ ಮೇಲೆ ಸರ್ಕಾರಿ ಗೋಮಾಳ ಜಾಗದ ಮೂಲ ವಿಸ್ತೀರ್ಣ ಮತ್ತು ಕೆರೆಯ ಮೂಲ ವಿಸ್ತೀರ್ಣದಲ್ಲಿ ಸ್ವಲ್ಪ ವ್ಯತ್ಯಾಸ ಕಂಡು ಬಂದರೆ ಮುಂದಿನ ದಿನಗಳಲ್ಲಿ ಉಗ್ರ ಸ್ವರೂಪದ ಪ್ರತಿಭಟನೆ ನಡೆಸುತ್ತೇವೆ” ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಕೆಲಸದ ವೇಳೆ ನರೇಗಾ ಕಾರ್ಮಿಕ ಸಾವು, ದಿನ ಕಳೆದರೂ ಗಮನಹರಿಸದ ಅಧಿಕಾರಿಗಳು.

ಅಳತೆ ಕಾರ್ಯಾಚರಣೆಯಲ್ಲಿ ಭೂಮಾಪಕರಾದ ಪ್ರಸನ್ನಕುಮಾರ್, ಕೃಪಾಕರ್ ಗೌರವಿ, ಕೃಷ್ಣಮೂರ್ತಿ, ಬಿ.ಎಲ್.ಮಂಜುನಾಥ್, ಪಿ.ಎಸ್.ಹನುಮಂತಪ್ಪ, ರಂಜನ್, ಪರ್ಯಾವೇಕ್ಷಕ ಕೆ.ಎಚ್.ರಂಗನಾಥ್ ಭಾಗವಹಿಸಿದ್ದರು. ಈ ವೇಳೆ ಗ್ರಾಮ ಪಂಚಾಯಿತಿ ಸದಸ್ಯರಾದ ಮಂಜುನಾಥ್, ಕೋಟೆಪ್ಪ, ಗ್ರಾಮಸ್ಥರಾದ ಗಂಗಾಧರಣ್ಣ, ಕುಮಾರಣ್ಣ, ಚಂದ್ರಶೇಖರ್, ದೇವೇಂದ್ರಣ್ಣ, ಮಂಜುನಾಥ್ ವೈ.ಕಬ್ಬೂರು, ರಾಜಣ್ಣ, ಪ್ರಸನ್ನ, ಚಂದ್ರಪ್ಪ, ವಿರೂಪಾಕ್ಷಪ್ಪ, ಗುರುಮೂರ್ತಿ, ರಾಮಸ್ವಾಮಿ, ಧರ್ಮಣ್ಣ, ಕೆ.ಪಿ.ರಾಮಸ್ವಾಮಿ ಸೇರಿದಂತೆ ಸ್ಥಳದಲ್ಲಿ ನೂರಾರು ಗ್ರಾಮಸ್ಥರು ಭಾಗವಹಿಸಿದ್ದರು

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ...

ದಾವಣಗೆರೆ | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಮರ್ಥ್ ಶಾಮನೂರು: ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್...

ದಾವಣಗೆರೆ | ದಕ್ಷಿಣ ಕ್ಷೇತ್ರ ಉಪಚುನಾವಣೆ; ಎಸ್ ಟಿ ಮೋರ್ಚಾದ ಶ್ರೀನಿವಾಸ್ ಗೆ ಒಲಿದ ಬಿಜೆಪಿ ಟಿಕೆಟ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮ...

ದಾವಣಗೆರೆ | ಒಳಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯಕ್ಕೆ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಹೋರಾಟ

ಸರ್ವೋಚ್ಛ ನ್ಯಾಯಾಲಯದ ಸಂವಿಧಾನಿಕ ಪೀಠವು ಒಳ ಮೀಸಲಾತಿ ವರ್ಗೀಕರಣ ಹಾಗೂ ಜಾರಿಯ...