ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

Date:

“ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ ಇಲ್ಲ. ಆದ್ರೆ ಸರ್ಕಾರಿ ಶಾಲೆಗಳ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆಗಳು ಸಿಗುವುದು ಕಡಿಮೆ. ಉತ್ತಮ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ ಮಾಡಲು, ಸಾಮರ್ಥ್ಯ ತೋರಿಸಲು ಕಷ್ಟವಾಗದು” ಎಂದು ಜವಾಹರ್ ಬಾಲ್ ಮಂಚ್ ದಾವಣಗೆರೆ ಜಿಲ್ಲಾ ಘಟಕದ ಅಧ್ಯಕ್ಷ ಮೊಹಮ್ಮದ್ ಜಿಕ್ರಿಯಾ ಅಭಿಪ್ರಾಯಪಟ್ಟರು.

ಜವಾಹರ್ ಬಾಲ್ ಮಂಚ್ ವತಿಯಿಂದ ದಾವಣಗೆರೆ ನಗರದ ನಿಟುವಳ್ಳಿಯ ಇಎಸ್ಐ ಆಸ್ಪತ್ರೆ ಎದುರುಗಡೆ ಇರುವ ಸರ್ಕಾರಿ ಶಾಲೆಗೆ ಕ್ರೀಡಾ ಸಾಮಗ್ರಿ ಹಾಗೂ ವಿದ್ಯಾರ್ಥಿಗಳಿಗೆ ಟೀ ಶರ್ಟ್ ವಿತರಿಸಿದ ಬಳಿಕ ನಡೆದ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು,  “ಇಂದು ಸರ್ಕಾರಿ ಶಾಲೆಗಳು ಮುಚ್ಚುವ ಸ್ಥಿತಿ ತಲುಪಿವೆ. ಆದರೆ, ನಿಟುವಳ್ಳಿಯ ಸರ್ಕಾರಿ ಶಾಲೆ ಇದಕ್ಕೆ ತದ್ವಿರುದ್ಧವಾಗಿ ಉತ್ತಮವಾಗಿ ನಡೆಯುತ್ತಿದೆ. ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸಬೇಕಿದೆ. ಮೂಲಭೂತ ಸೌಲಭ್ಯ ಇನ್ನೂ ಹೆಚ್ಚಿನ ರೀತಿಯಲ್ಲಿ ಸಿಗುವಂತಾಗಬೇಕು” ಎಂದು ಹೇಳಿದರು.

“ಪಠ್ಯ ಮಾತ್ರವಲ್ಲ, ಪಠ್ಯೇತರ ಚಟುವಟಿಕೆಗಳಿಗೂ ಸೂಕ್ತ ಸೌಲಭ್ಯಗಳು ಸಿಗಬೇಕಿದೆ. ಖಾಸಗಿ ಶಾಲೆಗಳಲ್ಲಿರುವ ವಿದ್ಯಾರ್ಥಿಗಳಿಗಿಂತ ಕ್ರೀಡಾ ಚಟುವಟಿಕೆಗಳಲ್ಲಿ ಯಾವಾಗಲೂ ಸರ್ಕಾರಿ ಶಾಲೆಗಳ ಮಕ್ಕಳೇ ಮುಂದಿರುತ್ತಾರೆ. ಹಾಗಾಗಿ, ಶಾಲೆಗೆ ಕ್ರೀಡಾ ಸಾಮಗ್ರಿ ಮತ್ತು ವಿದ್ಯಾರ್ಥಿಗಳಿಗೆ ಟೀ ಶರ್ಟ್ ವಿತರಿಸಲಾಗುತ್ತಿದೆ. ಈ ಶಾಲೆಯಲ್ಲಿ ಬಡವರು, ಮಧ್ಯಮ ವರ್ಗದವರೇ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಇಲ್ಲಿ ಓದಿದವರು ಹೆಚ್ಚಿನ ಸಾಧನೆ ಮಾಡಿದ್ದಾರೆ. ಕ್ರೀಡಾ ಕ್ಷೇತ್ರದಲ್ಲಿ ಮಿನುಗುವ ನಕ್ಷತ್ರಗಳಾಗಲಿ ಎಂಬ ಆಶಯದಿಂದ ನಾವು ಟೀ ಶರ್ಟ್ ಮತ್ತು ಕ್ರೀಡಾ ಸಾಮಗ್ರಿಗಳನ್ನು ವಿತರಿಸಿದ್ದೇವೆ. ಶಾಲೆಗೆ ಕ್ರೀಡಾ ಸಾಮಗ್ರಿ ಮತ್ತು ವಿದ್ಯಾರ್ಥಿಗಳಿಗೆ ಟೀ ಶರ್ಟ್ ನೀಡುವಂತೆ ದೈಹಿಕ ಶಿಕ್ಷಕರಾದ ದೇವರಾಜ್ ಅವರು ಮನವಿ ಮಾಡಿದ ಮೇರೆಗೆ ಕೈಯಲ್ಲಾದಷ್ಟು ಸಹಾಯ ಮಾಡಿದ್ದೇವೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1002496370

“ಸರ್ಕಾರಿ ಶಾಲೆಗಳು ಎಂದರೆ ಮೂಗು ಮುರಿಯುವ ಇಂದಿನ ದಿನಗಳಲ್ಲಿ ಈ ಶಾಲೆ ನೋಡಿದರೆ ಖುಷಿಯಾಗುತ್ತದೆ. ಇಷ್ಟೊಂದು ಸಂಖ್ಯೆಯಲ್ಲಿ ವಿದ್ಯಾರ್ಥಿ, ವಿದ್ಯಾರ್ಥಿನಿಯರಿದ್ದಾರೆ. ಇಲ್ಲಿ ಓದಿದವರು ಉನ್ನತ ಸ್ಥಾನಕ್ಕೆ ಹೋಗಿದ್ದಾರೆ. ಇಂಥ ಶಾಲೆಗಳು ಉಳಿಯುವಂತಾಗಬೇಕು. ಈ ಶಾಲೆಯಲ್ಲಿ ಓದಿದ ಹಳೆಯ ವಿದ್ಯಾರ್ಥಿಗಳು ತಮ್ಮ ಕೈಯಲ್ಲಾದಷ್ಟು ಸಹಾಯ ಮಾಡಿದರೆ ಶಾಲೆ ಮತ್ತಷ್ಟು ಉನ್ನತಿ ಹೊಂದುವುದರಲ್ಲಿ ಸಂಶಯವಿಲ್ಲ” ಎಂದು ಅಭಿಪ್ರಾಯಪಟ್ಟರು.

ಡಿಡಿಪಿಐ ಕೊಟ್ರೇಶ್ ಮಾತನಾಡಿ, “ಸರ್ಕಾರಿ ಶಾಲೆಯ ಮಕ್ಕಳಿಗೆ ಕ್ರೀಡಾ ಚಟುವಟಿಕೆಗಳ ಅನುಕೂಲಕ್ಕೆ ಸಹಾಯ ಮಾಡಿರುವುದು ತುಂಬಾ ಒಳ್ಳೆಯ ಕೆಲಸ. ಕ್ರೀಡಾ ಸಾಮಗ್ರಿಗಳು ಸಿಕ್ಕರೆ ಮಕ್ಕಳು ಉತ್ತಮ ರೀತಿಯಲ್ಲಿ ಅಭ್ಯಾಸ ಮಾಡಲು ಸಾಧ್ಯವಾಗುತ್ತದೆ. ಟೂರ್ನಿಮೆಂಟ್ ನಲ್ಲಿ ಉತ್ತಮ ಸಾಧನೆ ಮಾಡಲು ಸಹಕಾರಿಯಾಗುತ್ತದೆ. ಜವಾಹರ್ ಬಾಲ್ ಮಂಚ್ ನ ಜಿಲ್ಲಾ ಘಟಕದ ಅಧ್ಯಕ್ಷ ಮೊಹಮ್ಮದ್ ಜಿಕ್ರಿಯಾ ನೇತೃತ್ವದಲ್ಲಿ ನೀಡಿರುವುದು ಮತ್ತೊಬ್ಬರಿಗೆ ಸ್ಫೂರ್ತಿ ತರುವುದಾಗಿದೆ” ಎಂದು ಪ್ರಶಂಸಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಬಾಲಕಾರ್ಮಿಕ ಪದ್ಧತಿ, ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ ಕುರಿತು ಶಿಬಿರ

ದಾವಣಗೆರೆ ದಕ್ಷಿಣ ಬಿಇಒ ಪುಷ್ಪಲತಾ, ಜವಾಹರ್ ಬಾಲ್ ಮಂಚ್ ಪದಾಧಿಕಾರಿಗಳಾದ ಕೆ. ಹೆಚ್. ಪ್ರೇಮಾ, ನಾಗರಾಜ್, ಫಯಾಜ್ ಅಹ್ಮದ್, ಶಾಲೆಯ ಮುಖ್ಯೋಪಾಧ್ಯಾಯ ಸುರೇಶ್, ದೈಹಿಕ ಶಿಕ್ಷಕ ದೇವರಾಜ್, ಜಯಪ್ಪ, ಎಸ್ ಡಿ ಎಂ ಸಿ ಸದಸ್ಯರು, ಶಿಕ್ಷಕರು, ಬೋಧಕೇತರ ಸಿಬ್ಬಂದಿ ಸಮಾರಂಭದಲ್ಲಿ ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...