ಇತ್ತೀಚೆಗೆ ಕೇಂದ್ರ ಸರ್ಕಾರವು ಮನರೇಗಾ ಕಾಯ್ದೆಯ ಸ್ವರೂಪವನ್ನು ಬದಲಿಸಿ ವಿಬಿ-ಗ್ರಾಮ್-ಜಿ ಎಂಬ ಹೊಸ ಕಾಯ್ದೆಯನ್ನು ಜಾರಿಗೊಳಿಸಿದೆ. ಈ ಹೊಸ ಕಾಯ್ದೆಯಲ್ಲಿ ಕಾರ್ಮಿಕರ ಹಕ್ಕುಗಳನ್ನು ಕಡಿತಗೊಳಿಸಿದ್ದು, ಉದ್ಯೋಗ ಭದ್ರತೆ ಮತ್ತು ಸಾಮಾಜಿಕ ನ್ಯಾಯಕ್ಕೆ ಧಕ್ಕೆಯಾಗುತ್ತಿದೆ. ಅದ್ದರಿಂದ ಈ ಕಾರ್ಮಿಕ ವಿರೋಧಿ ಕಾಯ್ದೆಯನ್ನು ನಾವು ತೀವ್ರವಾಗಿ ವಿರೋಧಿಸುತ್ತೇವೆ. ಈ ಮುಂಚೆ ಜಾರಿಯಲ್ಲಿದ್ದ ಮಹಾತ್ಮಗಾಂಧಿ ನರೇಗಾ ಉದ್ಯೋಗ ಖಾತ್ರಿ ಯೋಜನೆಯನ್ನು ಮೂಲಸ್ವರೂಪದಂತೆ ಮರುಜಾರಿ ಮಾಡಬೇಕು ಎಂದು ಒತ್ತಾಯಿಸಿ ದಾವಣಗೆರೆ ಜಿಲ್ಲೆ ಜಗಳೂರು ಶಾಸಕ ದೇವೇಂದ್ರಪ್ಪ ಅವರಿಗೆ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆಯ ಕಾರ್ಯಕರ್ತರು ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಮುಖಂಡರು “ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ (MGNREGA) ಅಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಕೂಲಿ ಕಾರ್ಮಿಕರು ಇಷ್ಟು ವರ್ಷಗಳಿಂದ ಮನರೇಗಾ ಯೋಜನೆಯ ಅಡಿಯಲ್ಲಿ ಕೆಲಸ ಮಾಡಿಕೊಂಡು ವಲಸೆ ಹೋಗದೆ ನಮ್ಮದೇ ಗ್ರಾಮದಲ್ಲಿ ಉಳಿದು ಜೀವನೋಪಾಯವನ್ನು ಸಾಗಿಸುತ್ತಿದ್ದೇವೆ. ನಮ್ಮಂತಹ ಬಡ ಕೂಲಿ ಕಾರ್ಮಿಕರ ಕುಟುಂಬಗಳಿಗೆ ಮನರೇಗಾ ಯೋಜನೆ ಕೇವಲ ಉದ್ಯೋಗವಲ್ಲ, ಅದು ನಮ್ಮ ಹಕ್ಕು ಆಗಿದ್ದು, ಜೀವನಾಧಾರದ ಮೂಲ” ಎಂದು ತಿಳಿಸಿದರು.

“ಆದರೆ ಇತ್ತೀಚೆಗೆ ಕೇಂದ್ರ ಸರ್ಕಾರವು ಮನರೇಗಾ ಕಾಯ್ದೆಯ ಸ್ವರೂಪವನ್ನು ಬದಲಿಸಿ ವಿಬಿ-ಗ್ರಾಮ್-ಜಿ ಎಂಬ ಹೊಸ ಕಾಯ್ದೆಯನ್ನು ಜಾರಿಗೊಳಿಸಿದೆ. ಈ ಹೊಸ ಕಾಯ್ದೆಯಲ್ಲಿ ಕಾರ್ಮಿಕರ ಹಕ್ಕುಗಳನ್ನು ಸೀಮಿತಗೊಳಿಸಲಾಗಿದ್ದು, ಉದ್ಯೋಗ ಭದ್ರತೆ ಮತ್ತು ಸಾಮಾಜಿಕ ನ್ಯಾಯಕ್ಕೆ ಧಕ್ಕೆಯಾಗುತ್ತಿದೆ. ಅದ್ದರಿಂದ ಈ ಕಾರ್ಮಿಕ ವಿರೋಧಿ ಕಾಯ್ದೆಯನ್ನು ರದ್ದು ಮಾಡಿ, ನಾವು ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆಯನ್ನು ಮರುಸ್ಥಾಪಿಸುವಂತೆ ತಾವು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಒತ್ತಾಯಿಸುವಂತೆ ವಿನಂತಿಸುತ್ತೇವೆ. ತಾವುಗಳು ಗ್ರಾಮೀಣ ಕೂಲಿ ಕಾರ್ಮಿಕರ ಹಿತದೃಷ್ಟಿಯಿಂದ ಸೂಕ್ತ ನಿರ್ಧಾರ ಕೈಗೊಳ್ಳಬೇಕು” ಎಂದು ಮನವಿ ಸಲ್ಲಿಸಿದರು.
ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಉಪವಿಭಾಗಾಧಿಕಾರಿ ಸಂತೋಷ್ ಅತ್ಯುತ್ತಮ ಮತದಾರರ ನೊಂದಣಾಧಿಕಾರಿ
ಈ ವೇಳೆ ಗ್ರಾಕೂಸ್ ಸಂಘಟನೆಯ ತಾಲೂಕು ಸಂಚಾಲಕಿ ಸುಧಾ ಪಲ್ಲಾಗಟ್ಟೆ, ಭಾಗ್ಯಮ್ಮ, ರತ್ನಮ್ಮ, ಚೈತ್ರ, ಬಸಮ್ಮ, ಗೀತಮ್ಮ, ರಂಜಿತಾ, ಜಾನಕಮ್ಮ, ಹೊನ್ನೂರಮ್ಮ, ರಾಘವೇಂದ್ರ, ಮಾದೇವಮ್ಮ, ಸುಶೀಲಮ್ಮ, ರೇಣುಕಮ್ಮ, ಅಂಬಕ್ಕ, ಬಸಮ್ಮ ಹಾಗೂ ಇತರರು, ಕೂಲಿ ಕಾರ್ಮಿಕರು ಭಾಗವಹಿಸಿದ್ದರು.





