ದಾವಣಗೆರೆ | ರಸಮಂಜರಿ ಕಾರ್ಯಕ್ರಮವಾದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಜಿಲ್ಲಾ ಕಾರ್ಯಾಗಾರ

Date:

ದಾವಣಗೆರೆ ಗುಂಡಿ ಮಹದೇವಪ್ಪ ಭವನದಲ್ಲಿ ಗ್ಯಾರಂಟಿ ಯೋಜನೆಗಳ ಜಿಲ್ಲಾ ಕಾರ್ಯಗಾರವನ್ನು ಹಮ್ಮಿಕೊಂಡಿದ್ದು ಕಾರ್ಯಕ್ರಮವು ನಿಗದಿಯಂತೆ ಬೆಳಗ್ಗೆ 10.30 ಕ್ಕೆ ಪ್ರಾರಂಭವಾಗಬೇಕಿದ್ದು ಸಮಯ 12:30 ಆದರೂ ನಿಗದಿತ ಸಮಯಕ್ಕೆ ಪ್ರಾರಂಭವಾಗದೇ ಸಾವಿರಾರು ಜನ ಮಹಿಳೆಯರು ಸಾರ್ವಜನಿಕರು ಕಾದು ಕುಳಿತು ಇದರ ಮಧ್ಯೆ ಜನರನ್ನು ರಂಜಿಸಲು ಮತ್ತು ಸಮಾರಂಭದ ಪ್ರಾರಂಭದ ತನಕ ಕಾಯ್ದುಕೊಳ್ಳಲು ರಸಮಂಜರಿ ಕಾರ್ಯಕ್ರಮವಾಗಿ ಬದಲಾಗಿದೆ.

1003813270
ಮಹಿಳೆಯರು ಕಾರ್ಯಕ್ರಮ ಆರಂಭಕ್ಕೆ ಕಾಯುತ್ತಿರುವುದು.

ಗ್ಯಾರಂಟಿ ಯೋಜನೆಯ ಅನುಷ್ಠಾನಗಳ ಕಾರ್ಯಕ್ರಮ ಮತ್ತು ಜಿಲ್ಲಾಮಟ್ಟದ ಕಾರ್ಯಗಾರಗಳು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ನಡೆಯುತ್ತಿದ್ದು ಇದರ ಅಂಗವಾಗಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ನೇತೃತ್ವದಲ್ಲಿ ದಾವಣಗೆರೆಯಲ್ಲಿ ಕೂಡ ನಗರದ ಕೇಂದ್ರ ಭಾಗದ ಗುಂಡಿಮಹದೇವಪ್ಪ ಭವನದಲ್ಲಿ ಆಯೋಜಿಸಲಾಗಿತ್ತು ಕಾರ್ಯಕ್ರಮ 10:30 ಕ್ಕೆ ನಿಗದಿಯಾಗಿದ್ದರೂ ಸಾವಿರಾರು ಮಹಿಳೆಯರು ಆಗಮಿಸಿದ್ದರೂ ಗಣ್ಯರ ಆಗಮನದ ವಿಳಂಬದಿಂದಾಗಿ ಕಾರ್ಯಕ್ರಮ ಆರಂಭವಾಗಿಲ್ಲ ಸುಮಾರು ಎರಡು-ಮೂರು ಗಂಟೆಗಳ ಕಾಲದಿಂದಲೂ ಮಹಿಳೆಯರು, ಸಾರ್ವಜನಿಕರು ಸರ್ಕಾರಿ ಅಧಿಕಾರಿಗಳು ಕಾಯುತ್ತಿದ್ದರೂ ಕೆಲವು ಗಣ್ಯರು ಆಗಮಿಸಿಲ್ಲ ಎನ್ನುವುದು ಕಾರ್ಯಕ್ರಮ ವಿಳಂಬಕ್ಕೆ ಕಾರಣ.

1003813273

ಈ ಮಧ್ಯೆ ಜನರನ್ನು ಮಹಿಳೆಯರನ್ನು ಹಿಡಿದಿಡಲು ಕಾರ್ಯಕ್ರಮದಲ್ಲಿ ಕೆಲವರು ಹಾಡುಗಳನ್ನು ಹಾಡುವ ಮೂಲಕ ಜನರನ್ನು ರಂಜಿಸುವ ಹರಸಾಹಸ ಮಾಡಬೇಕಾಗಿ ಬಂದಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1003813310

ಈ ಮಧ್ಯೆ ಮೆರವಣಿಗೆ ಆಗಮಿಸದೇ ಕಾರ್ಯಕ್ರಮ ಸಮಯ ಮಧ್ಯಾಹ್ನ 12:40 ಆದರೂ ಆರಂಭವಾಗದ ಹಿನ್ನೆಲೆಯಲ್ಲಿ ಆಗಮಿಸಿದ ಮಹಿಳೆಯೊಬ್ಬರು “ನಾವು ಕೆಲಸ ಕಾರ್ಯಗಳನ್ನು ಬಿಟ್ಟು ಗ್ಯಾರಂಟಿ ಯೋಜನೆಗಳ ಮೇಲಿನ ಪ್ರೀತಿ, ವಿಶ್ವಾಸಕ್ಕೆ ಇಲ್ಲಿಗೆ ಆಗಮಿಸಿರುತ್ತೇವೆ. ಕಾರ್ಯಕ್ರಮ ಎರಡುವರೆ ಗಂಟೆ ತಡವಾದರೂ ಆರಂಭವಾಗಿಲ್ಲ ಮಹಿಳೆಯರ, ಸಾರ್ವಜನಿಕರ ಸಮಯಕ್ಕೆ ಬೆಲೆ ಇಲ್ಲವೇ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಭದ್ರಾಮೇಲ್ದಂಡೆ ಕಾಮಗಾರಿ ಅನುದಾನ ಬಿಡುಗಡೆಗೆ ಜಗಳೂರಿನಲ್ಲಿ ಸಂಘಟನೆಗಳ ಪ್ರತಿಭಟನೆ

ಸರ್ಕಾರಿ ಪ್ರಾಯೋಜಿತ ಕಾರ್ಯಕ್ರಮಗಳು ತಡವಾಗಿ ಆರಂಭವಾಗುವುದು ಸಾಮಾನ್ಯ. ಆದರೆ ಎರಡೂವರೆ ಗಂಟೆಗಳ ಕಾಲ ತಡವಾದರೂ ಆರಂಭವಾಗದೆ ಜನರನ್ನು ಕಾಯಿಸಿ, ಜನರ ಸಮಯವನ್ನು ಹಾಳು ಮಾಡುವುದು ಎಷ್ಟು ಸರಿ ಎನ್ನುವುದು ಹಲವರ ಪ್ರಶ್ನೆ ಆಗಿತ್ತು? ಇದರಿಂದಾಗಿ ಬೇಸತ್ತ ಕೆಲವು ಯುವ ನಿಧಿ, ಗೃಹ ಲಕ್ಷಿ ಫಲಾನುಭವಿಗಳು ವಾಪಾಸ್ ಹಿಂತಿರುಗಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...