ದಾವಣಗೆರೆ | ಹರಿಹರ ರಾಜಕಾಲುವೆ ನಿರ್ಮಾಣ ಕಾಮಗಾರಿ ಒತ್ತುವರೆಗೆ ಸಹಾಯ ಆರೋಪ

Date:

120 ಅಡಿ ಅಗಲ ಇರುವ ರಾಜಕಲುವೆಯಲ್ಲಿ ಕೇವಲ 18 ರಿಂದ 20 ಅಡಿ ಅಗಲಕ್ಕೆ ಚರಂಡಿಗಾಗಿ ತಡೆಗೋಡೆ ನಿರ್ಮಿಸುತ್ತಿದ್ದು, ಸಣ್ಣ ನೀರಾವರಿ ಇಲಾಖೆ ಕೈಗೊಂಡಿರುವ ಈ ಕಾಮಗಾರಿ ದಾವಣಗೆರೆ ಜಿಲ್ಲೆ ಹರಿಹರ ನಗರದ ಸಾರ್ವಜನಿಕರಲ್ಲಿ ಅನುಮಾನ ಹುಟ್ಟಿಸುತ್ತಿದ್ದು ಕಾಲೇಜು ಹಿಂಭಾಗದ ಎಸ್ ಜೆ ವಿ ಪಿ ಕಾಲೇಜು ಹಿಂಭಾಗದಿಂದ ಕಟ್ಟುತ್ತಿರುವ ಈ ರಾಜಕಾಲುವೆ ಒತ್ತುವರಿಯಾಗಲು ಅಧಿಕಾರಿಗಳೇ ಸಹಕರಿಸುತ್ತಿದ್ದಾರೆಯೇ ಎನ್ನುವ ಅನುಮಾನ ದಾವಣಗೆರೆ ಜಿಲ್ಲೆ ಹರಿಹರ ನಗರದ ಸಾರ್ವಜನಿಕರಿಂದ ಕೇಳಿ ಬಂದಿದೆ.

1003839248 1
ಪ್ರಸಿದ್ಧ ಹರಿಹರೇಶ್ವರ ದೇವಸ್ಥಾನ

ನಗರಸಭೆ ಮಾಜಿ ಸದಸ್ಯ ಎಂ.ಎಸ್. ಬಾಬುಲಾಲ್ ಮಾಧ್ಯಮಗಳಿಗೆ ಮಾತನಾಡಿ “ನಗರದ ಪೂರ್ವ ಭಾಗದಿಂದ ಬರುವ ಮಳೆ ನೀರು, ಬಸಿಯುವ ನೀರು ಹಾಗೂ ದೇವರಬೆಳಕೆರೆ ಕಾಲುವೆಯ ಹೆಚ್ಚುವರಿ ನೀರು ರಾಜಕಾಲುವೆಗೆ ಸೇರಿ ನಂತರ ತುಂಗಭದ್ರಾ ನದಿಗೆ ಹರಿಯುತ್ತದೆ. ಆದರೆ ಸಹಜವಾಗಿ ನೀರಿನ ಹರಿವು ಮಾರ್ಗಗಳಲ್ಲಿ ಒತ್ತುವರಿ ಆಗಿರುವುದರಿಂದ ಕಾಲುವೆಗೆ ಹರಿಯುವ ನೀರಿನ ಪ್ರಮಾಣ ಕಡಿಮೆಯಾಗಿದೆ. ಹಿಂದೆ ಮಳೆಗಾಲದಲ್ಲಿ ಈ ಹಳ್ಳದಲ್ಲಿ ಅಪಾರ ನೀರು ಹರಿದು ಜನರು ಸ್ನಾನ, ಈಜು ಹಾಗೂ ನಿತ್ಯ ಬಳಕೆಯ ಕೆಲಸಗಳನ್ನು ಮಾಡುತ್ತಿದ್ದರು. ಈಗಾಗಲೇ ಇಲ್ಲಿ ಭೂಮಿ ಒತ್ತುವರಿಯಾಗಿದೆ” ಎಂದು ಆರೋಪಿಸಿದ್ದಾರೆ.

ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲೂಕು ಸಂಚಾಲಕ ಪಿ.ಜೆ. ಮಹಾಂತೇಶ್ ಮಾತನಾಡಿ “₹4.82 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ಕಾಮಗಾರಿಯನ್ನು ಈ ಸ್ಥಳದ ಬದಲು ಜೆ.ಸಿ. ಬಡಾವಣೆಯ 1ನೇ ಮುಖ್ಯರಸ್ತೆಯ 4, 5, 6ನೇ ಕ್ರಾಸ್ ಬಳಿ ಕೈಗೊಂಡಿದ್ದರೆ ಜನರಿಗೆ ಹೆಚ್ಚು ಉಪಯೋಗವಾಗುತ್ತಿತ್ತು. ಜೆಸಿ ರಸ್ತೆಯ ಐದನೇ ಕ್ರಾಸ್ ನಲ್ಲಿರುವ ಸೇತುವೆಯನ್ನು ಎತ್ತರಿಸಬೇಕು. ಉತ್ತಮ ರಸ್ತೆ ನಿರ್ಮಿಸಬೇಕು ಇದರಿಂದ ಸಾವಿರಾರು ಜನರಿಗೆ ಅನುಕೂಲವಾಗುತ್ತದೆ ಎನ್ನುವ ಜನರ ಬೇಡಿಕೆಯನ್ನು ಬದಿಗೊತ್ತಿ ಈಗ ಕಾಮಗಾರಿ ನಡೆಸಲಾಗುತ್ತದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

e ಸುದ್ದಿ ಓದಿದ್ದೀರಾ? ದಾವಣಗೆರೆ | ಒಳಮೀಸಲಾತಿ ಅನ್ಯಾಯ ವಿರೋಧಿಸಿ ದಲಿತರ ಹೋರಾಟಕ್ಕೆ ಕಮ್ಯುನಿಸ್ಟ್ ಪಕ್ಷ ಬೆಂಬಲ

“ಪಿ.ಬಿ. ರಸ್ತೆ ಪಕ್ಕದಿಂದ ಹರಿಯುವ ಕಾಲುವೆಯನ್ನು ಮುಚ್ಚಿ ಈಗಾಗಲೇ ಹಲವು ಎಕರೆ ಜಮೀನು ಭೂಗಳ್ಳರ ಪಾಲಾಗಿದೆ; ಕಾಲುವೆ ಗಾತ್ರವನ್ನು ಕಿರಿದಾಗಿಸಿ ಇನ್ನಷ್ಟು ಸರ್ಕಾರಿ ಜಮೀನು ಒತ್ತುವರಿ ಮಾಡಲು ಈ ಕಾಮಗಾರಿ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...