ದಾವಣಗೆರೆ | ಬ್ಯಾಂಕಿಂಗ್ ವ್ಯವಸ್ಥೆ ಸುಧಾರಿಸಿ: ಯುಎಫ್‌ಬಿಯು-ಬ್ಯಾಂಕ್ ಕಾರ್ಮಿಕ ಸಂಘಟನೆಗಳ ಸಂಯುಕ್ತ ವೇದಿಕೆ ಆಗ್ರಹ.

Date:

ಐದು ದಿನಗಳ ಬ್ಯಾಂಕಿಂಗ್ ವ್ಯವಸ್ಥೆಗೆ ಒತ್ತಾಯಿಸಿ ದೇಶದಾದ್ಯಂತ ಪ್ರತಿಭಟನೆ ನಡೆಸಲು ಯುಎಫ್‌ಬಿಯು – ಬ್ಯಾಂಕ್ ಕಾರ್ಮಿಕ ಸಂಘಟನೆಗಳ ಸಂಯುಕ್ತ ವೇದಿಕೆಯು ಕರೆ ನೀಡಿರುವ ಹಿನ್ನಲೆಯಲ್ಲಿ ದಾವಣಗೆರೆಯ ಸಿದ್ದವೀರಪ್ಪ ಬಡಾವಣೆಯ ಕೆನರಾ ಬ್ಯಾಂಕಿನ ಪ್ರಾದೇಶಿಕ ಕಛೇರಿ ಹಾಗೂ ದಾವಣಗೆರೆ ಪಿ.ಬಿ.ರಸ್ತೆಯಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಪ್ರಾದೇಶಿಕ ಕಛೇರಿಯ ಮುಂಭಾಗ ದಾವಣಗೆರೆ ಜಿಲ್ಲಾ ಘಟಕದ ವತಿಯಿಂದ ಬ್ಯಾಂಕ್ ನೌಕರರು ಪ್ರತಿಭಟನೆ ನಡೆಸಿದರು.

ಕೆನರಾ ಬ್ಯಾಂಕ್ ಬಳಿ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಬ್ಯಾಂಕ್ ಕಾರ್ಮಿಕ ಸಂಘಟನೆಗಳ ಸಂಯುಕ್ತ ವೇದಿಕೆಯ ಜಿಲ್ಲಾ ಸಂಚಾಲಕ ಹಾಗೂ ಕೆನರಾ ಬ್ಯಾಂಕ್ ನೌಕರರ ಯೂನಿಯನ್‌ನ ರಾಷ್ಟ್ರೀಯ ಕಾರ್ಯದರ್ಶಿ ಕೆ.ರಾಘವೇಂದ್ರ ನಾಯರಿ,”ಬ್ಯಾಂಕುಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಶೀಘ್ರ ನೇಮಕಾತಿ ಮಾಡಬೇಕು, ಐದು ದಿನಗಳ ಬ್ಯಾಂಕಿಂಗ್ ವ್ಯವಸ್ಥೆ ಜಾರಿಗೆ ತರಬೇಕು, ತಾತ್ಕಾಲಿಕವಾಗಿ ಕೆಲಸ ಮಾಡುತ್ತಿರುವ ನೌಕರರನ್ನು ಖಾಯಂಗೊಳಿಸಬೇಕು” ಎಂದು ಸರ್ಕಾರವನ್ನು ಒತ್ತಾಯಿಸಿದರು.

1001670876
ದಾವಣಗೆರೆ ಪಿಬಿ ರಸ್ತೆಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೌಕರರ ಮುಷ್ಕರ

ಕೆನರಾ ಬ್ಯಾಂಕ್ ಅಧಿಕಾರಿಗಳ ಸಂಘಟನೆಯ ಪ್ರಾದೇಶಿಕ ಕಾರ್ಯದರ್ಶಿ ಪ್ರದೀಪ್ ಪಾಟೀಲ್ ಮಾತನಾಡಿ, “ಬ್ಯಾಂಕುಗಳಲ್ಲಿ ಅಗತ್ಯ ಪ್ರಮಾಣದ ನೌಕರರ ನೇಮಕಾತಿ ಮಾಡುವ ಮೂಲಕ ಗ್ರಾಹಕರಿಗೆ ಅತ್ಯುತ್ತಮ ಸೇವೆಯನ್ನು ಒದಗಿಸಬೇಕು ಹಾಗೂ ಐದು ದಿನಗಳ ಬ್ಯಾಂಕಿಂಗ್ ವ್ಯವಸ್ಥೆ ಜಾರಿಗೆ ಬರಬೇಕು ಎನ್ನುವುದು ನಮ್ಮ ಹಲವಾರು ವರ್ಷಗಳ ಬೇಡಿಕೆಯಾಗಿದೆ. ಈ ಬಗ್ಗೆ ಇಂಡಿಯನ್ ಬ್ಯಾಂಕ್ ಅಸೋಸಿಯೇಷನ್ ಹಾಗೂ ಕಾರ್ಮಿಕ ಸಂಘಟನೆಗಳ ನಡುವೆ ಈಗಾಗಲೇ ಒಪ್ಪಂದ ಆಗಿದ್ದರೂ ಸಹ ಕೇಂದ್ರ ಸರಕಾರ ಈ ಕುರಿತು ಮೌನ ತಾಳಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಾವಣಗೆರೆ ಜಿಲ್ಲಾ ಬ್ಯಾಂಕ್ ನೌಕರರ ಸಂಘದ ಕಾರ್ಯದರ್ಶಿ ಹೆಚ್.ಎಸ್.ತಿಪ್ಪೇಸ್ವಾಮಿ ಮಾತನಾಡಿ “ಸರಕಾರವು ಈ ಕೂಡಲೇ ಮಧ್ಯಪ್ರವೇಶಿಸಿ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲವಾದರೆ ಮಾರ್ಚ್ 24 ಮತ್ತು 25 ರಂದು ಅಖಿಲ ಭಾರತ ಬ್ಯಾಂಕ್ ಮುಷ್ಕರ ನಡೆಯಲಿದೆ” ಎಂದು ಎಚ್ಚರಿಸಿದರು.

ಪಿಬಿ ರಸ್ತೆಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮುಂಬಾಗ ನೆಡೆಸಿದ ಪ್ರತಿಭಟನೆಯಲ್ಲಿ ಬ್ಯಾಂಕ್ ಅಧಿಕಾರಿಗಳ ಸಂಘಟನೆಯ ಪ್ರಾದೇಶಿಕ ಕಾರ್ಯದರ್ಶಿ ಸುನಿಲ್ ಎಸ್ ಮ್ಯಾಗೇರಿ ಮಾತನಾಡಿ,”ಬ್ಯಾಂಕುಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡದಿರುವುದರಿಂದ ಒಂದೆಡೆ ಗ್ರಾಹಕರಿಗೆ ಸಮರ್ಪಕ ಸೇವೆ ನೀಡಲು ಸಾಧ್ಯವಾಗದೇ ಮತ್ತೊಂದೆಡೆ ಉದ್ಯೋಗಿಗಳು ತೀವ್ರ ಒತ್ತಡದಲ್ಲಿ ಕೆಲಸ ಮಾಡುವಂತಾಗಿದೆ. ಹಾಗಾಗಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸರಕಾರವು ಕೂಡಲೇ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಬೇಕು ಹಾಗೂ ಐದು ದಿನಗಳ ಬ್ಯಾಂಕಿಂಗ್ ವ್ಯವಸ್ಥೆ ಜಾರಿಗೆ ಬರಬೇಕು” ಎಂದು ಒತ್ತಾಯಿಸಿದರು.

1001670878
ಕೆನರಾ ಬ್ಯಾಂಕ್ ಮುಂಬಾಗ ಬ್ಯಾಂಕ್ ನೌಕರರ ಮುಷ್ಕರ

ಎನ್‌ಸಿಬಿಇ ಸಂಘಟನೆಯ ಮುಖಂಡ ಎಂ.ಸಿ.ವಾಗೀಶ್ ಮಾತನಾಡಿ, “ಬ್ಯಾಂಕಿಂಗ್ ಕಾಯಿದೆಗೆ ಸುಧಾರಣೆ ಹೆಸರಿನಲ್ಲಿ ತಿದ್ದುಪಡಿ ತರುವ ಮೂಲಕ ಬ್ಯಾಂಕ್ ಉದ್ಯೋಗಿಗಳ ಉದ್ಯೋಗ ಭದ್ರತೆಯ ಮೇಲೆ ದಾಳಿ ಮಾಡಲಾಗುತ್ತಿದೆ. ಇದು ನಿಲ್ಲಬೇಕು ಹಾಗೂ ಸರಕಾರವು ಬ್ಯಾಂಕ್ ಕಾರ್ಮಿಕ ವಿರೋಧಿ ನೀತಿಯನ್ನು ಕೈಬಿಡಬೇಕು” ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ನೌಕರರು ಮತ್ತು ಅಧಿಕಾರಿಗಳು ಮಾರ್ಚ್‌ 24 ಮತ್ತು 25 ರಂದು ನಡೆಯುವ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಬೆಂಬಲ ನೀಡಿ ಪ್ರತಿಭಟನೆ ನಡೆಸಲು ನಿರ್ಧರಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಪ್ರಾಮಾಣಿಕ ಅಧಿಕಾರಿಗಳಿಂದ ಡಿಜಿಟಲ್ ಅಳತೆ, ಸರ್ಕಾರಿ ಒತ್ತುವರಿ ತೆರವುಗೊಳಿಸಿ; ಕಬ್ಬೂರು ಗ್ರಾಮಸ್ಥರ ಆಗ್ರಹ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮುಂಬಾಗದ ಪ್ರತಿಭಟನೆಯಲ್ಲಿ ಎಂ.ಪಿ.ಕಿರಣ್‌ಕುಮಾರ್, ಸಿದ್ಧಾರ್ಥ್, ಎಂ.ಡಿ.ವಿದ್ಯಾಸಾಗರ್, ಎಸ್.ಪ್ರಶಾಂತ್, ಅಣ್ಣಪ್ಪ ನಂದಾ, ದುರ್ಗಪ್ಪ, ಶಶಿಧರ ಹೆಗಡೆ, ಮೋಹನ್ ಕುಮಾರ್ ದೊಡ್ಡಮನಿ, ಶ್ರೀನಿವಾಸ್, ಮಧುಸ್ವಿನಿ ದೇಸಾಯಿ, ದುಶ್ಯಂತ್‌ಕುಮಾರ್ ಆರ್ ಮತ್ತಿತರರು ಹಾಗೂ ಕೆನರಾ ಬ್ಯಾಂಕ್ ಮುಂಬಾಗ ನೆಡೆಸಿದ ಪ್ರತಿಭಟನೆಯಲ್ಲಿ ಹೆಚ್.ಸುಗುರಪ್ಪ, ಅನುರಾಧಾ ಸಂಪನ್ನ ಮುತಾಲಿಕ್, ಪರಶುರಾಮ, ಕೆ.ಗಂಗಾಧರ್, ವಿನೋದ್ ವರ್ಣೇಕರ್, ಸಿದ್ದಲಿಂಗೇಶ್ ಕೋರಿ, ಎಸ್.ಪ್ರಶಾಂತ್, ಡಿ.ಹರ್ಷದ್, ಎಲ್.ಗೋಪಾಲಕೃಷ್ಣ, ವಿ.ಆರ್.ಹರೀಶ್, ಅನಿಲ್ ಟಿ.ಎಸ್. ಗೋಪಾಲಕೃಷ್ಣ, ಬಿ.ಎ.ಸುರೇಶ್, ರಶ್ಮಿ ನಾಗರಾಜ್, ಕೆ.ಜಯಲಕ್ಷ್ಮಿ, ವಿಶ್ವಚೇತನ್, ಆಶಾ ವಿದ್ಯಾಸಾಗರ್, ಸುಷ್ಮ ಜೋಷಿ, ರೋಹಿಣಿ ಮಂಡ್ರೆ, ಎಲ್.ಲತಾ, ನಾಗರತ್ನಮ್ಮ, ರೇಣುಕಮ್ಮ ಮತ್ತಿತರರು ಪಾಲ್ಗೊಂಡಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರ ರಂಜಾನ್ ಆಚರಣೆ

ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ...

ದಾವಣಗೆರೆ | ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಮರ್ಥ್ ಶಾಮನೂರು: ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ದಿನದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್...

ದಾವಣಗೆರೆ | ದಕ್ಷಿಣ ಕ್ಷೇತ್ರ ಉಪಚುನಾವಣೆ; ಎಸ್ ಟಿ ಮೋರ್ಚಾದ ಶ್ರೀನಿವಾಸ್ ಗೆ ಒಲಿದ ಬಿಜೆಪಿ ಟಿಕೆಟ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮ...

ದಾವಣಗೆರೆ | ಒಳಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯಕ್ಕೆ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಹೋರಾಟ

ಸರ್ವೋಚ್ಛ ನ್ಯಾಯಾಲಯದ ಸಂವಿಧಾನಿಕ ಪೀಠವು ಒಳ ಮೀಸಲಾತಿ ವರ್ಗೀಕರಣ ಹಾಗೂ ಜಾರಿಯ...