ದಾವಣಗೆರೆ | ಕಾರ್ಗಿಲ್ ಕಂಪನಿ ಕಾರ್ಮಿಕರ ಅನಿರ್ದಿಷ್ಟ ಧರಣಿ; ವಿವಿಧ ಸಂಘಟನೆಗಳ ಮುಖಂಡರ ಬೆಂಬಲ

Date:

ಕಾರ್ಮಿಕರ, ಕೈಗಾರಿಕಾ ವಿವಾದಗಳು ಬಾಕಿ ಇರುವ ಸಂದರ್ಭದಲ್ಲೇ ಕಾರ್ಮಿಕರ ವಿರೋಧಿ ನೀತಿಗಳನ್ನು ಅನುಸರಿಸುತ್ತಿರುವ ಕಾರ್ಗಿಲ್ ಕಂಪನಿಯ ವಿರುದ್ಧ ಕಾರ್ಮಿಕರು ನಡೆಸುತ್ತಿರುವ ಅಹೋರಾತ್ರಿ ಅನಿರ್ದಿಷ್ಟ ಧರಣಿ ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಪ್ರತಿಭಟನಾ ಸ್ಥಳಕ್ಕೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ವಿವಿಧ ಸಂಘಟನೆಗಳ ಮುಖಂಡರು ಭೇಟಿ ನೀಡಿ ಕಾರ್ಮಿಕರಿಗೆ ತಮ್ಮ ಸಂಪೂರ್ಣ ಬೆಂಬಲವನ್ನು ಘೋಷಿಸಿದರು.

ಈ ವೇಳೆ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಗೌರವಾಧ್ಯಕ್ಷ ಕುರುವ ಗಣೇಶ್, “ಇತಿಹಾಸದಾದ್ಯಂತ ಮಾಲೀಕರು ಕಾರ್ಮಿಕರನ್ನು ಶೋಷಿಸುತ್ತಾ ಬಂದಿದ್ದಾರೆ. ಕಾರ್ಗಿಲ್ ಕಂಪನಿ ಕಾರ್ಮಿಕರ ಮೇಲೆ ನಡೆಸುತ್ತಿರುವ ಅನ್ಯಾಯ ಹಾಗೂ ದೌರ್ಜನ್ಯಗಳ ವಿರುದ್ಧ ಕಾರ್ಮಿಕರು ಕೈಗೊಂಡಿರುವ ಈ ಹೋರಾಟ ನ್ಯಾಯಸಮ್ಮತವಾಗಿದ್ದು, ಹೋರಾಟವೇ ಏಕೈಕ ಸರಿಯಾದ ದಾರಿ” ಎಂದು ಹೇಳಿದರು.

1003653377

ಪ್ರತಿಭಟನೆಯನ್ನು ಬೆಂಬಲಿಸಿ ಮಾತನಾಡಿದ ರಾಜ್ಯ ಉಪಾಧ್ಯಕ್ಷ ಹೊನ್ನೂರು ಮುನಿಯಪ್ಪ “ಕಾರ್ಮಿಕರು ತಮ್ಮ ನ್ಯಾಯಯುತ ಬೇಡಿಕೆಗಳಿಗಾಗಿ ಹಾಗೂ ಕೈಗಾರಿಕೆಯ ಉಳಿವಿಗಾಗಿ ಬೀದಿಗಿಳಿದು ಹೋರಾಟ ನಡೆಸುವಂತಹ ಪರಿಸ್ಥಿತಿ ನಿರ್ಮಾಣವಾಗಿರುವುದು ಅತ್ಯಂತ ಶೋಚನೀಯ” ಎಂದು ವಿಷಾದ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೂಡಲೇ ಕಂಪನಿಯ ಮಾಲೀಕರು ಧರಣಿ ಸ್ಥಳಕ್ಕೆ ಬಂದು ಕಾರ್ಮಿಕರ ಎಲ್ಲಾ ಸಮಸ್ಯೆಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಕಾರ್ಗಿಲ್ ಕಾರ್ಮಿಕರ ಹೋರಾಟವನ್ನು ಬೆಂಬಲಿಸಿ ಸುತ್ತಮುತ್ತಲಿನ ಸಾವಿರಾರು ರೈತರನ್ನು ಹೋರಾಟಕ್ಕೆ ಕರೆತರಬೇಕಾಗುತ್ತದೆ. ಮುಂದಾಗುವ ಎಲ್ಲಾ ಬೆಳವಣಿಗೆಗಳಿಗೆ ಆಡಳಿತ ಮಂಡಳಿಯೇ ನೇರ ಹೊಣೆ” ಎಂದು ಎಚ್ಚರಿಕೆ ನೀಡಿದರು.

ಧರಣಿ ಸ್ಥಳಕ್ಕೆ ಆಗಮಿಸಿದ ಪೀಪಲ್ಸ್ ಲಾಯರ್ಸ್ ಗಿಲ್ಡ್‌ನ ರಾಜ್ಯ ಸಂಚಾಲಕರಾದ ಅನೀಸ್ ಪಾಷಾ ಮಾತನಾಡಿ “ಕಾರ್ಮಿಕರ ಹೋರಾಟವನ್ನು ಬೆಂಬಲಿಸುತ್ತೇವೆ. ಪ್ರಸ್ತುತ ದಿನಗಳಲ್ಲಿ ನಮ್ಮನ್ನು ಆಳುತ್ತಿರುವ ಎಲ್ಲ ಸರ್ಕಾರಗಳು ಕಾರ್ಮಿಕ ವಿರೋಧಿ ಹಾಗೂ ರೈತ ವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿವೆ. ಇಂತಹ ನೀತಿಗಳನ್ನು ಸೋಲಿಸಲು ಒಗ್ಗಟ್ಟಿನ ಹೋರಾಟವೇ ಏಕೈಕ ಮಾರ್ಗ” ಎಂದು ಹೇಳಿದರು.

1003653376

“ದೆಹಲಿಯಲ್ಲಿ ಒಂದು ವರ್ಷಕ್ಕಿಂತ ಅಧಿಕ ಕಾಲ ನಡೆದ ರೈತ ಚಳುವಳಿ ನಮ್ಮ ದೇಶದಲ್ಲಿ ಇತಿಹಾಸ ನಿರ್ಮಿಸಿದಷ್ಟೇ ಅಲ್ಲ, ಇತರ ಹೋರಾಟಗಳಿಗೂ ಮಾದರಿಯಾಗಿದೆ. ಅದೇ ಸ್ಪೂರ್ತಿಯಿಂದ ಕಾರ್ಗಿಲ್ ಕಾರ್ಮಿಕರ ಹೋರಾಟ ಮುಂದುವರಿದಲ್ಲಿ ನ್ಯಾಯಕ್ಕೆ ಜಯ ಸಿಗಲಿದೆ” ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಸಮಾನತೆ ಸಾಧಿಸಲು ನಾನು ಮೀಸಲಾತಿ ಪರ ಇದ್ದೇನೆ: ವಾಲ್ಮೀಕಿ ಜಾತ್ರೆಯಲ್ಲಿ ಸಿಎಂ ಸಿದ್ದರಾಮಯ್ಯ

ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಅಧ್ಯಕ್ಷ ಬುಳ್ಳಾಪುರ ಹನುಮಂತಪ್ಪ, ಮರುಳಸಿದ್ದಯ್ಯ, ಸೇರಿದಂತೆ ಇತರ ರೈತ ಮುಖಂಡರು ಧರಣಿ ಸ್ಥಳಕ್ಕೆ ಆಗಮಿಸಿ ಕಾರ್ಮಿಕರ ಹೋರಾಟಕ್ಕೆ ನೈತಿಕ ಬೆಂಬಲ ಸೂಚಿಸಿ ಮಾತನಾಡಿದರು. ಕಾರ್ಗಿಲ್ ವರ್ಕರ್ಸ್ ಯೂನಿಯನ್ಅಧ್ಯಕ್ಷ ಸಂಜಯ್ ಜೆ, ಗೌರವಾಧ್ಯಕ್ಷ ಮಂಜುನಾಥ್ ಕೈದಾಳೆ, ಮಂಜುನಾಥ್, ಮಧು ತೊಗಲೇರಿ, ಮಂಜುನಾಥ್ ಕುಕ್ಕುವಾಡ ಸೇರಿದಂತೆ ನೂರಾರು ಕಾರ್ಮಿಕರು ಹಾಜರಿದ್ದರು.‌.‌

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...